ವಿಶ್ವಸಂಸ್ಥೆಯಲ್ಲಿ ಪದೇ, ಪದೇ ಯಾಕೆ ಪ್ರಸ್ತಾಪಿಸ್ತೀರಿ? ಚೀನಾಕ್ಕೆ ಭಾರತ ಖಡಕ್ ತಿರುಗೇಟು
ಗಡಿ ಭಯೋತ್ಪಾದನೆಯಿಂದ ಜಮ್ಮು ಕಾಶ್ಮೀರ ಸೇರಿದಂತೆ ಭಾರತದಲ್ಲಿ ನೆಲೆಸಿರುವವರಿಗೆ ತೊಂದರೆಯಾಗಲಿದೆ ಎಂದು ವಿವರಿಸಿದೆ.
Team Udayavani, Apr 10, 2020, 10:41 AM IST
ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಕಾಶ್ಮೀರದ ವಿಚಾರದ ಬಗ್ಗೆ ಚೀನಾ ಮತ್ತೆ ಧ್ವನಿ ಎತ್ತಿದೆ. ಆದರೆ ಚೀನಾದ
ವಾದವನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿರಸ್ಕರಿಸಿದ್ದು, ಜಮ್ಮು-ಕಾಶ್ಮೀರ ಭಾರತದ ಆಂತರಿಕ ವಿಚಾರ
ಎಂದು ಮತ್ತೊಮ್ಮೆ ತಿರುಗೇಟು ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆ ಪ್ರಕಾರ, ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ
ಸದಸ್ಯತ್ವ ಹೊಂದಿರುವ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ ವಕ್ತಾರ ವಿಶ್ವಸಂಸ್ಥೆಯಲ್ಲಿ ಜಮ್ಮು-ಕಾಶ್ಮೀರದ ಬಗ್ಗೆ ಎತ್ತಿರುವ ಪ್ರಸ್ತಾಪವನ್ನು
ನಾವು ತಿರಸ್ಕರಿಸುತ್ತೇವೆ. ಈ ವಿಚಾರದಲ್ಲಿ ಭಾರತ ಹೊಂದಿರುವ ನಿಲುವಿನ ಬಗ್ಗೆ ಚೀನಾಕ್ಕೆ ಅರಿವಿದೆ. ಜಮ್ಮು-ಕಾಶ್ಮೀರ
ಕೇಂದ್ರಾಡಳಿತ ಪ್ರದೇಶವಾಗಿದೆ, ಅಲ್ಲದೇ ಇದು ಭಾರತದ ಆಂತರಿಕ ಭಾಗವಾಗಿ ಮುಂದುವರಿಯಲಿದೆ. ಜಮ್ಮು-ಕಾಶ್ಮೀರಕ್ಕೆ
ಸಂಬಂಧಿಸಿದ ಯಾವುದೇ ಸಮಸ್ಯೆ ಭಾರತದ ಆಂತರಿಕ ವಿಚಾರವಾಗಿದೆ ಎಂದು ತಿಳಿಸಿದೆ.
ಗಡಿ ಭಯೋತ್ಪಾದನೆಯನ್ನು ಗುರುತಿಸಿ ಚೀನಾ ಖಂಡಿಸಿಬೇಕಾಗಿದೆ. ಗಡಿ ಭಯೋತ್ಪಾದನೆಯಿಂದ ಜಮ್ಮು ಕಾಶ್ಮೀರ ಸೇರಿದಂತೆ
ಭಾರತದಲ್ಲಿ ನೆಲೆಸಿರುವವರಿಗೆ ತೊಂದರೆಯಾಗಲಿದೆ ಎಂದು ವಿವರಿಸಿದೆ.
ಕಾಶ್ಮೀರದ ವಿಚಾರ ವಿಶ್ಚಸಂಸ್ಥೆಯಲ್ಲಿ ಅತೀ ಪ್ರಾಮುಖ್ಯತೆಯ ಚರ್ಚೆಯ ವಿಷಯವಾಗಬೇಕು ಎಂದು ಪಾಕಿಸ್ತಾನ ಮಾರ್ಚ್ 10ರಂದು
ಬರೆದಿರುವ ಪತ್ರದಲ್ಲಿ ತಿಳಿಸಿರುವುದಾಗಿ ಚೀನಾ ಹೇಳಿರುವುದಾಗಿ ವರದಿಯಾಗಿದೆ. ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಭಾರತದ
ನಿಲುವು ಅಚಲವಾಗಿದೆ. ವಿಶ್ವಸಂಸ್ಥೆಯಲ್ಲಿ ಪದೇ, ಪದೇ ಈ ವಿಷಯ ಪ್ರಸ್ತಾಪಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು
ಭಾರತ ತಿರುಗೇಟು ನೀಡಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ