ಪರ್ಲ್ ಹಾರ್ಬರ್ ಗುಂಡಿನ ದಾಳಿ: ಭಾರತೀಯ ವಾಯುಪಡೆ ಮುಖ್ಯಸ್ಥ ಭದೌರಿಯಾ ಸೇಫ್


Team Udayavani, Dec 5, 2019, 9:05 PM IST

Rakesh-Kumar-Singh-Bhadauria-730

ಹೊನಲುಲು: ಹವಾಯಿ ದ್ವೀಪದಲ್ಲಿರುವ ಅಮೆರಿಕಾದ ಸೇನಾ ನೆಲೆ ಪರ್ಲ್ ಹಾರ್ಬರ್ ನಲ್ಲಿ ಅಮೆರಿಕಾ ನೌಕಾ ದಳದ ನಾವಿಕನೊಬ್ಬ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟು ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ಸೇನಾ ಯೋಧರಿದ್ದ ಮೂರು ಕಡೆಗಳಲ್ಲಿ ಆರೋಪಿಯು ದಾಳಿ ಗುಂಡಿನ ದಾಳಿ ನಡೆಸಿದ ಬಳಿಕ ಆತ ತನ್ನನ್ನು ತಾನು ಶೂಟ್ ಮಾಡಿಕೊಂಡಿರುವುದಾಗಿ ಯುಎಸ್ ಮಿಲಿಟರಿ ಅಧಿಕಾರಿಗಳು ದೃಢಪಡಿಸಿದ್ದಾರೆ.

ಈ ಘಟನೆಯಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಅವರು ಸುರಕ್ಷಿತವಾಗಿರುವುದಾಗಿ ಭಾರತೀಯ ವಾಯುಪಡೆಯ ಮೂಲಗಳು ಖಚಿತಪಡಿಸಿವೆ. ಅಮೆರಿಕಾದ ಪೆಸಿಫಿಕ್ ಸಮುದ್ರ ರಾಜ್ಯವಾಗಿರುವ ಹವಾಯಿಯಲ್ಲಿರುವ ಐತಿಹಾಸಿಕ ಪರ್ಲ್ ಹಾರ್ಬರ್ – ಹಿಕ್ಯಾಮ್ ಜಂಟಿ ಸೇನಾ ನೆಲೆಯಲ್ಲಿ ಪೆಸಿಫಿಕ್ ಸಮುದ್ರ ತೀರದ 20 ರಾಷ್ಟ್ರಗಳ ವಾಯು ಸೇನಾ ಮುಖ್ಯಸ್ಥರ ಸಮಾವೇಶವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ಭದೌರಿಯಾ ಅವರು ತೆರಳಿದ್ದಾರೆ.

ಈ ಗುಂಡಿನ ದಾಳಿ ಘಟನೆಯ ಬಳಿಕ ಭದೌರಿಯಾ ಮತ್ತು ಅವರ ತಂಡದವರು ಸುರಕ್ಷಿತವಾಗಿದ್ದಾರೆ ಎಂದು ಭಾರತೀಯ ವಾಯುಪಡೆಯ ವಕ್ತಾರ ಗ್ರೂಪ್ ಕ್ಯಾಪ್ಟನ್ ಅನುಪಮ್ ಬ್ಯಾನರ್ಜಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

ಭದೌರಿಯಾ ಮತ್ತು ಅವರ ತಂಡವು ಪರ್ಲ್ ಹಾರ್ಬರ್ ನಲ್ಲಿರುವ ಯು.ಎಸ್. ವಾಯುನೆಲೆಯಲ್ಲಿದ್ದಾರೆ ಮತ್ತು ಈ ಗುಂಡಿನ ದಾಳಿ ಘಟನೆಯು ಜಂಟಿ ವಾಯುನೆಲೆಯ ನೌಕಾನೆಲೆ ಪ್ರದೇಶದಲ್ಲಿ ನಡೆದಿದೆ ಮತ್ತು ಈ ಎರಡೂ ಪ್ರದೇಶಗಳು ದೂರದಲ್ಲಿವೆ ಎಂಬ ಮಾಹಿತಿಯೂ ಇದೀಗ ಲಭಿಸಿದೆ.

ನೌಕಾ ನೆಲೆಯಲ್ಲಿ ಗುಂಡಿನ ದಾಳಿ ನಡೆದ ಬಳಿಕ ಸುಮಾರು ಎರಡು ಗಂಟೆಗಳವರೆಗೆ ಈ ವಾಯುನೆಲೆಯನ್ನು ಮುಚ್ಚಲಾಗಿತ್ತು ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ವಾಯುನೆಲೆಯ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಈ ಜಂಟಿ ಸೇನಾ ನೆಲೆ ಹವಾಯಿ ದ್ವೀಪದ ರಾಜಧಾನಿ ಹೊನಲುಲುವಿನಿಂದ ಹದಿಮೂರು ಕಿಲೋಮೀಟರ್ ಗಳಷ್ಟು ದೂರದಲ್ಲಿದೆ. ಪರ್ಲ್ ಹಾರ್ಬರ್ ನೌಕಾ ನೆಲೆ ಮತ್ತು ಹಿಕ್ಯಾಮ್ ವಾಯುನೆಲೆಯನ್ನು 2010ರಲ್ಲಿ ಜಂಟಿ ಸೇನಾ ನೆಲೆಗಳನ್ನಾಗಿ ವಿಲೀನಗೊಳಿಸಿ ಪರ್ಲ್ ಹಾರ್ಬರ್ – ಹಿಕ್ಯಾಮ್ ಸೇನಾ ನೆಲೆಗಳನ್ನಾಗಿ ರಚಿಸಲಾಗಿತ್ತು.

1941ರಲ್ಲಿ ಜಪಾನ್ ಯುದ್ಧ ವಿಮಾನಗಳು ವಾಯುದಾಳಿ ನಡೆಸಿ ಪರ್ಲ್ ಹಾರ್ಬರ್ ನಲ್ಲಿದ್ದ ಯುಎಸ್ ಬಾಂಬರ್ ಗಳನ್ನು ನಾಶಪಡಿಸಿದ್ದವು. ಇದರಿಂದ ಕೆರಳಿದ ಅಮೆರಿಕಾ ಜಪಾನ್ ಮೇಲೆ ಯುದ್ಧ ಸಾರುವ ಮೂಲಕ ದ್ವಿತೀಯ ವಿಶ್ವಯುದ್ಧಕ್ಕೆ ಅಧಿಕೃತವಾಗಿ ಪ್ರವೇಶಿಸಿತ್ತು. ಜಪಾನ್ ಆಕ್ರಮಣದ 78ನೇ ವರ್ಷಾಚರಣೆಯ ಒಂದು ದಿನ ಮುಂಚಿತವಾಗಿ ಈ ಜಂಟಿ ಸೇನಾ ನೆಲೆಯಲ್ಲಿ ಈ ಗುಂಡಿನ ದಾಳಿ ಘಟನೆ ನಡೆದಿದೆ.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.