![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಯುಎಸ್ನಲ್ಲಿ ಭಾರತೀಯ ಕುಟುಂಬ ನಾಪತ್ತೆ; ಇಬ್ಬರ ಶವ ನದಿಯಲ್ಲಿ!
Team Udayavani, Apr 17, 2018, 9:28 AM IST
![2556.jpg](https://www.udayavani.com/wp-content/uploads/2018/04/17/2556.jpg)
ವಾಷಿಂಗ್ಟನ್: ಅಮೆರಿಕದಲ್ಲಿ ನಾಲ್ವರು ಭಾರತೀಯರ ಕುಟುಂಬವೊಂದು ಕಳೆದ ವಾರ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ನದಿಯೊಂದರಲ್ಲಿ ಕಾರಿನಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ.
ವಾಷಿಂಗ್ಟನ್ ಪೋಸ್ಟ್ನ ವರದಿಯಂತೆ ಇಯೆಲ್ ನದಿಯಲ್ಲಿ ಇಬ್ಬರ ಶವ ಸುವ್ ಕಾರಿನಲ್ಲಿ ಪತ್ತೆಯಾಗಿದ್ದು, ತನಿಖೆ ವೇಳೆ ಶವಗಳು ಸಂದೀಪ್ ತೊಟ್ಟಿಪಿಲ್ಲಿ ಮತ್ತುಅವರ 9 ವರ್ಷದ ಪುತ್ರಿ ಸಾಚಿ ಯದ್ದು ಎಂದು ತಿಳಿದು ಬಂದಿದೆ.
ಒರೆಗಾನ್ದಿಂದ ಕ್ಯಾಲಿಫೋರ್ನಿಯಾಕ್ಕೆ ಎಸ್ಯುವಿ ( ಸ್ಫೋರ್ಟ್ ಯುಟಿಲಿಟಿ ವೆಹಿಕಲ್ )
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದೀಪ್ ತೊಟ್ಟಪಿಲ್ಲಿ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು. ಸಂದೀಪ್ ಮತ್ತು ಪುತ್ರಿಯ ಶವ ಪತ್ತೆಯಾಗುವ 2 ದಿನ ಮುನ್ನ ಪತ್ನಿ ಸೌಮ್ಯ ಶವವೂ ಪೊಲೀಸರಿಗೆ ಪತ್ತೆಯಾಗಿತ್ತು. ಆದರೆ ಪುತ್ರ ಸಿದ್ಧಾಂತ್ ಇನ್ನೂ ಎಲ್ಲಿದ್ದಾನೆ ಎನ್ನುವ ಕುರಿತು ತಿಳಿದು ಬಂದಿಲ್ಲ.
ನದಿಯಲ್ಲಿ ಬೋಟಿಂಗ್ ನಡೆಸುತ್ತಿದ್ದ ತಂಡದ ಸದಸ್ಯರು ಕಾರನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಶವಗಳನ್ನು ಮೇಲಕ್ಕೆತ್ತಲಾಗಿದೆ.
ಈ ಕುರಿತಾಗಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದು ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಸಂದೀಪ್ ಗುಜರಾತ್ನ ಸೂರತ್ನಲ್ಲಿ ಹುಟ್ಟಿ ಬೆಳೆದವರಾಗಿದ್ದು, ಅಮೆರಿಕದಲ್ಲಿ 15 ವರ್ಷಗಳಿಂದ ನೆಲೆಸಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.