ದುಬೈ: ಇಂಡಿಯನ್ ಸ್ಕೂಲ್ನ ಸಿಇಒ ಬದಲಾವಣೆ
Team Udayavani, Dec 13, 2019, 10:26 PM IST
ದುಬೈ: “ದ ಇಂಡಿಯನ್ ಸ್ಕೂಲ್ ದುಬೈ’ ತನ್ನ ಮುಖ್ಯಕಾರ್ಯ ನಿರ್ವಹಣಾಧಿಕಾರಿಯನ್ನು ಬದಲಾಯಿಸಿದೆ. ಈ ಹಿಂದೆ ಸಿಇಒ ಆಗಿ ಕೆಲಸ ನಿರ್ವಹಿಸುತ್ತಿದ್ದ ಅಶೋಕ್ ಕುಮಾರ್ ಅವರ ಬದಲು ಪುನೀತ್ ಎಂ.ಕೆ. ವಾಸು ಅವರನ್ನು ನೇಮಿಸಿ ಸಂಸ್ಥೆ ಆದೇಶ ಹೊರಡಿಸಿದೆ.
ತನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರನ್ನು ಬದಲಾಯಿಸಿದ ಸಂಸ್ಥೆ ಯಾವುದೇ ಕಾರಣವನ್ನು ನೀಡಿಲ್ಲ. ನೂತನ ಸಿಇಒ ಆಗಿ ಆಯ್ಕೆಯಾದ ಎಂ.ಕೆ. ವಾಸು ಅವರು ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿದ್ದಾರೆ. ದುಬೈನಲ್ಲಿ ನೆಲೆಸಿರುವ ಭಾರತೀಯ ಮೂಲದ ಅತೀ ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಯಾಗಿರುವ ಕುಮಾರ್ ಅವರು 23 ವರ್ಷಗಳಿಂದ “ದ ಇಂಡಿಯನ್ ಸ್ಕೂಲ್ ಇನ್ ದುಬೈ’ ಇದರ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು.
ಇವರು ಪ್ರಶಸ್ತಿ ಪುರಸ್ಕೃತ ಶಿಕ್ಷಣ ತಜ್ಞರಾಗಿದ್ದು, ಹಲವು ಪಠ್ಯ ಪುಸ್ತಗಳು ಹಾಗೂ ಪುಸ್ತಕಗಳನ್ನು ಬರೆದಿದ್ದಾರೆ. ಮಾತ್ರವಲ್ಲದೆ ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಇವರು ತಮ್ಮ ಜೀವನ ಶ್ರೇಷ್ಠ ಸಾಧನೆಗಾಗಿ 2019ರ ಎಉಖಖ ಉಛucಚಠಿಜಿಟn ಅಡಿಚrಛ ಪುರಸ್ಕಾರವನ್ನು ಪಡೆದಿದ್ದರು.
ದುಬೈ ಇಂಡಿಯನ್ ಸ್ಕೂಲ್ಗೆ ಶಿಕ್ಷಕರನ್ನು ಭಾರತದಿಂದಲೇ ಆಯ್ಕೆಮಾಡಲಾಗುತ್ತದೆ. ಇಲ್ಲಿ ಭಾರತೀಯ ಮೂಲದ ಶಿಕ್ಷಕರನ್ನೇ ಹೆಚ್ಚು ಬಳಸಿಕೊಳ್ಳಲಾಗುತ್ತದೆ. ಸಂಸ್ಥೆಯಲ್ಲಿರುವವರಲ್ಲಿ ಬಹುತೇಕರು ಭಾರತೀಯರೆ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ