ದುಬೈ: ಮೂವರು ಪಾಕಿಸ್ತಾನಿ ದರೋಡೆಕೋರರಿಂದ ಭಾರತೀಯ ವ್ಯಕ್ತಿ ಮೇಲೆ ಹಲ್ಲೆ, ಹಣ ದೋಚಿ ಪರಾರಿ
ಗಸ್ತು ತಿರುಗುತ್ತಿದ್ದ ಪೊಲೀಸರ ಕೈಗೆ ಒಬ್ಬಾತ ಸಿಕ್ಕಿಬಿದ್ದಿದ್ದು, ಇನ್ನುಳಿದ ಇಬ್ಬರು ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ.
Team Udayavani, Nov 23, 2020, 4:59 PM IST
Representative Image
ದುಬೈ:ದುಬೈನಲ್ಲಿ ನೆಲೆಸಿದ್ದ 33 ವರ್ಷದ ಭಾರತೀಯ ವ್ಯಕ್ತಿಯೊಬ್ಬರ ಮೇಲೆ ಮೂವರು ಮುಸುಧಾರಿ ಪಾಕಿಸ್ತಾನಿ ದರೋಡೆಕೋರರು ದಾಳಿ ನಡೆಸಿ, ಲ್ಯಾಪ್ ಟಾಪ್, ಮೊಬೈಲ್ ಫೋನ್ ಹಾಗೂ ನಗದು ಹಣದೊಂದಿಗೆ ಪರಾರಿಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಭಾನುವಾರ ದುಬೈ ನ್ಯಾಯಾಲದಲ್ಲಿ ವಿಚಾರಣೆ ನಡೆದ ಸಂದರ್ಭದಲ್ಲಿ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ ತಿಂಗಳಿನಲ್ಲಿ ತಾನು ದುಬೈನ ಬುರ್ ಪ್ರದೇಶದಲ್ಲಿನ ಮನೆಯಲ್ಲಿ ಮಲಗಿದ್ದ ವೇಳೆ ಮೂವರು ಪಾಕಿಸ್ತಾನಿಯರು ಬಾಗಿಲು ಮುರಿದು ಒಳ ನುಗ್ಗಿ ಈ ಕೃತ್ಯ ಎಸಗಿರುವುದಾಗಿ ಭಾರತೀಯ ವ್ಯಕ್ತಿ ತಿಳಿಸಿದ್ದಾರೆ.
ಕಬ್ಬಿಣದ ಸಲಾಕೆಯಿಂದ ಭಾರತೀಯ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಲ್ಯಾಪ್ ಟಾಪ್, ಹಣ, ವಸ್ತುಗಳನ್ನು ದೋಚಿಕೊಂಡು ಹೋಗಿರುವುದಾಗಿ ಗಲ್ಫ್ ನ್ಯೂಸ್ ವರದಿ ಮಾಡಿದೆ. ದರೋಡೆಕೋರರು ತನ್ನ ಮುಖವನ್ನು ಪ್ಲಾಸ್ಟಿಕ್ ಬ್ಯಾಗ್ ನಿಂದ್ ಮುಚ್ಚಿ ಬಾಯಿಗೆ ಗಮ್ ಟೇಪ್ ಹಾಕಿರುವುದಾಗಿ ವಿವರಿಸಿದ್ದಾರೆ.
ನನ್ನ ಮುಖಕ್ಕೆ ಪ್ಲಾಸ್ಟಿಕ್ ನಿಂದ ಬಿಗಿಯುವ ವೇಳೆ ನಾನು ತೀವ್ರವಾಗಿ ಪ್ರತಿರೋಧಿಸಿದ್ದೆ. ಈ ಸಂದರ್ಭದಲ್ಲಿ ಒಬ್ಬ ದರೋಡೆಕೋರನ ಮಾಸ್ಕ್ ಅನ್ನು ಹಿಡಿದು ಎಳೆದ ಪರಿಣಾಮ ನಾನು ಆತನ ಮುಖ ಗಮನಿಸಿದ್ದೆ ಎಂದು ಭಾರತೀಯ ವ್ಯಕ್ತಿ ಕೋರ್ಟ್ ವಿಚಾರಣೆ ವೇಳೆ ತಿಳಿಸಿದ್ದಾರೆ.
ಕೊನೆಗೆ ಪ್ಲಾಸ್ಟಿಕ್ ಬ್ಯಾಗ್ ಮತ್ತು ಬಾಯಿಗೆ ಅಂಟಿಸಿದ್ದ ಗಮ್ ಟೇಪ್ ತೆಗೆದು, ಕೋಣೆಯಿಂದ ಹೊರಗೆ ಬಂದು, ನಾನು ನನ್ನ ರೂಂಮೇಟ್ ಹತ್ತಿರ ಹೋಗಿ ಮೂವರನ್ನು ಹಿಡಿಯಲು ಬೆನ್ನಟ್ಟಿ ಹೋಗಿದ್ದೇವು. ಈ ವೇಳೆ ಗಸ್ತು ತಿರುಗುತ್ತಿದ್ದ ಪೊಲೀಸರ ಕೈಗೆ ಒಬ್ಬಾತ ಸಿಕ್ಕಿಬಿದ್ದಿದ್ದು, ಇನ್ನುಳಿದ ಇಬ್ಬರು ಪರಾರಿಯಾಗಿರುವುದಾಗಿ ವರದಿ ತಿಳಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆ ಡಿಸೆಂಬರ್ 9ಕ್ಕೆ ನಡೆಯಲಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ