ಸಿಡ್ನಿ ರೈಲು ನಿಲ್ದಾಣದಲ್ಲಿ ಭಾರತೀಯ ಮೂಲದ ವ್ಯಕ್ತಿಯ ಮೇಲೆ ಪೊಲೀಸರ ಗುಂಡಿನ ದಾಳಿ
Team Udayavani, Mar 1, 2023, 8:45 AM IST
ಸಿಡ್ನಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಭಾರತೀಯ ಮೂಲದ ವ್ಯಕ್ತಿಯೋರ್ವನ ಮೇಲೆ ಸ್ಥಳೀಯ ಪೊಲೀಸರು ಗುಂಡು ಹಾರಿಸಿದ್ದು, ಆತ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.
ಮೃತ ಯುವಕನನ್ನು 32 ವರ್ಷದ ಮೊಹಮ್ಮದ್ ರಹಮತುಲ್ಲಾ ಸೈಯದ್ ಅಹಮದ್ ಎಂದು ಗುರುತಿಸಲಾಗಿದೆ. ಈತ ತಮಿಳುನಾಡಿನವನೆಂದು ತಿಳಿದು ಬಂದಿದೆ.
ರೈಲು ನಿಲ್ದಾಣದ ಕ್ಲೀನರ್ ಗೆ ಚುಚ್ಚಿದ ಮತ್ತು ಪೊಲೀಸ್ ಅಧಿಕಾರಿಗೆ ಬೆದರಿಕೆಯೊಡ್ಡಿದ ಕಾರಣ ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಲಾಗಿದೆ.
ಇದನ್ನೂ ಓದಿ:ಶಿಯೊಮಿ 13 ಪ್ರೊ ಬಿಡುಗಡೆ; 4,820 ಎಂಎಎಚ್ ಬ್ಯಾಟರಿ ಸಾಮರ್ಥ್ಯ
ಪೊಲೀಸ್ ಠಾಣೆಯಿಂದ ಹೊರಬರುತ್ತಿದ್ದ ಇಬ್ಬರು ಪೊಲೀಸ್ ಅಧಿಕಾರಿಗಳು ಅಹ್ಮದ್ ಗೆ ಎದುರಾದರು, ನಂತರ ಅವರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು ಎಂದು ವರದಿ ತಿಳಿಸಿದೆ.
ಒಬ್ಬ ಪೊಲೀಸ್ ಅಧಿಕಾರಿ ಮೂರು ಗುಂಡುಗಳನ್ನು ಹಾರಿಸಿದರು, ಅದರಲ್ಲಿ ಎರಡು ಅಹ್ಮದ್ ಅವರ ಎದೆಗೆ ಹೊಡೆಯಿತು ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ