ರೋಗಿಗಳಿಗೆ ಕ್ಯಾನ್ಸರ್ ಭಯತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ವೈದ್ಯ ಮಹಾಶಯ!


Team Udayavani, Dec 11, 2019, 12:41 PM IST

Bad-Doctor-11-12

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಂಡನ್: ವೈದ್ಯರ ಬಳಿಯಲ್ಲಿ ಹಾಗೂ ವಕೀಲರ ಬಳಿಯಲ್ಲಿ ನಾವು ಯಾವುದೇ ವಿಷಯಗಳನ್ನು ಮುಚ್ಚಿಡಬಾರದು ಎಂಬ ಮಾತೊಂದಿದೆ. ಹಾಗಾಗಿಯೇ ರೋಗಿಗಳು ತಾವು ವೈದ್ಯರಲ್ಲಿಗೆ ಹೋದಾಗ ಎಲ್ಲಾ ವಿಚಾರಗಳನ್ನು ಅವರಿಗೆ ತಿಳಿಸುತ್ತಾರೆ ಮತ್ತು ಅವರು ಮಾಡುವ ಎಲ್ಲಾ ಪರೀಕ್ಷೆಗಳಿಗೂ ಸಮ್ಮತಿಯನ್ನು ಸೂಚಿಸುತ್ತಾರೆ.

ಆದರೆ ಇಲ್ಲೊಬ್ಬ ವೈದ್ಯ ತನ್ನ ಬಳಿಗೆ ಬರುತ್ತಿದ್ದ ರೋಗಿಗಳ ಇದೇ ಮನಸ್ಥಿತಿಯನ್ನು ದುರುಪಯೋಗಪಡಿಸಿಕೊಂಡು ಅವರಿಗೆ ಲೈಂಗಿಕ ಕಿರುಕುಳ ನೀಡಿ ಇದೀಗ ವಿಚಾರಣೆಯನ್ನು ಎದುರಿಸುತ್ತಿರುವ ಘಟನೆ ಇಂಗ್ಲಂಡ್ ದೇಶದಲ್ಲಿ ನಡೆದಿದೆ. ಆದರೆ ವಿಚಿತ್ರವೆಂದರೆ ಇಂಗ್ಲಂಡ್ ನಲ್ಲಿ ಈ ರೀತಿಯ ಕೃತ್ಯ ಎಸಗಿರುವ ವ್ಯಕ್ತಿ ಭಾರತೀಯ ಮೂಲದವನೆಂಬುದೇ ಖೇದಕರ ಸಂಗತಿ.

ಪೂರ್ವ ಲಂಡನ್ ನ ಮೇವ್ನೇ ಮೆಡಿಕಲ್ ಸೆಂಟರ್ ನಲ್ಲಿ ವೈದ್ಯಕೀಯ ವೃತ್ತಿಯನ್ನು ನಿರ್ವಹಿಸುತ್ತಿದ್ದ ಮನೀಶ್ ಶಾ ಎಂಬಾತನೇ ತನ್ನಲ್ಲಿಗೆ ಬರುತ್ತಿದ್ದ ಮಹಿಳಾ ರೋಗಿಗಳ ಕ್ಯಾನ್ಸರ್ ಭಯವನ್ನೇ ದುರುಪಯೋಗಪಡಿಸಿಕೊಂಡು ಅವರನ್ನು ಲೈಂಗಿಕ ಕಿರುಕುಳಕ್ಕೊಳಪಡಿಸುತ್ತಿದ್ದ ಎಂದು ಆರೋಪಿಸಲಾಗಿದೆ. 2009 ರಿಂದ 2013ರವರೆಗೆ ಮನೀಶ್ ಶಾ ಸುಮಾರು 23 ಮಹಿಳಾ ರೋಗಿಗಳನ್ನು ಈ ರೀತಿಯಾಗಿ ಲೈಂಗಿಕ ಶೋಷಣೆಗೆ ಒಳಪಡಿಸಿರುವ ಆರೋಪ ಇದೀಗ ಇಲ್ಲಿನ ಓಲ್ಡ್ ಬೈಲೀ ನ್ಯಾಯಾಲಯದಲ್ಲಿ ಸಾಬೀತಾಗಿದೆ.

ತನ್ನಲ್ಲಿಗೆ ತಪಾಸಣೆಗೆಂದು ಬರುತ್ತಿದ್ದ ಮಹಿಳಾ ರೋಗಿಗಳು ತಮ್ಮ ಸ್ತನ ಪರಿಕ್ಷೆಯನ್ನು ನಡೆಸುವಂತೆ ಅವರ ಮನವೊಲಿಸಲು ಶಾ ಹಾಲಿವುಡ್ ನಟಿಯರು ಮ್ಯಾಸ್ಟೆಕ್ಟಮಿ ಮಾಡಿಸಿಕೊಂಡಿರುವ ಸುದ್ದಿಯನ್ನು ಅವರಿಗೆ ವಿವರಿಸಿ ಬಳಿಕ ಅವರ ಸ್ತನ ಪರೀಕ್ಷೆ ನಡೆಸುವ ನೆಪದಲ್ಲಿ ಅವರಿಗೆ ಕಿರುಕುಳ ನೀಡುತ್ತಿದ್ದ ಎಂಬ ವಿಚಾರವೂ ಸಹ ನ್ಯಾಯಾಲಯದಲ್ಲಿ ವಿಚಾರಣೆಯ ವೇಳೆ ಬಹಿರಂಗಗೊಂಡಿದೆ.

ಇದೇ ರೀತಿಯಲ್ಲಿ ಮಹಿಳೆಯರ ಗುಪ್ತಾಂಗ ಪರೀಕ್ಷೆಯ ನೆಪದಲ್ಲಿಯೂ ಸಹ ಮನೀಶ್ ಶಾ ಇದೇ ರೀತಿಯ ತಂತ್ರವನ್ನು ಬಳಸುತ್ತಿದ್ದ ಅಂಶವೂ ವಿಚಾರಣೆಯ ಸಂದರ್ಭದಲ್ಲಿ ಹೊರಬಿದ್ದಿದೆ. ಅಗತ್ಯವಿಲ್ಲದಿದ್ದರೂ ಮನೀಶ್ ಶಾ ತನ್ನ ವೃತ್ತಿಯ ಲಾಭವನ್ನು ಪಡೆದುಕೊಂಡು ತನ್ನಲ್ಲಿಗೆ ಬರುತ್ತಿದ್ದ ಮಹಿಳಾ ರೋಗಿಗಳ ಸ್ತನ, ಗುಪ್ತಾಂಗ ಮತ್ತು ಗುದದ್ವಾರ ಪರೀಕ್ಷೆಗಳನ್ನು ನಡೆಸುವ ನೆಪದಲ್ಲಿ ಅವರೊಂದಿಗೆ ಲೈಂಗಿಕವಾಗಿ ಅನುಚಿತ ರೀತಿಯಲ್ಲಿ ವರ್ತಿಸುತ್ತಿದ್ದ ಎಂದು ದೂರುದಾರರ ಪರ ವಕೀಲ ಕೇಟ್ ಬೆಕ್ಸ್ ನ್ಯಾಯಾಲಯದಲ್ಲಿ ತಮ್ಮ ವಾದ ಮಂಡನೆಯಲ್ಲಿ ಹೇಳಿಕೊಂಡಿದ್ದಾರೆ.

ಆದರೆ ತನ್ನ ಮೇಲಿನ ಈ ಎಲ್ಲಾ ಆರೋಪಗಳನ್ನು ವೈದ್ಯ ಮನೀಶ್ ಶಾ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಮನೀಶ್ ಶಾ ಅವರು ವೈದ್ಯಕೀಯ ವೃತ್ತಿಯನ್ನು ಮುಂದುವರಿಸದಂತೆ ಅವರ ಮೇಲೆ 2013ರಲ್ಲೇ ನಿರ್ಬಂಧ ವಿಧಿಸಲಾಗಿತ್ತು. ನ್ಯಾಯಾಧೀಶ ಆ್ಯನ್ನೆ ಮೊಲಿನೆಕ್ಸ್ ಅವರು ವಿಚಾರಣೆಯ ತೀರ್ಪನ್ನು 2020ರ ಫೆಬ್ರವರಿ 07ಕ್ಕೆ ಕಾಯ್ದಿರಿಸಿದ್ದಾರೆ.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.