ಸುಳ್ಳು ಸುದ್ದಿ ಪತ್ತೆಗೆ ಮೈಸೂರಿನ ಟೆಕ್ಕಿಯ ಲಾಜಿಕಲಿ ಟೂಲ್‌


Team Udayavani, Jul 23, 2018, 6:00 AM IST

lyric-jain.jpg

ಲಂಡನ್‌: ಜಗತ್ತಿನಾದ್ಯಂತ ಈಗ ಸುಳ್ಳು ಸುದ್ದಿಗಳದ್ದೇ ಸುದ್ದಿ. ಸರ್ಕಾರಗಳು, ನ್ಯಾಯಾಲಯಗಳು, ಸಾಮಾಜಿಕ ಜಾಲತಾಣಗಳು ಈ ಫೇಕ್‌ನ್ಯೂಸ್ಗಳ ಹಿಂದೆ ಬಿದ್ದಿದ್ದು, ಅವುಗಳ ತಡೆಗೆ ಹರಸಾಹಸ ಪಡುತ್ತಿವೆ. ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುವ ಸಂದೇಶಗಳ ಪೈಕಿ ನಿಜ ಯಾವುದು ಹಾಗೂ ಸುಳ್ಳು ಯಾವುದು ಎಂಬುದನ್ನು ಪತ್ತೆ ಮಾಡುವುದೇ ಒಂದು ದೊಡ್ಡ ಸವಾಲಿನ ಸಂಗತಿಯಾಗಿರುವ ಇಂಥ ಸನ್ನಿವೇಶದಲ್ಲೇ ಮೈಸೂರು ಮೂಲದ ಲಿರಿಕ್‌ ಜೈನ್‌ ಇಂಗ್ಲೆಂಡ್‌ನ‌ಲ್ಲಿ ವಿನೂತನ ಸ್ಟಾರ್ಟಪ್‌ವೊಂದನ್ನು ಸ್ಥಾಪಿಸಿದ್ದಾರೆ.

ತಂತ್ರಜ್ಞಾನವನ್ನು ಬಳಸಿಕೊಂಡು ಸುದ್ದಿಗಳಲ್ಲಿರುವ ಸುಳ್ಳನ್ನು ಪತ್ತೆ ಮಾಡುವ ಕೆಲಸವನ್ನು ಈ ನವೋದ್ಯಮ ಮಾಡಲಿದೆ. ಕೇಂಬ್ರಿಜ್‌ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರುವ ಲಿರಿಕ್‌ ಜೈನ್‌, “ಮಶಿನ್‌ ಲರ್ನಿಂಗ್‌ ಅಲ್ಗೊರಿದಂ’ ಅನ್ನು ಬಳಸಿ ಲಾಜಿಕಲಿ ಎಂಬ ಟೂಲ್‌ ಸಿದ್ಧಪಡಿಸಿದ್ದಾರೆ.ಇದನ್ನು ಅಮೆರಿಕ ಹಾಗೂ ಇಂಗ್ಲೆಂಡ್‌ನ‌ಲ್ಲಿ ಸೆಪ್ಟೆಂಬರ್‌ನಲ್ಲಿ ಪರಿಚಯಿಸಲಾಗುತ್ತಿದ್ದು, ಭಾರತದಲ್ಲಿ ಅಕ್ಟೋಬರ್‌ ವೇಳೆಗೆ ಅನಾವರಣಗೊಳ್ಳಲಿದೆ.

ಮಾನವ ಹಸ್ತಕ್ಷೇಪ ಇರಲ್ಲ:
ಸುಮಾರು 70 ಸಾವಿರ ಡೊಮೇನ್‌ಗಳಿಂದ ಸುದ್ದಿಗಳನ್ನು ಗ್ರಹಿಸುವ ಲಾಜಿಕಲಿ ಪ್ಲಾಟ್‌ಫಾರಂ, ಪ್ರತಿ ಲೇಖನದಲ್ಲಿರುವ ಎಲ್ಲ ಮಾಹಿತಿಯನ್ನೂ ಪರಿಶೀಲಿಸುತ್ತದೆ. ಇದರಲ್ಲಿ ಇರಬಹುದಾದ ತಪ್ಪುಗಳನ್ನು ಈ ಪ್ಲಾಟ್‌ಫಾರಂ ಕಂಡುಹಿಡಿಯಲಿದೆ. ಇದರಿಂದ ಜನರು ಈ ಸುದ್ದಿ ವಿಶ್ವಾಸಾರ್ಹವೇ ಎಂಬುದನ್ನು ತಕ್ಷಣ ಅರಿಯಬಹುದು. ಈ ರೀತಿಯ ಸಂಗತಿಗಳನ್ನು ಕಂಡುಕೊಳ್ಳಲೆಂದೇ ಮಶಿನ್‌ ಲರ್ನಿಂಗ್‌ ಅಲ್ಗೊರಿದಂ ವಿನ್ಯಾಸಗೊಳಿಸಲಾಗಿದೆ. ಅಲ್ಲದೆ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌(ಕೃತಕ ಬುದ್ಧಿಮತ್ತೆ) ಕೂಡ ಇಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಇಲ್ಲಿ ಯಾವುದೇ ಮಾನವ ಹಸ್ತಕ್ಷೇಪ ಇರುವುದಿಲ್ಲ. ಅಲ್ಲದೆ ಲಕ್ಷಾಂತರ ಸುದ್ದಿಗಳು ಪ್ರತಿನಿತ್ಯ ಜನರೇಟ್‌ ಆಗುವುದರಿಂದ ಇವುಗಳಲ್ಲಿ ಎಷ್ಟು ಸರಿ, ಎಷ್ಟು ತಪ್ಪು ಎಂಬುದನ್ನು ಕಂಡುಕೊಳ್ಳುವುದು ಮ್ಯಾನ್ಯುಅಲ್‌ ವಿಧಾನದಲ್ಲಿ ಸಾಧ್ಯವಿಲ್ಲ.

10 ಕೋಟಿ ರೂ. ಬಂಡವಾಳ:
ಲಾಜಿಕಲಿ ವಿವಿಧ ತಾಂತ್ರಿಕ ವಿಶ್ವವಿದ್ಯಾಲಯಗಳ ಪದವೀಧರರನ್ನು ನೇಮಿಸಿಕೊಂಡಿದ್ದು, 10 ಕೋಟಿ ರೂ. ಬಂಡವಾಳವನ್ನೂ ಹೂಡಿಕೆ ಮಾಡಲಾಗಿದೆ. ಅಮೆರಿಕ, ಇಂಗ್ಲೆಂಡ್‌ ಹಾಗೂ ಭಾರತದಲ್ಲಿನ ಕಚೇರಿಯಲ್ಲಿ ಒಟ್ಟು 38 ಜನರು ಕೆಲಸ ಮಾಡುತ್ತಿದ್ದು, ಶೀಘ್ರದಲ್ಲೇ ಉದ್ಯೋಗಿಗಳ ಸಂಖ್ಯೆ ದುಪ್ಪಟ್ಟಾಗಲಿದೆ. ಈ ತಂತ್ರಜ್ಞಾನವು ಪ್ರಾಯೋಗಿಕ ಪರೀಕ್ಷೆಯಲ್ಲಿ ಪಾಸ್‌ ಆದರೆ, ಫೇಕ್‌ ನ್ಯೂಸ್‌ಗಳಿಗೆ ಬ್ರೇಕ್‌ ಹಾಕುವುದು ಸುಲಭವಾಗಲಿದೆ.

ಸಂಕೀರ್ಣ ಹಾಗೂ ಗೊಂದಲಕಾರಿ ಮಾಹಿತಿಯನ್ನು ಅರ್ಥ ಮಾಡಿಕೊಂಡು ಅದರಲ್ಲಿರುವ ವಾಸ್ತವ ಮತ್ತು ಸುಳ್ಳನ್ನು ಬೇರ್ಪಡಿಸಲು ನಮ್ಮ ತಂತ್ರಜ್ಞಾನ ನೆರವಾಗಲಿದೆ. ಇದೆಲ್ಲದರಾಚೆಗೆ ತಪ್ಪು ಮಾಹಿತಿಯಿಂದಾಗುವ ನಿಜವಾದ ಅಪಾಯಗಳ ಬಗ್ಗೆ ಜನರಿಗೆ ಸರ್ಕಾರವೂ ಅರಿವು ಮೂಡಿಸಬೇಕಿದೆ.
– ಲಿರಿಕ್‌ ಜೈನ್‌, ಲಾಜಿಕಲಿ ಸಂಸ್ಥಾಪಕ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.