ಮಾರಕ ಕೊರೊನಾ: ವುಹಾನ್ ನಲ್ಲಿ ಆಹಾರಕ್ಕಾಗಿ ಅಂಗಲಾಚುತ್ತಿದ್ದಾರೆ ಭಾರತೀಯ ವಿದ್ಯಾರ್ಥಿಗಳು
Team Udayavani, Jan 29, 2020, 9:59 AM IST
ಬೀಜಿಂಗ್: ಮಾರಾಣಾಂತಿಕ ಕೊರೊನಾ ವೈರಸ್ ಗೆ ಚೀನಾ ಅಕ್ಷರಶಃ ತತ್ತರಿಸಿದೆ. ದಿನಕಳೆದಂತೆ ಈ ಮಾರಾಣಾಂತಿಕ ವೈರಸ್ ಗೆ ಬಲಿಯಾದವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೇ ವೇಳೆ ಚೀನಾದ ವುಹಾನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು ಅನ್ನ ಆಹಾರವಿಲ್ಲದೆ ನರಳುತ್ತಿದ್ದಾರೆ.
ಈ ಮಾರಣಾಂತಿಕ ವೈರಸ್ ಮೊದಲು ಪತ್ತೆಯಾದ ಹುಬೇ ಪ್ರಾಂತ್ಯದ ವುಹಾನ್ ನಗರ ಈಗ ಸ್ಮಶಾನದಂತಾಗಿದೆ. ಸದಾ ಜನರಿಂದ ತುಂಬುತ್ತಿದ್ದ ವುಹಾನ್ ನಗರ ಈಗ ಖಾಲಿ ಖಾಲಿಯಾಗಿದೆ. ರಸ್ತೆಯಲ್ಲಿ ಯಾರೂ ಒಡಾಡುವಂತಿಲ್ಲ.
ಕೊರೊನಾ ವೈರಸ್ ಹಬ್ಬುತ್ತಿರುವ ಕಾರಣ ಯಾರೂ ಹೊರಗೆ ಬರದಂತೆ ಆದೇಶಿಸಲಾಗಿದೆ. ಕೆಲ ದಿನಗಳಿಂದ ನಾವು ಕ್ಯಾಂಪಸ್ ಒಳಗೆ ಇದ್ದೇವೆ. ಅಗತ್ಯ ವಸ್ತುಗಳನ್ನು ಕೊಳ್ಳಲು ದಿನದಲ್ಲಿ ಕೇವಲ ಎರಡು ಗಂಟೆಗಳ ಕಾಲ ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ನಗರದಲ್ಲಿ ಎಲ್ಲಾ ಅಂಗಡಿಗಳು ಮುಚ್ಚಲಾಗಿದೆ. ಹಾಗಾಗಿ ವಸ್ತುಗಳು ಕಡಿಮೆಯಾಗುತ್ತಿವೆ. ಇದೇ ರೀತಿ ಮುಂದುವರಿದರೆ ನಾವು ಆಹಾರ ಮತ್ತು ನೀರು ಕೂಡಾ ಸಿಗುವುದಿಲ್ಲ ಎಮದು ಭಾರತೀಯ ಮೂಲದ ವಿದ್ಯಾರ್ಥಿ ಗೌರವ್ ನಾಥ್ ಸುದ್ದಿವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದಾರೆ.
22 ವರ್ಷದ ಗೌರವ್ ನಾಥ್ ವುಹಾನ್ ವಿಶ್ವವಿದ್ಯಾಲಯದಲ್ಲಿ ಮೆಟೀರಿಯಲ್ ಸೈಯನ್ಸ್ ಮತ್ತು ಇಂಜಿನಿಯರಿಂಗ್ ಓದುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್