ಪಬ್ಲಿಕ್ ಟ್ರಾನ್ಸ್ ಪೋರ್ಟ್ ಅಂದ್ರೆ ಭಾರತೀಯರಿಗೆ ಅಲರ್ಜಿ!

ಭಾರತ, ಚೀನಾ ಸೇರಿದಂತೆ ಏಷ್ಯಾದ ರಾಷ್ಟ್ರಗಳಲ್ಲಿ ಸಾರ್ವಜನಿಕ ಸಾರಿಗೆ ಬಳಕೆ ಕುರಿತಾದಂತೆ ಜನರಿಗೆ ಒಲವಿಲ್ಲ ಎಂದ ಅಧ್ಯಯನ ವರದಿ!

Team Udayavani, May 9, 2019, 5:00 PM IST

Public-Transport-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ.

ಮೆಲ್ಬೋರ್ನ್: ಭಾರತೀಯರು ಸಾರ್ವಜನಿಕ ಸಾರಿಗೆಯನ್ನು ತಮ್ಮ ಪ್ರಮುಖ ಸಂಚಾರ ಮಾಧ್ಯಮವಾಗಿ ಬಳಸಿಕೊಳ್ಳುತ್ತಿಲ್ಲ ಮತ್ತು ಹೆಚ್ಚಿನ ಸಂದರ್ಭಗಳಲ್ಲಿ ಖಾಸಗಿ ಸಾರಿಗೆ ವ್ಯವಸ್ಥೆಯನ್ನೇ ಹೆಚ್ಚೆಚ್ಚು ಅವಲಂಬಿಸಿದ್ದಾರೆಎನ್ನುವ ಮಾತಿಗೆ ಪುಷ್ಠಿ ನೀಡುವ ಅಧ್ಯಯನ ವರದಿಯೊಂದು ಇದೀಗ ಹೊರಬಿದ್ದಿದೆ.

ಭಾರತ ಮಾತ್ರವಲ್ಲದೇ ಚೀನಾ ಸೇರಿದಂತೆ ಏಷ್ಯಾದ ಬಹುತೇಕ ರಾಷ್ಟ್ರಗಳ ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕುರಿತಾಗಿ ನಿರ್ಲಿಪ್ತ ಭಾವನೆ ಹೊಂದಿದ್ದಾರೆ ಎಂಬ ಅಂಶ ಈ ಅಧ್ಯಯನದಿಂದ ಬಹಿರಂಗವಾಗಿದೆ.

ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕುರಿತಾಗಿ ಜನರಲ್ಲಿ ಇರಬಹುದಾದ ಈ ಭಾವನೆಯನ್ನು ಹೋಗಲಾಡಿಸಲು ನಗರ ಯೋಜನೆ ರೂಪಕರು ಗಂಭೀರವಾಗಿ ಚಿಂತಿಸಬೇಕಾದ ಅಗತ್ಯತೆಯನ್ನೂ ಸಹ ಈ ಅಧ್ಯಯನವು ಬಲವಾಗಿ ಪ್ರತಿಪಾದಿಸಿದೆ.

‘ಟ್ರಾನ್ಸ್ ಪೋರ್ಟ್ ಜಿಯೋಗ್ರಾಫಿ’ ಎಂಬ ಪತ್ರಿಕೆಯೊಂದರಲ್ಲಿ ಈ ಅಧ್ಯಯನ ವರದಿ ಪ್ರಕಟಗೊಂಡಿದೆ. ಇದರ ಪ್ರಕಾರ ಭಾರತ ಮತ್ತು ಚೀನಾದ ಜನರಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕುರಿತಾದಂತೆ ಬಲವಾದ ನೆಗೆಟಿವ್ ಭಾವನೆ ಬೇರುಬಿಟ್ಟಿದೆ.

ಇಂಗ್ಲಂಡ್ ಮತ್ತು ಉತ್ತರ ಯುರೋಪಿಯನ್ ದೇಶಗಳಲ್ಲಿ ಶ್ರೀಮಂತ ವರ್ಗದ ಬಹುಸಂಖ್ಯೆಯ ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನೇ ತಮ್ಮ ಪ್ರಯಾಣ ಮೂಲವನ್ನಾಗಿ ಮಾಡಿಕೊಂಡಿರುತ್ತಾರೆ. ತಮ್ಮದೇ ಆದ ಸ್ವಂತ ವಾಹನಗಳನ್ನು ಬಳಸುವ ಸಾಮರ್ಥ್ಯ ಮತ್ತು ಸಾಧ್ಯತೆ ಅವರಿಗಿದ್ದರೂ ಸಹ ಆ ದೇಶಗಳ ಜನರಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕುರಿತಾಗಿ ಉತ್ತಮ ಅಭಿಪ್ರಾಯವಿದೆ ಎಂಬುದು ಈ ಅಧ್ಯಯನ ವರದಿಯಲ್ಲಿ ಉಲ್ಲೇಖಗೊಂಡಿದೆ.

ಆದರೆ ಇದಕ್ಕೆ ವ್ಯತಿರಿಕ್ತವಾಗಿ ಭಾರತ ಮತ್ತು ಚೀನಾದಲ್ಲಿ ಇನ್ನೂ ಸ್ವಂತ ವಾಹನದ ಮಾಲಿಕರಲ್ಲದ ವೃತ್ತಿಪರರು ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸಂಬಂ‍ಧಿಸಿದಂತೆ ಬಹಳ ನೆಗೆಟಿವ್ ಅಭಿಪ್ರಾಯವನ್ನೇ ಹೊಂದಿದ್ದಾರೆ.

ಇಷ್ಟು ಮಾತ್ರವಲ್ಲದೇ ಸಾರ್ವಜನಿಕ ಸಾರಿಗೆ ಬಸ್ಸುಗಳಲ್ಲಿ ಸಂಚರಿಸುವುದರಿಂದ ವ್ಯವಹಾರ ಸಂಬಂಧಗಳಿಗೆ ಧಕ್ಕೆಯಾಗುವ ಮಾತ್ರವಲ್ಲದೇ ಮದುವೆ ಸಂಬಂಧಗಳಿಗೂ ಸಮಸ್ಯೆಯಾಗಬಹುದೆನ್ನುವ ಅಭಿಪ್ರಾಯ ಬಹುತೇಕ ಭಾರತೀಯರಲ್ಲಿ ಮತ್ತು ಚೀನೀಯರಲ್ಲಿ ಇದೆಯೆಂಬ ಅಂಶವನ್ನೂ ಈ ಅಧ್ಯಯನವು ಕಂಡುಕೊಂಡಿದೆ.

ಬೀಜಿಂಗ್ ಮತ್ತು ಚೆನ್ನೈಗಳಂತಹ ಮಹಾನಗರಗಳಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಜನಸ್ನೇಹಿಗೊಳಿಸುವ ಅಗತ್ಯತೆಯನ್ನೂ ಸಹ ಈ ಅಧ್ಯಯನ ವರದಿಯು ಪ್ರತಿಪಾದಿಸಿದೆ. ಇದರಿಂದ ಮಹಾನಗರಗಳನ್ನು ಪ್ರಮುಖವಾಗಿ ಕಾಡುತ್ತಿರುವ ವಾಯು ಮಾಲಿನ್ಯ ಸಮಸ್ಯೆಗೂ ಪರಿಹಾರ ಕಂಡುಕೊಂಡಂತಾಗುವುದು ಎನ್ನುವುದು ಈ ವರದಿಯ ಆಶಯವಾಗಿದೆ.

ಜಗತ್ತಿನಾದ್ಯಂತ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಕುರಿತಾಗಿ ಒಂದು ಧನಾತ್ಮಕ ಭಾವನೆಯನ್ನು ಬೆಳೆಸುವಂತೆ ಮಾಡುವುದರಿಂದ ಉತ್ತಮ ಭವಿಷ್ಯಕ್ಕೆ ಸಹಕಾರ ನೀಡಿದಂತೆ ಎನ್ನುವ ಆಶಾವಾದವನ್ನು ಈ ಅಧ್ಯಯನವು ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.