ವಿಶ್ವಸಂಸ್ಥೆ ವರದಿಗೆ ಭಾರತದ ಆಕ್ಷೇಪ
Team Udayavani, Jul 11, 2018, 11:35 AM IST
ವಿಶ್ವಸಂಸ್ಥೆ: ಜಮ್ಮು ಮತ್ತು ಕಾಶ್ಮೀರ, ಛತ್ತೀಸ್ಗಡ, ಜಾರ್ಖಂಡ್ಗಳಲ್ಲಿ ಸೇನಾ ಪಡೆಗಳ ಜತೆಗಿನ ಸಂಘರ್ಷದಲ್ಲಿ ಮಕ್ಕಳು ಹೆಚ್ಚಿನ ರೀತಿಯಲ್ಲಿ ತೊಂದರೆಗೀಡಾಗಿದ್ದಾರೆ ಎಂಬ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೋ ಗುಟೆರಸ್ ವರದಿಗೆ ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಜತೆಗೆ ಅದು ಅಂತಾರಾಷ್ಟ್ರೀಯ ಶಾಂತಿ ಮತ್ತು ಭದ್ರತೆಗೆ ಯಾವುದೇ ರೀತಿಯಲ್ಲಿ ಅಪಾಯಕಾರಿಯೂ ಅಲ್ಲ ಎಂದು ವಿಶ್ವಸಂಸ್ಥೆಯಲ್ಲಿರುವ ಭಾರತದ ಕಾಯಂ ಉಪ ರಾಯಭಾರಿ ತನ್ಮಯ ಲಾಲ್ ಹೇಳಿದ್ದಾರೆ.
ಜಾರ್ಖಂಡ್, ಛತ್ತೀಸ್ಗಡದಲ್ಲಿ ನಕ್ಸಲೀಯರು ಮಕ್ಕಳನ್ನು ನೇಮಿಸಿಕೊಂಡು ಅವರ ಮೂಲಕ ಹಿಂಸಾಕೃತ್ಯಗಳಿಗೆ ಪ್ರೇರಣೆ ನಡೆಸಲಾಗುತ್ತದೆ ಎಂದು ವಿಶ್ವಸಂಸ್ಥೆ ವರದಿಯಲ್ಲಿ ಹೇಳಲಾಗಿದೆ. ಈ ವರದಿಯನ್ನು ಯಾವುದೇ ಹಂತದಲ್ಲಿಯೂ ಗಣನೆಗೆ ತೆಗೆದುಕೊಳ್ಳಲು ಸಾಧ್ಯವೇ ಇಲ್ಲ ಎಂದು ಲಾಲ್ ಹೇಳಿದ್ದಾರೆ. ಸೋಮವಾರ ನಡೆದ ಚರ್ಚೆಯಲ್ಲಿ ಮಾತನಾಡಿದ ಅವರು, “ಪ್ರಧಾನ ಕಾರ್ಯದರ್ಶಿಗಳ ವರದಿ ಪೂರ್ವಗ್ರಹ ಪೀಡಿತ’ ಎಂದಿದ್ದಾರೆ. ವರದಿ ಸಿದ್ಧಪಡಿಸಿದವರು ತಮ್ಮ ವಾದವನ್ನು ಪ್ರಬಲವಾಗಿ ಸಮರ್ಥಿಸುವಂಥ ಅಂಶಗಳನ್ನು ನೀಡಿಲ್ಲ ಎಂದಿದ್ದಾರೆ.
ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನದ ಶಾಶ್ವತ ರಾಯಭಾರಿ ಮಲೀಹಾ ಲೋಧಿ ಜೂ.14ರ ತಥಾಕಥಿತ ಮಾನವ ಹಕ್ಕುಗಳ ಉಲ್ಲಂಘನೆ ಅಂಶವನ್ನು ಪ್ರಸ್ತಾಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್