ಪ್ರಧಾನಿ ನರೇಂದ್ರ ಮೋದಿ ಓರ್ವ ಟೆರರಿಸ್ಟ್, ಪಾಕ್ ಸಚಿವ ಖ್ವಾಜಾ!
Team Udayavani, Oct 3, 2017, 11:26 AM IST
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ವಾಕ್ಸಮರದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಕೀಳು ಮಟ್ಟಕ್ಕೆ ಇಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್ ಎಂದು ಆರೋಪಿಸಿರುವುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಮೂಲಕ ಜಾಗತಿಕ ಮಟ್ಟದಲ್ಲಿ ತೀವ್ರ ಮುಖಭಂಗಕ್ಕೀಡಾದ ಪಾಕಿಸ್ತಾನ ಇದೀಗ ಬಾಯಿಗೆ ಬಂದಂತೆ ವಾಗ್ದಾಳಿ ನಡೆಸಲು ಮುಂದಾಗಿದೆ. ಪಾಕಿಸ್ತಾನ ಭಯೋತ್ಪಾದಕರನ್ನು ತಯಾರಿಸುವ ಕಾರ್ಖಾನೆ ಎಂದು ವಿಶ್ವಸಂಸ್ಥೆಯಲ್ಲಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ನೀಡಿದ ಹೇಳಿಕೆ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಖ್ವಾಜಾ ಅಸೀಫ್ ಈ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ಹೇಳಿದೆ.
ಪಾಕಿಸ್ತಾನ ಜಿಯೋ ಟಿವಿಗೆ ನೀಡಿದ ಸಂದರ್ಶನದಲ್ಲಿ ಖ್ವಾಜಾ ಭಾರತಕ್ಕೆ ತಿರುಗೇಟು ನೀಡುತ್ತಾ, ನಾವು ಭಯೋತ್ಪಾದಕರನ್ನು ರಫ್ತು ಮಾಡುವ ದೇಶ ಎಂದು ವಿಶ್ವಸಂಸ್ಥೆಯಲ್ಲಿ ಸುಷ್ಮಾ ಸ್ವರಾಜ್ ಆರೋಪಿಸಿದ್ದಾರೆ. ಆಕೆಯ ದೇಶದ ಪ್ರಧಾನಿ (ಮೋದಿ) ಟೆರರಿಸ್ಟ್, ಪ್ರಧಾನಿ (ಮೋದಿ) ಕೈಗೆ ಗುಜರಾತ್ ನಲ್ಲಿ ಅಂದು ಮುಸ್ಲಿಮರ ಮಾರಣಹೋಮ ನಡೆಸಿದ ರಕ್ತ ಅಂಟಿಕೊಂಡಿದೆ ಎಂದು ಕಿಡಿಕಾರಿರುವುದಾಗಿ ವರದಿ ವಿವರಿಸಿದೆ.
ಭಾರತದಲ್ಲಿ ಭಯೋತ್ಪಾದಕರ ಪಕ್ಷವೇ ಆಡಳಿತ ನಡೆಸುತ್ತಿದೆ, ಭಾರತದಲ್ಲಿರುವುದು ಈಗ ಆರ್ ಎಸ್ ಎಸ್ ಆಡಳಿತ ಎಂದು ಅಸೀಫ್ ಗಂಭೀರವಾಗಿ ಆರೋಪಿಸಿದ್ದಾರೆ. ಕಳೆದ ವಾರವಷ್ಟೇ ಮುಂಬೈ ದಾಳಿ ನಡೆಸಿದ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನಂತವರು ಕಾರ್ಯಾಚರಿಸುತ್ತಿರುವುದಕ್ಕೆ ಪಾಕಿಸ್ತಾನ ಹೊಣೆ ಹೊರಬೇಕು ಎಂಬುದನ್ನು ಖ್ವಾಜಾ ಒಪ್ಪಿಕೊಂಡಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳ ಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್
China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು
Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!
MUST WATCH
ಹೊಸ ಸೇರ್ಪಡೆ
Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’