ಪಾಕ್ಗೆ ಮುಖಭಂಗ: ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆಗೆ ICJ ತಡೆ
Team Udayavani, May 10, 2017, 8:45 AM IST
ನವದೆಹಲಿ: ಭಾರತದ ನಿವೃತ್ತ ನೌಕಾ ಪಡೆ ಅಧಿಕಾರಿ ಕುಲಭೂಷಣ ಜಾಧವ್ಗೆ ಪಾಕಿಸ್ತಾನದ ಮಿಲಿಟರಿ ಕೋರ್ಟ್ ನೀಡಿದ ಗಲ್ಲು ಶಿಕ್ಷೆಗೆ ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನ ಸರ್ಕಾರಕ್ಕೆ ಮುಖಭಂಗವಾಗಿದೆ. ನೆರೆಯ ರಾಷ್ಟ್ರದ ಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಜಾಧವ್ರನ್ನು ಇರಾನ್ನಿಂದ ಅಪಹರಿಸಲಾಗಿತ್ತು ಎಂದು ಕೋರ್ಟ್ಗೆ ತಿಳಿಸಲಾಗಿತ್ತು.
ಈ ಬಗ್ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದು, ಇದೊಂದು ಉತ್ತಮ ಬೆಳವಣಿಗೆ. ಈ ಬಗ್ಗೆ ಜಾಧವ್ ರ ತಾಯಿ ಜತೆಗೆ ಫೋನ್ ಮೂಲಕ ಮಾತನಾಡಿರುವುದಾಗಿ ಬರೆದುಕೊಂಡಿದ್ದಾರೆ. ಪಾಕಿಸ್ತಾನದ ಹಲವು ಕಡೆಗಳಲ್ಲಿ ಸ್ಫೋಟ ಮತ್ತಿತರ ಸ್ಫೋಟಗಳ ಆರೋಪಗಳನ್ನು ಜಾಧವ್ ವಿರುದ್ಧ ಹೊರಿಸಲಾಗಿದೆ.
ಕಳೆದ ತಿಂಗಳು ಮಿಲಿಟರಿ ಕೋರ್ಟ್ ಗಲ್ಲಿಗೇರಿಸುವಂತೆ ತೀರ್ಪು ನೀಡಿತ್ತು. ಅದನ್ನು ಪೂರ್ವ ಯೋಜಿತ ಕೊಲೆಗೆ ಸಮ ಎಂದು ಕೇಂದ್ರ ಸರ್ಕಾರ ಬಣ್ಣಿಸಿತ್ತು. ಆದರೆ ಈ ಅಂಶಗಳನ್ನೆಲ್ಲ ಪಾಕಿಸ್ತಾನ ಸರ್ಕಾರ ಒಪ್ಪಿಕೊಂಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ