Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


Team Udayavani, Apr 19, 2024, 9:51 AM IST

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವೆ ಉದ್ವಿಗ್ನತೆ ಮುಂದುವರಿದಿದೆ. ಇಸ್ರೇಲ್ ಮೇಲೆ ಸತತ ದಾಳಿ ನಡೆಸಿದ ಇರಾನ್ ಮೇಲೆ ಕ್ಷಪಣಿ ದಾಳಿ ನಡೆಸುವ ಮೂಲಕ ಇಸ್ರೇಲ್ ತನ್ನ ಸೇಡು ತೀರಿಸಿಕೊಂಡಿದೆ.

ಜೆರುಸಲೆಮ್ ಪೋಸ್ಟ್ ವರದಿಯ ಪ್ರಕಾರ, ಶುಕ್ರವಾರ ಬೆಳಿಗ್ಗೆ ಮಧ್ಯ ಇರಾನ್‌ನ ಇಸ್ಫಹಾನ್, ದಕ್ಷಿಣ ಸಿರಿಯಾದ ಅಸ್-ಸುವೈದಾ ಗವರ್ನರೇಟ್ ಮತ್ತು ಬಾಗ್ದಾದ್ ಪ್ರದೇಶದಲ್ಲಿ ಮತ್ತು ಇರಾಕ್‌ನ ಬಾಬಿಲ್ ಗವರ್ನರೇಟ್‌ನಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ವರದಿಯಾಗಿದೆ ಆದರೆ ಈ ಬಗ್ಗೆ ಇರಾನ್ ಯಾವುದೇ ಮಾಹಿತಿ ನೀಡಿಲ್ಲ.

ಈ ನಡುವೆ ದಾಳಿಯ ಕುರಿತು ಇರಾನ್‌ನ ವಿದೇಶಾಂಗ ಸಚಿವ ಅಮೀರ್ ಅಬ್ದುಲ್ಲಾಹಿಯಾನ್ ಇಸ್ರೇಲ್‌ಗೆ ಎಚ್ಚರಿಕೆ ನೀಡಿದ್ದಾರೆ. ಇಸ್ರೇಲ್ ತಮ್ಮ ಮೇಲೆ ನಡೆಸಿದ ದಾಳಿಯ ಬಗ್ಗೆ ಪಶ್ಚಾತ್ತಾಪ ಪಡುವಂತೆ ಮಾಡಲು ಇರಾನ್ ಯಾವತ್ತೂ ಹಿಂಜರಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ. ತಮ್ಮ ದೇಶದ ಮೇಲೆ ಯಾವುದೇ ದಾಳಿಗೆ ಯತ್ನಿಸಿದರೆ ಅದರ ಪರಿಣಾಮ ತೀವ್ರವಾಗಿರುತ್ತದೆ ಎಂದು ಇರಾನ್ ವಿದೇಶಾಂಗ ಸಚಿವರು ಎಚ್ಚರಿಕೆ ನೀಡಿದ್ದಾರೆ. ಇಸ್ರೇಲ್ ಸರ್ಕಾರ ತನ್ನ ಸಾರ್ವಭೌಮತ್ವವನ್ನು ಉಲ್ಲಂಘಿಸಿದರೆ, ಇರಾನ್ ಸುಮ್ಮನೆ ನೋಡುವುದಿಲ್ಲ ಎಂದು ಹೇಳಿದರು. ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಇರಾನ್‌ನ ವಿದೇಶಾಂಗ ಸಚಿವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಇರಾನ್ ಇತ್ತೀಚೆಗೆ ಇಸ್ರೇಲ್ ಮೇಲೆ ಸುಮಾರು 300 ಡ್ರೋನ್ ಮತ್ತು ಕ್ಷಿಪಣಿಗಳನ್ನು ಉಡಾಯಿಸಿದೆ. ಆ ದಾಳಿಯಲ್ಲಿ ದಕ್ಷಿಣ ಇಸ್ರೇಲ್‌ನಲ್ಲಿನ ಐಡಿ ಎಫ್ ನೆಲೆಯು ತೀವ್ರವಾಗಿ ಹಾನಿಗೊಳಗಾಯಿತು ಮತ್ತು ಒಬ್ಬರು ಗಾಯಗೊಂಡರು. ಇರಾನ್ ತನ್ನ ಭೂಪ್ರದೇಶದಿಂದ ಇಸ್ರೇಲ್ ಮೇಲೆ ನೇರವಾಗಿ ದಾಳಿ ಮಾಡಿರುವುದು ಇದೇ ಮೊದಲು. ಡಮಾಸ್ಕಸ್ ಕಾನ್ಸುಲೇಟ್ ಮೇಲಿನ ಮಾರಣಾಂತಿಕ ದಾಳಿಗೆ ಪ್ರತೀಕಾರವಾಗಿ ಇರಾನ್ ಡ್ರೋನ್ ಮತ್ತು ಕ್ಷಿಪಣಿಗಳಿಂದ ಇಸ್ರೇಲ್ ಮೇಲೆ ದಾಳಿ ಮಾಡಿದೆ ಎಂದು ತೋರುತ್ತದೆ. ಇರಾನ್ ದಾಳಿಯನ್ನು ತಡೆಯಲು ಇಸ್ರೇಲ್ ಗೆ ಅಮೆರಿಕ ಸಹಾಯ ಮಾಡಿದ್ದು ಗಮನಾರ್ಹ.

ಇದನ್ನೂ ಓದಿ: Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.