Israel Attack: ಇಸ್ರೇಲ್ ದಾಳಿಗೂ ಮುನ್ನ 500ಭಯೋತ್ಪಾದಕರಿಗೆ ತರಬೇತಿ ನೀಡಿದ್ದ ಇರಾನ್: ವರದಿ


Team Udayavani, Oct 26, 2023, 9:42 AM IST

Israel Attack: ಇಸ್ರೇಲ್ ದಾಳಿಗೂ ಮುನ್ನ 500ಭಯೋತ್ಪಾದಕರಿಗೆ ತರಬೇತಿ ನೀಡಿದ್ದ ಇರಾನ್: ವರದಿ

ಟೆಹ್ರಾನ್: ಇರಾನ್‌ನ ಗಣ್ಯ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್‌ನ ಪ್ಯಾಲೇಸ್ಟಿನಿಯನ್ ಭಯೋತ್ಪಾದಕ ಗುಂಪುಗಳ ಕನಿಷ್ಠ 500 ಸದಸ್ಯರಿಗೆ ತರಬೇತಿ ನೀಡಿ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿದೆ ಎಂದು ದಿ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ವರದಿ ಮಾಡಿದ ದ ವಾಲ್ ಸ್ಟ್ರೀಟ್ ಜರ್ನಲ್, ಹಮಾಸ್ ಇಸ್ರೇಲ್ ಮೇಲೆ ಭೂಮಿ, ವಾಯು ಮತ್ತು ಸಮುದ್ರದ ಮೂಲಕ ಅಭೂತಪೂರ್ವ ದಾಳಿಯನ್ನು ಪ್ರಾರಂಭಿಸುವ ಮೊದಲು ಸುಮಾರು ಐನೂರು ಮಂದಿ ಭಯೋತ್ಪಾದಕರು ಕಳೆದ ತಿಂಗಳು ಇರಾನ್‌ನಲ್ಲಿ “ವಿಶೇಷ ಯುದ್ಧ ತರಬೇತಿ”ಗೆ ಒಳಗಾಗಿದ್ದರು ಎಂದು ಹೇಳಿದೆ.

ಇಸ್ರೇಲ್‌ನ ಮೇಲೆ ದಾಳಿ ನಡೆಸಲು ಹಮಾಸ್‌ಗೆ ಇರಾನ್ ಸಹಾಯ ಮಾಡುತ್ತಿದೆ ಎಂದು ಇಸ್ರೇಲ್ ಪದೇ ಪದೇ ಆರೋಪಿಸಿದೆ, ಇದರ ನಡುವೆ ಇರಾನ್ ತಾವು ಯಾವುದೇ ಸಂಘಟನೆಗೆ ಸಾಥ್ ನೀಡುತ್ತಿಲ್ಲ ಎಂದು ಹೇಳಿ ಇಸ್ರೇಲ್ ಆರೋಪವನ್ನು ತಳ್ಳಿಹಾಕಿತ್ತು. ಇಸ್ರೇಲ್‌ ಮೇಲೆ ಇತಿಹಾಸದಲ್ಲೇ ಅತ್ಯಂತ ಮಾರಣಾಂತಿಕ ದಾಳಿಯನ್ನು ನಡೆಸಲು ಹಮಾಸ್ ಹೈ-ಟೆಕ್ ಗಾಜಾ ಗಡಿ ಬೇಲಿಯನ್ನು ಕೆಡವಲು ಮತ್ತು ಗಡಿಯುದ್ದಕ್ಕೂ ಅಡ್ಡದಾರಿ ಹಿಡಿಯುವಲ್ಲಿ ಯಶಸ್ವಿಯಾಗಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಈ ತಿಂಗಳ ಆರಂಭದಲ್ಲಿ, ದಿ ವಾಲ್ ಸ್ಟ್ರೀಟ್ ಜರ್ನಲ್ ಇರಾನ್ ಇಸ್ರೇಲ್ ಮೇಲೆ ಹಮಾಸ್‌ನ ಅಭೂತಪೂರ್ವ ದಾಳಿಗಳನ್ನು ಯೋಜಿಸಲು ಸಹಾಯ ಮಾಡಿದೆ ಮತ್ತು ಲೆಬನಾನ್‌ನ ರಾಜಧಾನಿ ಬೈರುತ್‌ನಲ್ಲಿ ನಡೆದ ಸಭೆಯಲ್ಲಿ ದಾಳಿಗೆ ಅನುಮೋದನೆ ನೀಡಿತು ಎಂದು ಹಮಾಸ್‌ನ ಹಿರಿಯ ಸದಸ್ಯರು ಮತ್ತು ಇರಾನ್ ಬೆಂಬಲಿತ ಗುಂಪು ಹೆಜ್ಬೊಲ್ಲಾಹ್ ಹೇಳಿದ್ದಾರೆ.

ಇರಾನ್‌ನ ಶಕ್ತಿಶಾಲಿ ಮಿಲಿಟರಿಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್‌ನ ಅಧಿಕಾರಿಗಳು ಆಗಸ್ಟ್‌ನಿಂದ ಹಮಾಸ್‌ನೊಂದಿಗೆ ಭೂಮಿ, ವಾಯು ಮತ್ತು ಸಮುದ್ರದ ಮೂಲಕ ಇಸ್ರೇಲ್‌ನ ಮೇಲೆ ತಮ್ಮ ಬಹು-ಮುಖ ದಾಳಿಯನ್ನು ರೂಪಿಸಲು ಕೆಲಸ ಮಾಡುತ್ತಿದ್ದಾರೆ ಎಂದು ವರದಿ ಮಾಡಿತ್ತು.

ಬೈರುತ್‌ನಲ್ಲಿ ನಡೆದ ಹಲವಾರು ಸಭೆಗಳಲ್ಲಿ ಇಸ್ರೇಲ್‌ ಮೇಲೆ ದಾಳಿ ನಡೆಸುವ ವಿಚಾರವಾಗಿ ಚರ್ಚಿಸಲಾಗಿತ್ತು, ಇದರಲ್ಲಿ ಐಆರ್ ಜಿಸಿ(IRGC) ಅಧಿಕಾರಿಗಳು ಮತ್ತು ಹಮಾಸ್ ಮತ್ತು ಹೆಜ್ಬುಲ್ಲಾ ಸೇರಿದಂತೆ ನಾಲ್ಕು ಇರಾನ್ ಬೆಂಬಲಿತ ಭಯೋತ್ಪಾದಕ ಗುಂಪುಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಹಮಾಸ್ ಗಾಜಾ ಪಟ್ಟಿಯನ್ನು ನಿಯಂತ್ರಿಸುತ್ತಿದ್ದರೆ, ಹೆಜ್ಬೊಲ್ಲಾ ಲೆಬನಾನ್‌ನಲ್ಲಿ ಶಿಯಾ ಭಯೋತ್ಪಾದಕ ಗುಂಪು ಮತ್ತು ರಾಜಕೀಯ ಬಣವಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಒಟ್ಟಾರೆಯಾಗಿ ಹಮಾಸ್ ಉಗ್ರಗಾಮಿ ಸಂಘಟನೆ ಏಕಾಏಕಿ ಇಸ್ರೇಲ್ ಮೇಲೆ ನಡೆಸಿದ ದಾಳಿಯಲ್ಲಿ ಸಾವಿರಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡರು ಅಷ್ಟು ಮಾತ್ರವಲ್ಲದೆ ನೂರಾರು ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ. ಇದರ ನಡುವೆ ಹಮಾಸ್ ನಡೆಸಿದ ವೈಮಾನಿಕ ದಾಳಿಗೆ ಪ್ರತಿಯಾಗಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು ಇದರಿಂದ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಮಂದಿ ಜೀವಕಳೆದುಕೊಂಡರು. ಇನ್ನೂ ಇಸ್ರೇಲ್ ಹಮಾಸ್ ಸಂಘರ್ಷ ಮುಗಿದಿಲ್ಲ ಇಸ್ರೇಲ್ ಹಮಾಸ್ ಉಗ್ರರ ನಿರ್ನಾಮಕ್ಕೆ ಎಲ್ಲ ರೀತಿಯ ತಯಾರಿಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Road Mishap: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಮಗು ಸೇರಿ 12 ಮಂದಿ ಮೃತ್ಯು

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.