ಮತ್ತೆ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್
Team Udayavani, Jun 16, 2021, 8:33 AM IST
ಜೆರುಸಲೇಂ: ಕದನ ವಿರಾಮದಿಂದ ಕೆಲವು ದಿನಗಳ ಕಾಲ ಶಾಂತವಾಗಿದ್ದ ಇಸ್ರೇಲ್-ಗಾಜಾದಲ್ಲಿ ಇದೀಗ ಮತ್ತೆ ಯುದ್ದ ವಿಮಾನ ಹಾರಾಡಿದೆ. ಗಾಜಾದಲ್ಲಿನ ಪ್ಯಾಲೆಸ್ತೀನಿಯರು ಬೆಂಕಿ ಹಚ್ಚುವ ಬಲೂನುಗಳನ್ನು ಹಾರಿಸಿದ ಬಳಿಕ ಇಸ್ರೇಲ್ ಕೂಡಾ ಗಾಜಾ ಪಟ್ಟಿಯ ಮೇಲೆ ವೈಮಾನಿಕ ದಾಳಿ ನಡೆಸಿದೆ.
ಮೇ 21ರಂದು ನಡೆದ ಕದನ ವಿರಾಮ ಒಪ್ಪಂದ ಬಳಿಕ ನಡೆದ ಮೊದಲ ದೊಡ್ಡ ದಾಳಿ ಇದಾಗಿದೆ. ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯರ ನಡುವೆ 11 ದಿನಗಳ ಕಾಳಗ ನಡೆದಿತ್ತು. ಇದರಲ್ಲಿ 260 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದರೆ, 13 ಮಂದಿ ಇಸ್ರೇಲ್ ಜನರು ಸಾವನ್ನಪ್ಪಿದ್ದರು.
ಇದನ್ನೂ ಓದಿ:ವಿದೇಶಕ್ಕೆ ತೆರಳುವವರಿಗೆ ಈ ದಾಖಲೆಗಳನ್ನು ನೀಡಿದರೆ 28 ದಿನಕ್ಕೆ 2ನೇ ಡೋಸ್ ಲಸಿಕೆ
ಪ್ಯಾಲೇಸ್ತೀನಿಯನ್ ಮೂಲಗಳ ಪ್ರಕಾರ, ಇಸ್ರೇಲ್ ನ ವಾಯುಪಡೆಯು ದಕ್ಷಿಣ ಗಾಜಾ ನಗರವಾದ ಖಾನ್ ಯೂನೆಸ್ ನ ಪೂರ್ವಕ್ಕೆ ಕನಿಷ್ಠ ಒಂದು ತಾಣವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಇಸ್ರೇಲ್, ಗಾಜಾ ಪಟ್ಟಿಯಿಂದ ಸ್ಫೋಟಕಗಳಿರುವ ಬಲೂನ್ ಹಾರಾಡಿದ ಪರಿಣಾಮ ಪ್ರತಿಯಾಗಿ, ಖಾನ್ ಯೂನೆಸ್ ನಲ್ಲಿನ ಭಯೋತ್ಪಾದಕರಿಗೆ ಸೌಲಭ್ಯಗಳು ಒದಗಿಸುವ ಮತ್ತು ಸಭೆಗಳನ್ನು ನಡೆಸುವ ಸ್ಥಳಗಳನ್ನು ಗುರಿಯಾಗಿಸಲಾಗಿದೆ ಎಂದು ಹೇಳಿದೆ.
ಇಸ್ರೇಲ್ ನಲ್ಲಿ ನೆತನ್ಯಾಹು ಸರಕಾರ ಉರುಳಿ ಹೊಸ ಸರ್ಕಾರ ಬಂದ ಕೂಡಲೇ ಈ ದಾಳಿಯಾಗಿದೆ. ಕೆಲ ದಿನಗಳ ಹಿಂದಷ್ಟೇ 12 ವರ್ಷಗಳ ಬೆಂಜಮಿನ್ ನೆತನ್ಯಾಹು ಅವರ ಅಧಿಕಾರ ಕೊನೆಗೊಂಡಿತ್ತು. ಇದೀಗ ಬಹುಮೈತ್ರಿ ಕೂಟ ಸರ್ಕಾರ ಅಸ್ತಿತ್ವದಲ್ಲಿದ್ದು, ನೆಫ್ಟಾಲಿ ಬೆನ್ನೆಟ್ ನೇತೃತ್ವವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್