ಪ್ಯಾಲೆಸ್ತಿನ್ ಉಗ್ರದಾಳಿಗೆ ಮೃತಪಟ್ಟ ಕೇರಳದ ಸೌಮ್ಯ ಮನೆಯವರಿಗೆ ಕರೆ ಮಾಡಿದ ಇಸ್ರೇಲ್ ಅಧ್ಯಕ್ಷ
Team Udayavani, May 19, 2021, 8:21 AM IST
ಜೆರುಸಲೇಮ್: ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ವಾರ ಪ್ಯಾಲೆಸ್ತಿನ್ ಉಗ್ರರ ದಾಳಿಗೆ ಮೃತಪಟ್ಟ ಕೇರಳದ ಸೌಮ್ಯ ಸಂತೋಷ್ ಮನೆಯವರೊಂದಿಗೆ ಇಸ್ರೇಲ್ ಅಧ್ಯಕ್ಷರು ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಇಸ್ರೇಲ್ ಅಧ್ಯಕ್ಷ ರೂವನ್ ರಿವ್ಲಿನ್ ಅವರು ಕರೆ ಮಾಡಿ ಮಾತನಾಡಿರುವ ಬಗ್ಗೆ ಅವರ ಸಲಹೆಗಾರ ಪಿಟಿಐಗೆ ಖಚಿತಪಡಿಸಿದ್ದಾರೆ.
ಕೇರಳದ ಇಡುಕ್ಕಿ ಜಿಲ್ಲೆಯ 30 ವರ್ಷದ ಸೌಮ್ಯ ಸಂತೋಷ್ ಅವರು ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಇಸ್ರೇಲ್ ನ ಕರಾವಳಿ ನಗರ ಅಶ್ಕೆಲೊನ್ ನಲ್ಲಿ80 ಪ್ರಾಯದ ಮಹಿಳೆಯನ್ನು ಆರೈಕೆ ಮಾಡುವ ಕೆಲಸದಲ್ಲಿದ್ದರು.
ಸೌಮ್ಯ ಅವರು ಕಳೆದ ಏಳು ವರ್ಷಗಳಿಂದ ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಒಂಬತ್ತು ವರ್ಷದ ಮಗನಿದ್ದು, ಆತನನ್ನು ಪತಿ ಸಂತೋಷ್ ಜೊತೆ ಕೇರಳದಲ್ಲಿ ಬಿಟ್ಟು ಸೌಮ್ಯ ಇಸ್ರೇಲ್ ಗೆ ತೆರಳಿದ್ದರು.
ಇದನ್ನೂ ಓದಿ:ಇಸ್ರೇಲ್ ಸೇನೆಯ ಮುಂದುವರಿದ ವೈಮಾನಿಕ ದಾಳಿ: ಹಮಾಸ್ ರಹಸ್ಯ ಸುರಂಗ ಧ್ವಂಸ
ಮೇ 11 ರಂದು ಸೌಮ್ಯ ತನ್ನ ಪತಿ ಸಂತೋಷ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುವ ವೇಳೆ ಗಾಜಾದಿಂದ ಬಂದ ರಾಕೆಟೊಂದು ಆಕೆ ಕೆಲಸ ಮಾಡುತ್ತಿದ್ದ ಮನೆಗೆ ಅಪ್ಪಳಿಸಿತ್ತು. ಘಟನೆಯಲ್ಲಿ ಸೌಮ್ಯ ಸಾವನ್ನಪ್ಪಿದ್ದು, ವೃದ್ಧ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೌಮ್ಯ ಕೆಲಸ ಮಾಡುತ್ತಿದ್ದ ಮನೆಯಿಂದ ರಾಕೆಟ್ ದಾಳಿಯಿಂದ ರಕ್ಷಣೆ ಪಡೆಯುವ ಕಟ್ಟಡ ಅನತಿ ದೂರದಲ್ಲಿತ್ತು. ಆದರೆ ಇವರಿಗೆ ಅಲ್ಲಿಗೆ ತೆರಳಲಾಗಿರಲಿಲ್ಲ. ಮೇ.14ರಂದು ಸೌಮ್ಯ ಅವರ ಮೃತದೇಹವನ್ನು ಕೇರಳಕ್ಕೆ ತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು