ಕರ್ನಾಟಕ ಚುನಾವಣೆ: ಮತದಾನ ನನ್ನ ಹಕ್ಕು: ವಿಜಯ್ ಮಲ್ಯ
Team Udayavani, Apr 27, 2018, 6:46 PM IST
ಲಂಡನ್ : 9,000 ಕೋಟಿ ರೂ.ಬ್ಯಾಂಕ್ ಸಾಲ ವಂಚನೆಗೈದು ವಿದೇಶಕ್ಕೆ ಪಲಾಯನ ಮಾಡಿರುವ ಅನಿವಾಸಿ ಭಾರತೀಯ ಉದ್ಯಮಿ, ಮದ್ಯ ದೊರೆ, ವಿಜಯ್ ಮಲ್ಯ, ಕರ್ನಾಟಕದಲ್ಲಿ ಮೇ 12ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವುದು ನನ್ನ ಪ್ರಜಾಸತ್ತಾತ್ಮಕ ಹಕ್ಕು ಎಂದು ಗುಡುಗಿದ್ದಾರೆ. ಆದರೆ ಹಾಲಿ ಪರಿಸ್ಥಿತಿಯಲ್ಲಿ ನಾನು ಮತದಾನ ಮಾಡಲು ನನಗೆ ಸಾಧ್ಯವಾಗದು ಎಂದು ವಿಷಾದಿಸಿದ್ದಾರೆ !
ವಿಜಯ್ ಮಲ್ಯ ಅವರು ಇಂಗ್ಲಂಡ್ ಗೆ ಪಲಾಯನ ಮಾಡಿದ್ದು ಅಲ್ಲಿನ ವೆಸ್ಟ್ ಮಿನಿಸ್ಟರ್ ನ್ಯಾಯಾಲಯ, ಮಲ್ಯ ಅವರನ್ನು ಬ್ಯಾಂಕ್ ಸಾಲ ವಂಚನೆಗಾಗಿ ವಿಚಾರಣೆಗೆ ಒಳಪಡಲು ಭಾರತಕ್ಕೆ ಗಡೀಪಾರು ಮಾಡುವ ವಿಷಯದಲ್ಲಿ ತೀರ್ಪು ನೀಡಲು ಸಜ್ಜಾಗಿದೆ. ಮಲ್ಯ ಅವರು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ 62ರ ಹರೆಯದ ಮಲ್ಯ ಅವರು, “ನಾನು ಕರ್ನಾಟಕದ ರಾಜಕಾರಣವನ್ನು ತಿಳಿದಿಲ್ಲ; ಹಾಗಾಗಿ ಅಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಾರೆ; ಹಾಗಿದ್ದರೂ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವುದು ನನ್ನ ಪ್ರಜಾಸತ್ತಾತ್ಮಕ ಹಕ್ಕಾಗಿದೆ; ಆದರೆ ಈಗಿನ ಪರಿಸ್ಥಿತಿಯಲ್ಲಿ ಮತದಾನ ಮಾಡುವುದು ನನಗೆ ಸಾಧ್ಯವಾಗದು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್ ಅಲ್ಲ