ನ್ಯೂಜಿಲ್ಯಾಂಡ್ ಗುಂಡಿನ ದಾಳಿ: 40 ಸಾವು,ಬಾಂಗ್ಲಾ ಕ್ರಿಕೆಟಿಗರು ಪಾರು
Team Udayavani, Mar 15, 2019, 3:57 AM IST
ಕ್ರೈಸ್ಟ್ ಚರ್ಚ್: ನ್ಯೂಜಿಲ್ಯಾಂಡ್ ನ ಕ್ರೈಸ್ಟ್ ಚರ್ಚ್ ನಗರದ ಎರಡು ಮಸೀದಿಗಳ ಮೇಲೆ ದುಷ್ಕರ್ಮಿಗಳು ಶುಕ್ರವಾರ (ಸ್ಥಳೀಯ ಕಾಲಮಾನ ಪ್ರಕಾರ ಮಧ್ಯಾಹ್ನ) ಗುಂಡಿನ ದಾಳಿ ನಡೆಸಿದ್ದು 40 ಮಂದಿ ನಾಗರಿಕರು ಸಾವನ್ನಪ್ಪಿದ್ದು, ಈ ಸಂದರ್ಭ ಮಸೀದಿಯಲ್ಲಿದ್ದ ಬಾಂಗ್ಲಾ ಕ್ರಿಕೆಟಿಗರು ಪಾರಾಗಿದ್ದಾರೆ.
ಕ್ರೈಸ್ಟ್ ಚರ್ಚ್ ನ ಎರಡೂ ಮಸೀದಿಗಳ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಘಟನೆ ನಡೆದಾಗ ಬಾಂಗ್ಲಾದೇಶ ಕ್ರಿಕೆಟಿಗರು ಹೇಗ್ಲೇಯ್ ಪಾರ್ಕ್ ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಬಾಂಗ್ಲಾ ಆಟಗಾರರು ಕ್ರೈಸ್ಟ್ ಚರ್ಚ್ ಗೆ ಆಗಮಿಸಿದ್ದರು. ಬಾಂಗ್ಲಾ ಆಟಗಾರ ತಮೀಮ್ ಇಕ್ಬಾಲ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಈ ದಾಳಿಯಿಂದ ಬಾಂಗ್ಲಾ ತಂಡಕ್ಕೆ ಯಾವುದೇ ಹಾನಿಯಾಗಿಲ್ಲ. ತಂಡ ಸುರಕ್ಷಿತವಾಗಿದೆ. ಇದೊಂದು ಭಯಾನಕ ಅನುಭವ ಎಂದು ಬರೆದಿದ್ದಾರೆ.
Entire team got saved from active shooters!!! Frightening experience and please keep us in your prayers #christchurchMosqueAttack
— Tamim Iqbal Khan (@TamimOfficial28) March 15, 2019
ನ್ಯೂಜಿಲ್ಯಾಂಡ್ ಪ್ರಧಾನ ಮಂತ್ರಿ ಜೆಸಿಂಡಾ ಆರ್ಡರ್ನ್ ದಾಳಿಯನ್ನು ಖಂಡಿಸಿದ್ದು, ನ್ಯೂಜಿಲ್ಯಾಂಡ್ ಗೆ ಇದು ಒಂದು ಕರಾಳ ದಿನ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್