‘ನನ್ನ ಉಗ್ರ ಶಿಬಿರಗಳನ್ನು IAF ಉಡೀಸ್ ಮಾಡಿದ್ದು ನಿಜ’: ಮಸೂದ್ ಅಜ್ಹರ್


Team Udayavani, Feb 27, 2019, 3:13 AM IST

masood-azhar-650.jpg

ಫೆಬ್ರವರಿ 14ರ ಪುಲ್ವಾಮ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯು ಮಂಗಳವಾರ ನಸುಕಿನ ಜಾವ ಪಾಕಿಸ್ಥಾನದ ಗಡಿಪ್ರದೇಶದೊಳಗೆ ನುಗ್ಗಿ ‘ಏರ್ ಸ್ಟ್ರೈಕ್’ ನಡೆಸಿ ಜೈಶ್ ಸಹಿತ ಇತರ ಸಂಘಟನೆಗಳ ಉಗ್ರಗಾಮಿ ಶಿಬಿರಗಳನ್ನು ಧ್ವಂಸಗೊಳಿಸಿರುವ ವಿಚಾರ ಇದೀಗ ವಿಶ್ವಪಟ್ಟದಲ್ಲಿ ಚರ್ಚೆಯಾಗುತ್ತಿದೆ. ಆದರೆ ಇತ್ತ ಪಾಕಿಸ್ಥಾನ ತನ್ನ ಎಂದಿನ ವರಸೆಯಂತೆ ಭಾರತ ನಮ್ಮ ನೆಲದಲ್ಲಿ ಯಾವುದೇ ರೀತಿಯ ದಾಳಿ ಮಾಡಿಲ್ಲ, ಅದು ಸುಳ್ಳು ಹೇಳುತ್ತಿದೆ ಎಂದು ಅಲವತ್ತುಗೊಳ್ಳುತ್ತಿದೆ.

ಆದರೆ ಇತ್ತ ಪಾಕಿಸ್ಥಾನದ ಕೃಪಾಶ್ರಯದಲ್ಲಿರುವ ಜೈಶ್-ಎ-ಮಹಮ್ಮದ್ ಮುಖ್ಯಸ್ಥ ಮೌಲಾನ ಮಸೂದ್ ಅಜ್ಹರ್ ಭಾರತ ನಡೆಸಿದ ವಾಯುದಾಳಿಯನ್ನು ಒಪ್ಪಿಕೊಳ್ಳುವ ಮೂಲಕ ತನ್ನ ಆಶ್ರಯದಾತ ರಾಷ್ಟ್ರಕ್ಕೆ ಕಸಿವಿಸಿ ಉಂಟುಮಾಡಿದ್ದಾನೆ. ಬಾಲ್ಕೋಟ್ ನಲ್ಲಿರುವ ಉಗ್ರ ಶಿಬಿರಗಳ ಮೇಲೆ ಭಾರತ ವಾಯುದಾಳಿ ಮಾಡಿರುವುದು ನಿಜ ಆದರೆ ಈ ದಾಳಿಯಿಂದ ಯಾವಿದೇ ರೀತಿಯ ಗಂಭೀರ ಹಾನಿಗಳಾಗಿಲ್ಲ ಎಂದು ಪಾಕಿಸ್ಥಾನದ ಮುಖ ಉಳಿಸಿಕೊಳ್ಳುವ ಹೇಳಿಕೆ ನೀಡಿದ್ದಾನೆ.

ಈ ವಾಯುದಾಳಿಯಲ್ಲಿ ಮೌಲಾನ ಅಮ್ಮರ್, ಮೌಲಾನ ತಲ್ಹಾ ಸೈಫ್, ಮುಫ್ತಿ ಅಜ್ಹರ್ ಖಾನ್ ಕಾಶ್ಮೀರಿ ಮತ್ತು ಇಬ್ರಾಹಿಂ ಅಜ್ಹರ್ ಸಹಿತ 300ಕ್ಕೂ ಹೆಚ್ಚು ಉಗ್ರರು ಈ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ಹೆಳಲಾಗುತ್ತಿದೆ. ಇನ್ನೂ ಒಂದು ಮೂಲಗಳ ಪ್ರಕಾರ ವಾಯುಸೇನೆ ನಡೆಸಿದ ಈ ದಾಳಿಯಲ್ಲಿ ಜೈಶ್ ಸಂಘಟನೆಯ ಈ ಎಲ್ಲಾ ಪ್ರಮುಖ ಉಗ್ರರು ಮೃತರಾಗಿದ್ದಾರೆಯೆ ಎಂಬುದು ದೃಢಪಟ್ಟಿಲ್ಲ. ಉಗ್ರ ತಲ್ಹಾ ಸೈಫ್ ಮೌಲಾನ ಮಸೂದ್ ನ ಸಹೋದರನಾಗಿದ್ದು ಈತ ಉಗ್ರಗಾಮಿ ಕಾರ್ಯಾಚರಣೆಗಳನ್ನು ತಯಾರುಗೊಳಿಸುವ ಘಟಕದ ಮುಖ್ಯಸ್ಥನಾಗಿದ್ದ ಎಂದು ಹೇಳಲಾಗುತ್ತಿದೆ. ಇನ್ನು ಅಮ್ಮರ್ ಎಂಬಾತ ಕಾಶ್ಮೀರ ಮತ್ತು ಅಫ್ಘಾನಿಸ್ಥಾನದಲ್ಲಿ ಹಲವಾರು ಉಗ್ರ ಚಟುವಟಿಕೆಗಳ ರೂವಾರಿ ಎಂದು ತಿಳಿದುಬಂದಿದೆ. ಇನ್ನು ಇಬ್ರಾಹಿಂ ಅಜ್ಹರ್ ಜೈಶ್ ಮುಖ್ಯಸ್ಥನ ಹಿರಿಯ ಸಹೋದರನಾಗಿದ್ದು 1999ರಲ್ಲಿ ಏರ್ ಇಂಡಿಯಾ ವಿಮಾನವನ್ನು ಕಂದಹಾರ್ ಗೆ ಅಪಹರಿಸಿದ್ದ ಘಟನೆಯಲ್ಲಿ ಭಾಗಿಯಾಗಿದ್ದ ಎನ್ನಲಾಗುತ್ತಿದೆ.

ಒಟ್ಟಿನಲ್ಲಿ ಒಂದು ಯೋಜಿತ ದಾಳಿಯ ಮೂಲಕ ಭಾರತೀಯ ವಾಯುಸೇನೆಯು ಪಾಕಿಸ್ಥಾನ ಮತ್ತು ಜೈಶ್ ಸಹಿತ ಪಾಕ್ ಪೋಷಿತ ಉಗ್ರ ಸಂಘಟನೆಗಳಿಗೆ ಭರ್ಜರಿ ಶಾಕ್ ನೀಡಿದೆ ಅನ್ನುವುದಂತೂ ಸತ್ಯ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.