ಪಾಕಿಸ್ಥಾನ ‘ಪಿ.ಒ.ಕೆ.’ಯನ್ನು ಮೊದಲು ತೆರವುಗೊಳಿಸಲಿ: ಬ್ರಿಟನ್ ಸಂಸದ ಬ್ಲ್ಯಾಕ್ ಮನ್
ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂದ ಬ್ರಿಟನ್ ಸಂಸದ ಬಾಬ್ ಬ್ಲ್ಯಾಕ್ ಮನ್
Team Udayavani, Sep 15, 2019, 8:41 PM IST
ಲಂಡನ್: ಜಮ್ಮು-ಕಾಶ್ಮೀರದ ವಿಚಾರವನ್ನು ಪದೇ ಪದೇ ವಿಶ್ವಸಂಸ್ಥೆಯ ಅಂಗಳಕ್ಕೆ ಒಯ್ಯುತ್ತಿರುವ ಪಾಕಿಸ್ಥಾನದ ನಡೆಯನ್ನು ಬ್ರಿಟನ್ ಸಂಸದ ಬಾಬ್ ಬ್ಲ್ಯಾಕ್ ಮನ್ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾತ್ರವಲ್ಲದೇ, ಪಾಕಿಸ್ಥಾನ ಆಕ್ರಮಿತ ಕಾಶ್ಮೀರವನ್ನು ಮೊದಲು ಪಾಕ್ ತೆರವುಗೊಳಿಸಬೇಕು ಎಂದೂ ಸಹ ಬಾಬ್ ಉಗ್ರ ಪೋಷಕ ರಾಷ್ಟ್ರಕ್ಕೆ ತಾಕೀತು ಮಾಡಿದ್ದಾರೆ.
‘ಜಮ್ಮು ಕಾಶ್ಮೀರದ ಪೂರ್ತಿ ಭೂಪ್ರದೇಶವು ಭಾರತದ ಸಾರ್ವಭೌಮತ್ವಕ್ಕೆ ಸೇರಿದ್ದಾಗಿದೆ. ವಿಶ್ವಸಂಸ್ಥೆಯ ನಿಲುವಳಿ ಅನುಷ್ಠಾನಗೊಳ್ಳಬೇಕು ಎಂದು ಆಗ್ರಹಿಸುವವರು, ಪಾಕಿಸ್ಥಾನೀ ಸೇನೆ ಕಾಶ್ಮೀರದಿಂದ ಹೊರಬರುವ ಮೂಲಕ ಪೂರ್ತಿ ಭೂಪ್ರದೇಶ ಏಕೀಕೃತಗೊಳ್ಳುವಂತಾಗಲು ಸಾಧ್ಯವಾಗಬೇಕೆಂಬುದನ್ನು ಆಗ್ರಹಿಸುವುದಕ್ಕೆ ಮರೆಯುತ್ತಾರೆ’ ಎಂದು ಬಾಬ್ ಹೆಳಿದರು.
ಜಮ್ಮು ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ನ್ಯಾಯಾಲಯದ ಮುಂದೆ ಪ್ರಸ್ತಾಪಿಸುವುದಾಗಿ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿರುವುದನ್ನು ಐ.ಸಿ.ಜೆ.ಯಲ್ಲಿ ಪ್ರಶ್ನಿಸುವುದಾಗಿ ಪಾಕಿಸ್ಥಾನದ ಶಾ ಮಹಮ್ಮದ್ ಖುರೇಷಿ ಅವರು ಇತ್ತೀಚೆಗಷ್ಟೇ ಹೇಳಿಕೆ ನೀಡಿದ್ದರು.
ಇತ್ತ ಶುಕ್ರವಾರದಂದು ಪಾಕಿಸ್ಥಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಪಾಕ್ ಆಕ್ರಮಿತ ಕಾಶ್ಮೀರದ ಮುಝಾಫರಾಬಾದ್ ನಲ್ಲಿ ಕಾಶ್ಮೀರ ಜನತೆಯ ಸ್ವಾಯತ್ತತೆಗಾಗಿ ಜಾಥಾ ಒಂದನ್ನು ಸಹ ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ್ದ ಇಮ್ರಾನ್ ಖಾನ್ ಅವರು, ‘ನಾನು ಮುಂದಿನ ವಾರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದೇನೆ, ಮತ್ತು ಈ ಸಂದರ್ಭದಲ್ಲಿ ನಾನು ಕಾಶ್ಮೀರದ ಜನತೆಯನ್ನು ನಿರಾಶೆಗೊಳಿಸುವುದಿಲ್ಲ’ ಎಂದು ಅವರು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು