ಅಸ್ಸಾಂ ಪ್ರತಿಭಟನೆ ಎಫೆಕ್ಟ್; ಬಾಂಗ್ಲಾ ಸಚಿವರ ಬೆನ್ನಲ್ಲೇ ಜಪಾನ್ ಪ್ರಧಾನಿ ಭೇಟಿಯೂ ರದ್ದು
ಅಸ್ಸಾಂನ ಗುವಾಹಟಿಯಲ್ಲಿ ಡಿಸೆಂಬರ್ 15ರಿಂದ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ
Team Udayavani, Dec 13, 2019, 12:46 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಭಾರತ ಪ್ರವಾಸವನ್ನು ರದ್ದುಪಡಿಸುವ ಸಾಧ್ಯತೆ ಇದೆ ಎಂದು ಜಪಾನ್ ನ ಜೀಜಿ ಪ್ರೆಸ್ ವರದಿ ಮಾಡಿದೆ.
ಅಸ್ಸಾಂನ ಗುವಾಹಟಿಯಲ್ಲಿ ಡಿಸೆಂಬರ್ 15ರಿಂದ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅಬೆ ಭಾರತಕ್ಕೆ ಆಗಮಿಸಲು ಸಿದ್ದತೆ ನಡೆಸಿದ್ದರು.
ಏತನ್ಮಧ್ಯೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುವಾಹಟಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ರಾಜ್ಯದ ವಿವಿಧೆಡೆ ವ್ಯಾಪಿಸಿದ್ದು, ಈ ನಿಟ್ಟಿನಲ್ಲಿ ಭಾರತ ಪ್ರವಾಸದ ಕುರಿತು ಮರು ಪರಿಶೀಲನೆ ನಡೆಸುವುದಾಗಿ ಶಿಂಜೋ ಅಬೆ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಡಿ.15ರಿಂದ ಎರಡು ದಿನಗಳ ಕಾಲ ನಡೆಯಲಿರುವ ವಾರ್ಷಿಕ ಶೃಂಗದಲ್ಲಿ ಪ್ರಧಾನಿ ಮೋದಿ ಮತ್ತು ಶಿಂಜೋ ಅಬೆ ಭೇಟಿ ನಡೆಯಲಿದೆಯೇ ಇಲ್ಲವೇ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸರ್ಕಾರ ಗುರುವಾರ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ