ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌


Team Udayavani, Oct 30, 2020, 12:09 AM IST

ಟ್ರಂಪ್‌ಗೆ ದೊಡ್ಡ ಸವಾಲೊಡ್ಡುತ್ತಿರುವ ಜೋ ಬೈಡೆನ್‌

ಬೈಡೆನ್‌ ಹಾದಿ…
ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಯಾಗಿರುವ 77 ವರ್ಷದ ಜೋ ಬೈಡೆನ್‌, ತಮ್ಮ 50 ವರ್ಷಗಳ ರಾಜಕೀಯ ಜೀವನದಲ್ಲಿ ಆರು ಬಾರಿ ಸೆನೇಟರ್‌ ಆಗಿ(36 ವರ್ಷಗಳವರೆಗೆ) ಕಾರ್ಯನಿರ್ವಹಿಸಿದವರು. ಒಬಾಮಾ ಅವಧಿಯಲ್ಲಿ 8 ವರ್ಷ ಅಮೆರಿಕದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಹೆಸರು ಮಾಡಿದವರು. ಈ ಬಾರಿ ಚುನಾವಣೆಯಲ್ಲಿ ಗೆದ್ದರೆ ಅಮೆರಿಕದ ಇದುವರೆಗಿನ ಅತಿ ಹಿರಿಯ ಅಧ್ಯಕ್ಷರೆಂದು ಕರೆಸಿಕೊಳ್ಳಲಿದ್ದಾರೆ.

ಕೋವಿಡ್‌ ಸಮಯದಲ್ಲಿ ಸಕ್ರಿಯ
ಟ್ರಂಪ್‌ರ ಆರಂಭಿಕ ಅಸಡ್ಡೆಯೇ ರೋಗ ಪ್ರಸರಣ ಹೆಚ್ಚಲು ಕಾರಣ ಎಂದು ಬೈಡೆನ್‌ ಆರಂಭದಿಂದಲೂ ಆರೋಪಿಸುತ್ತಾ ಬಂದಿದ್ದಾರೆ. ಆದರೆ, ಇದೇ ವೇಳೆಯಲ್ಲೇ ಅವರು ತಮ್ಮ ಬೆಂಬಲಿಗರಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿನಂತಿಸುತ್ತಾ, ಆರೋಗ್ಯ ಪರಿಣತರು ಹಾಗೂ ಆರ್ಥಿಕ ತಜ್ಞರ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರಕಾರಕ್ಕೆ ಶಿಫಾರಸು ಮಾಡುತ್ತಾ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಬೆಂಬಲಿಗರಿಗೆ ಸೋಂಕು ಪ್ರಸರಣದ ಅಪಾಯ ಎದುರಾಗುತ್ತದೆಂಬ ಕಾರಣಕ್ಕಾಗಿ ಪಕ್ಷದ ರ್ಯಾಲಿಗಳನ್ನು, ಮನೆಮನೆ ಪ್ರಚಾರವನ್ನು ಕಡಿತಗೊಳಿಸಿದ್ದಾರೆ.

ಬರ್ನಿ ಬದಲು ಬೈಡೆನ್‌
ಬೈಡೆನ್‌ ಆಯ್ಕೆಗೂ ಮೊದಲು, ಹಿರಿಯ ರಾಜಕಾರಣಿ ಬರ್ನಿ ಸ್ಯಾಂಡರ್ಸ್‌ ಅವರೇ ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿಯಾಗಬಹುದೆಂಬ ನಿರೀಕ್ಷೆ ಯಿತ್ತು. ಆದರೆ, ತೀವ್ರ ಎಡಪಂಥೀಯ ಧೋರಣೆಯಿರುವ ಸ್ಯಾಂಡರ್ಸ್‌ರನ್ನು ಅಮೆರಿಕದ ಕಾರ್ಪೊರೇಟ್‌ ವಲಯ ದ್ವೇಷಿಸುತ್ತದೆ. ಈ ಕಾರಣಕ್ಕಾಗಿಯೇ ಎಲ್ಲ ವರ್ಗಗಳನ್ನೂ ತಲುಪಬಲ್ಲ, ಮೃದು ಮಾತಿನ ಸಮಾಜವಾದಿ ಬೈಡೆನ್‌ರನ್ನೇ ಡೆಮಾಕ್ರಟಿಕ್‌ ಪಕ್ಷ ಆಯ್ಕೆ ಮಾಡಿದೆ ಎನ್ನಲಾಗುತ್ತದೆ.

ಒಬಾಮಾ-ಬೈಡೆನ್‌ ಮೀಮ್ಸ್‌
ಬೈಡೆನ್‌ ಕಳೆದ ಮೂವತ್ತು ವರ್ಷಗಳಿಂದಲೂ ಅಧ್ಯಕ್ಷನಾಗಬೇಕೆಂಬ ಬಯಕೆ ಹೊಂದಿರುವವರು. ಒಬಾಮಾ ಮೊದಲ ಬಾರಿ ಸ್ಪರ್ಧಿಸಿದ್ದ ವೇಳೆಯಲ್ಲಿ ಡೆಮಾಕ್ರಟಿಕ್‌ ಪಕ್ಷದಲ್ಲಿ ಒಬಾಮಾ ಅವರಿಗೆ ಪರ್ಯಾಯವಾಗಲೂ ಪ್ರಯತ್ನಿಸಿ ವಿಫ‌ಲರಾಗಿ ದ್ದರು. ಆದರೆ, ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ನಂತರ, ಒಬಾಮಾರ ಅತ್ಯಾಪ್ತರಾಗಿ ಬದಲಾದರು. ಇವರಿಬ್ಬರ ದೋಸ್ತಿ ಯಾವ ಮಟ್ಟಕ್ಕೆ ಸದ್ದುಮಾಡುತ್ತಿತ್ತು ಎಂದರೆ, ಗೆಳೆತನ ಎಂದರೆ ಒಬಾಮಾ- ಬೈಡೆನ್‌ರದ್ದು ಎಂದು ಮೀಮ್‌ಗಳು ಹರಿದಾಡುತ್ತಿದ್ದವು. ಈಗ ಒಬಾಮಾ ಬೈಡೆನ್‌ ಪರ ಜೋರಾಗಿಯೇ ಪ್ರಚಾರ ಮಾಡುತ್ತಿದ್ದಾರೆ.

ಭಾಷಣ ಕದಿಯುತ್ತಾರೆಂಬ ಆರೋಪ
ಬೈಡೆನ್‌ರ ವಿರುದ್ಧ ಎದುರಾಳಿಗಳು ಮಾಡುವ ಪ್ರಮುಖ ಆರೋಪಗಳಲ್ಲಿ “ಅವರು ಭಾಷಣಗಳನ್ನು ಕದಿಯುತ್ತಾರೆ, ಸ್ವಂತ ವಿಚಾರವಿಲ್ಲದ ಮನುಷ್ಯ’ ಎನ್ನುವುದೂ ಒಂದು. 1988ರ ಚುನಾವಣೆಯ ಸಮಯದಲ್ಲಿ ಅಧ್ಯಕ್ಷೀಯ ಅಭ್ಯರ್ಥಿ ಸ್ಥಾನದ ಆಕಾಂಕ್ಷಿಯಾಗಿದ್ದ ಬೈಡೆನ್‌ ಕಾರ್ಯಕ್ರಮವೊಂದರಲ್ಲಿ ಮಾಡಿದ ಭಾಷಣ ಅವರ ಓಟಕ್ಕೆ ಮುಳುವಾಯಿತು. ಬ್ರಿಟನ್‌ನ ಲೇಬರ್‌ ಪಾರ್ಟಿಯ ನಾಯಕ ನೀಲ್‌ ಕಿನ್ನೋಕ್‌ ಮಾಡಿದ್ದ ಭಾಷಣದಲ್ಲಿನ ಕೆಲವು ಭಾಗಗಳನ್ನು ಬೈಡೆನ್‌ ಯಥಾವತ್ತಾಗಿ ಎತ್ತಿಕೊಂಡಿದ್ದಾರೆಂದು ವಿವಾದವಾಯಿತು. ಇದಷ್ಟೇ ಅಲ್ಲದೇ, ದಶಕಗಳ ಹಿಂದೆ ರಾಬರ್ಟ್‌. ಎಫ್. ಕೆನಡಿ ಹಾಗೂ ಹ್ಯೂಬರ್ಟ್‌ ಹಂಫ್ರಿಯವರು ಮಾಡಿದ್ದ ಭಾಷಣಗಳನ್ನೂ ಬೈಡೆನ್‌ ನಕಲಿಸಿದ್ದಾರೆ ಎನ್ನುವ ಆರೋಪವೂ ಎದುರಾಗಿತ್ತು.

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಹರ್‌ ಘರ್‌ ತಿರಂಗಾ: ಗೌರವಕ್ಕೆ ಧಕ್ಕೆ ತರಬೇಡಿ

ಸ್ವಾತಂತ್ರ್ಯ ಅಮೃತಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಅಮೃತ ಮಹೋತ್ಸವ: ಸ್ವಾತಂತ್ರ್ಯಕ್ಕಾಗಿ ಸರ್ವಸ್ವವನ್ನೂ ತ್ಯಜಿಸಿದ್ದ ತ್ಯಾಗಿ “ಕಾರ್ನಾಡ್”

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಸ್ವಾತಂತ್ರ್ಯ ಅಮೃತ ಮಹೋತ್ಸವ: ಸ್ವಾತಂತ್ರ್ಯ ವೀರರಿಗೆ ಸಲಾಂ

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

ಅಮೃತ ಮಹೋತ್ಸವ: ಇತಿಹಾಸ ಎಂದೂ ಮರೆಯದ 10 ಮಂದಿ ಮಹಿಳಾ ಸ್ವಾತಂತ್ರ್ಯ ಹೋರಾಟಗಾರರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.