‘ಪ್ರತಿ ಜಾಗತಿಕ ವೇದಿಕೆಯಲ್ಲಿ ಕಾಶ್ಮೀರ ವಿಚಾರ’
Team Udayavani, Aug 27, 2019, 5:21 AM IST
ಇಸ್ಲಾಮಾಬಾದ್: ಪ್ರತಿಯೊಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿಯೂ ಕಾಶ್ಮೀರ ವಿಚಾರ ಪ್ರಸ್ತಾಪಿಸುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ತಿಂಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಡೆಯಲಿದ್ದು, ಅಲ್ಲೂ ಈ ವಿಚಾರ ಪ್ರಸ್ತಾಪ ಮಾಡುವುದಾಗಿ ಹೇಳಿದ್ದಾರೆ. ಭಾರತ ವಿಧಿಸಿರುವ ನಿರ್ಬಂಧ ಹಿಂಪಡೆಯುವವರೆಗೆ ಕಾಶ್ಮೀರಿಗರ ಪರವಾಗಿ ಪಾಕಿಸ್ತಾನ ನಿಲ್ಲಲಿದೆ ಎಂದು ಹೇಳಿದ್ದಾರೆ. ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಅವರ ರಾಯಭಾರಿ ಯಂತೆ ಕೆಲಸ ಮಾಡುವುದಾಗಿ ಹೇಳಿದ್ದೆ. ಅದರಂತೆಯೇ ನಡೆದುಕೊಳ್ಳುತ್ತೇನೆ ಎಂದು ಖಾನ್ ಹೇಳಿದ್ದಾರೆ. ಮುಸ್ಲಿಂ ರಾಷ್ಟ್ರಗಳು ಕಾಶ್ಮೀರ ವಿಚಾರದಲ್ಲಿ ಕೈಗೊಂಡ ನಿರ್ಧಾರದ ಬಗ್ಗೆ ಸಹಮತ ಹೊಂದಿಲ್ಲ ಎಂಬ ವಿಚಾರವನ್ನು ಪತ್ರಿಕೆಗಳಲ್ಲಿ ಓದಿದ್ದೇನೆ. ಕಾಶ್ಮೀರದ ವಿಚಾರದಲ್ಲಿ ಯಾರೂ ನಿರಾಶರಾಗುವುದು ಬೇಡ. ಕೆಲವು ದೇಶಗಳು ಆರ್ಥಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡುತ್ತಿಲ್ಲ. ಆದರೆ ಮುಂದಿನ ದಿನಗಳಲ್ಲಿ ಅವುಗಳು ಮಾತನಾಡಲಿವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!