ಐಸಿಸ್ ಸೇರಿದ್ದ ಕೇರಳದ ಮತ್ತೊಬ್ಬ ಯುವಕ ಅಫ್ಘಾನಿಸ್ತಾನದಲ್ಲಿ ಬಲಿ; ಗುಪ್ತಚರ ಇಲಾಖೆ
Team Udayavani, Aug 8, 2019, 2:59 PM IST
Representative Image
ನವದೆಹಲಿ:ಕಳೆದ ವರ್ಷ ಕೇರಳದಿಂದ ತೆರಳಿ ಐಸಿಸ್ ಸೇರಿದ್ದ ವ್ಯಕ್ತಿ ಅಫ್ಘಾನಿಸ್ತಾನ್- ಅಮೆರಿಕ ಪಡೆಯ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದಾಗಿ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಕಳೆದ 15 ದಿನಗಳಲ್ಲಿ ಅಫ್ಘಾನಿಸ್ತಾನದಲ್ಲಿ ಐಸಿಸ್ ಸೇರಿ ಸಾವನ್ನಪ್ಪಿರುವ ಕೇರಳದ ಎರಡನೇ ಯುವಕನಾಗಿದ್ದಾನೆ ಎಂದು ವರದಿ ವಿವರಿಸಿದ್ದು, ಸಾವನ್ನಪ್ಪಿದ್ದ ಯುವಕ ಸೈಫುದ್ದೀನ್ ಎಂದು ಗುರುತಿಸಲಾಗಿದೆ. ಕಳೆದ ವರ್ಷ ಕೇರಳದಿಂದ ಹಲವು ಯುವಕರು ಐಸಿಸ್ ಸೇರಲು ಅಫ್ಘಾನಿಸ್ತಾನಕ್ಕೆ ತೆರಳಿದ್ದರು.
ಕೇರಳದ ತಿರುವನಂತಪುರಂದಿಂದ 350 ಕಿಲೋ ಮೀಟರ್ ದೂರದಲ್ಲಿರುವ ಮಲಪ್ಪುರಂನ ನಿವಾಸಿ ಸೈಫುದ್ದೀನ್. ಕೇರಳದ ಮೂರು ಪ್ರಮುಖ ಜಿಲ್ಲೆಗಳಿಂದ ದೊಡ್ಡ ಸಂಖ್ಯೆಯಲ್ಲಿ ಸಿರಿಯಾ ಮತ್ತು ಇರಾಕ್ ನಲ್ಲಿ ಕಾರ್ಯಾಚರಿಸುತ್ತಿದ್ದ ಉಗ್ರಗಾಮಿ ಐಸಿಸ್ ಸಂಘಟನೆ ಸೇರಿದ್ದರು. ಇವರು ಕಾಬೂಲ್ ನಲ್ಲಿ ಐಸಿಸ್ ಜಾಲ ವಿಸ್ತರಿಸುವ ನೆಲೆಯಲ್ಲಿ ಐಸಿಸ್ ಸೇರಿರುವುದಾಗಿ ವರದಿ ವಿವರಿಸಿದೆ.
ಕೇರಳ ರಾಜ್ಯದಿಂದ ಯುವಕರು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಐಸಿಸ್ ಸೇರಲು ಸುಮಾರು 98 ಮಂದಿಯನ್ನು ಭದ್ರತಾ ಪಡೆಗಳು ಪತ್ತೆಹಚ್ಚಿದ್ದವು. ಈ ವರ್ಷದ ಜೂನ್ ತಿಂಗಳಲ್ಲಿ ಕೇರಳದಿಂದ ತೆರಳಿದ್ದ 38 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದ.
ಸೈಫುದ್ದೀನ್ 2014ರಲ್ಲಿ ಸೌದಿ ಅರೇಬಿಯಾಕ್ಕೆ ತೆರಳಿ ಉದ್ಯೋಗಕ್ಕೆ ತೆರಳಿದ್ದ. ಸೈಫುದ್ದೀನ್ ಮೊಬೈಲ್ ಸಂದೇಶದ ಮೂಲಕ ಕುಟುಂಬದ ಸದಸ್ಯರ ಜತೆ ಸಂಪರ್ಕದಲ್ಲಿದ್ದ. ಆದರೆ ತಾನು ಎಲ್ಲಿದ್ದೇನೆ, ಯಾವ ಕೆಲಸ ಮಾಡುತ್ತಿದ್ದೇನೆ ಎಂಬ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ ಎಂದು ವರದಿ ಹೇಳಿದೆ. ಏಪ್ರಿಲ್ ತಿಂಗಳಲ್ಲಿ ತನ್ನ ಸಹೋದರಿ ಜತೆ ತಾನು ಯುಎಇನಲ್ಲಿ ಧಾರ್ಮಿಕ ಸಂಬಂಧಿ ವಿಷಯ ಕಲಿಯುತ್ತಿದ್ದೇನೆ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ