ಎಸ್‌ಇಜೆಡ್‌ಗಳಿಗೆ ಕೇರಳ ಮಾದರಿ ತೆರಿಗೆ ವಿನಾಯಿತಿ ಭಾಗ್ಯ


Team Udayavani, Aug 23, 2017, 9:05 AM IST

TAX.jpg

ಬೆಂಗಳೂರು: ರಾಜ್ಯಕ್ಕೆ ಕೈಗಾರಿಕೆಗಳನ್ನು ಆಕರ್ಷಿಸಲು ಹಾಗೂ ಇರುವ ಕೈಗಾರಿಕೆಗಳನ್ನು ಉಳಿಸಿಕೊಳ್ಳಲು ವಿಶೇಷ ರಿಯಾಯಿತಿ ಮತ್ತು ಸೌಲಭ್ಯಗಳನ್ನು ಒದಗಿಸುವ ಯೋಜನೆಗಳನ್ನು ಆಗಾಗ ಘೋಷಿಸುವ ಸರ್ಕಾರ ಇದೀಗ ರಾಜ್ಯದಲ್ಲಿರುವ ವಿಶೇಷ ಆರ್ಥಿಕ ವಲಯಗಳಿಗೆ (ಎಸ್‌ಇಜೆಡ್‌) ಗ್ರಾಮ ಪಂಚಾಯಿತಿಗಳಿಂದ “ತೆರಿಗೆ ವಿನಾಯ್ತಿ
ಭಾಗ್ಯ’ ಒದಗಿಸಲು ಮುಂದಾಗಿದೆ.

ಎಸ್‌ಇಜೆಡ್‌ಗಳ ಅಭಿವೃದಿಟಛಿದಾರರು ಹಾಗೂ ಕೈಗಾರಿಕಾ ಘಟಕಗಳನ್ನು ಉತ್ತೇಜಿಸಲು ನೆರೆಯ ಕೇರಳ ರಾಜ್ಯವು “ಕೇರಳ ಪಂಚಾಯತ್‌ರಾಜ್‌ ಕಾಯ್ದೆ 1994ರ ಪ್ರಕರಣ 200ರಡಿ ತೆರಿಗೆಯಿಂದ ವಿನಾಯಿತಿ ನೀಡಿದೆ. ಅದರಂತೆ, ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಅಧಿನಿಯಮ-1993ರಲ್ಲಿ ಮಂಗಳೂರು ಎಸ್‌ಇಜೆಡ್‌ ಪ್ರದೇಶದ ಎಸ್‌ಇಜೆಡ್‌ ಅಭಿವೃದಿಟಛಿದಾರರು ಮತ್ತು ಕೈಗಾರಿಕಾ ಘಟಕಗಳನ್ನು ಉತ್ತೇಜಿಸಲು ತೆರಿಗೆಯಿಂದ ವಿನಾಯಿತಿ ನೀಡುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ಅಭಿವೃದಿಟಛಿ ಆಯುಕ್ತರು ಹಾಗೂ ನಿರ್ದೇಶಕರು ಕೋರಿಕೆ ಸಲ್ಲಿಸಿದ್ದರು. ಅದನ್ನು ಗ್ರಾಮೀಣಾಭಿವೃದಿಟಛಿ ಇಲಾಖೆ ತಾತ್ವಿಕವಾಗಿ ಒಪ್ಪಿಕೊಂಡಿದೆ.

ಮಂಗಳೂರು ವಿಶೇಷ ಆರ್ಥಿಕ ವಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ರಾಜ್ಯ ಹಾಗೂ ರಾಷ್ಟ್ರದ ರಫ್ತು ಹೆಚ್ಚಿಸುವ ದೃಷ್ಟಿಯಿಂದ ಈ ವಲಯದಲ್ಲಿ ಕಾರ್ಯನಿರ್ವಹಿಸುವ ಕಂಪನಿಗಳಿಗೆ ವಿಶೇಷ
ಸ್ಥಾನಮಾನ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಮಾದರಿಯಲ್ಲಿ ತೆರಿಗೆ ವಿನಾಯಿತಿ
ನೀಡಬೇಕಾಗುತ್ತದೆ. ಇದು ಸರ್ಕಾರಿ ಆದೇಶವಾಗಿ ಜಾರಿಗೊಂಡರೆ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಜ್ಯದ ಎಲ್ಲಾ ಎಸ್‌ಇಜೆಡ್‌ಗಳಿಗೆ ಗ್ರಾಪಂಗಳು ವಿಧಿಸುವ ತೆರಿಗೆಯಿಂದ ವಿನಾಯಿತಿ ಸಿಗಲಿದೆ. ತೆರಿಗೆ ವಿನಾಯಿತಿ ನೀಡುವುದರಿಂದ
ಗ್ರಾಪಂಳಿಗೆ ಉಂಟಾಗುವ ಆರ್ಥಿಕ ನಷ್ಟವನ್ನು ಅರ್ಧದಷ್ಟನ್ನು ಸರ್ಕಾರವೇ ಭರಿಸಲಿದ್ದು, ರಾಜ್ಯ ಸರ್ಕಾರವು ಗ್ರಾಪಂಗಳಿಗೆ ನೀಡುತ್ತಿರುವ ಶಾಸನಾತ್ಮಕ ಅನುದಾನಕ್ಕೆ ಸರಾಸರಿ ಶೇ.50ರಷ್ಟು ಹೆಚ್ಚು ಬಿಡುಗಡೆಗೊಳಿಸಲಾಗುವುದು. ಇದಕ್ಕೆ ಗ್ರಾಮೀಣಾಭಿವೃದಿಟಛಿ ಸಚಿವರು ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ. ಇದರ ಜಾರಿಗೆ ಬೇಕಾಗುವ ಸಿದಟಛಿತೆಗಳನ್ನು ಮಾಡಿಕೊಳ್ಳಬೇಕಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾನೂನು ತಿದ್ದುಪಡಿ: ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ- 1993ರ ಪ್ರಕರಣ 199ರಂತೆ ಗ್ರಾಮ ಪಂಚಾಯಿತಿಗಳು ಆ ಪಂಚಾಯಿತಿ ವ್ಯಾಪ್ತಿಯ ಕೃಷಿ ತೆರಿಗೆ ನಿರ್ಧರಣೆಗೆ ಒಳಪಡದ ಕಟ್ಟಡಗಳು
ಮತ್ತು ಭೂಮಿಗಳ ಮೇಲೆ ಸ್ವತ್ತಿನ ಬಂಡವಾಳ ಮೌಲ್ಯದ ಆಧಾರದಲ್ಲಿ ಹಾಗೂ ಗ್ರಾಮ ಪಂಚಾ ಯಿತಿಯು ಕುಡಿಯುವುದಕ್ಕೆ ಮತ್ತು ಇತರ ಉದ್ದೇಶಗಳಿಗಾಗಿ ನೀರು ಸರಬರಾಜು ಮಾಡಲು ತೆರಿಗೆ ವಿಧಿಸಲು ಅವಕಾಶ ನೀಡಲಾಗಿದೆ. ಆದರೆ, ಕಾಯ್ದೆಯಲ್ಲಿ ಕೈಗಾರಿಕೆಗಳಿಗೆ ತೆರಿಗೆ ವಿನಾಯಿತಿಗೆ ಅವಕಾಶವಿಲ್ಲ. ಹಾಗಾಗಿ ಕೈಗಾರಿಕೆಗಳಿಗೆ
ತೆರಿಗೆ ವಿನಾಯಿತಿ ನೀಡುವ ಸಲುವಾಗಿ 1993ರ ಅಧಿನಿಯಮದ ನಾಲ್ಕನೇ ಅನುಸೂಚಿಗೆ ಮತ್ತು ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ಗ್ರಾಮ ಪಂಚಾಯಿತಿ ತೆರಿಗೆಗಳು ಮತ್ತು ಶುಲ್ಕಗಳು) (ತಿದ್ದುಪಡಿ) ನಿಯಮಗಳು-2017ಕ್ಕೆ ತಿದ್ದುಪಡಿ ತರಲಾಗಿದೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.