
ಮತ್ತೆ ಕಾಣಿಸಿಕೊಂಡ ಕಿಮ್ ಪುತ್ರಿ; ಉ.ಕೊರಿಯಾದಲ್ಲಿ ಆಗಲಿದೆಯೇ ಅಧಿಕಾರ ಹಸ್ತಾಂತರ?
Team Udayavani, Nov 28, 2022, 8:00 AM IST

ಸಿಯೋಲ್: ಉತ್ತರ ಕೊರಿಯಾದ ಆಡಳಿತದಲ್ಲಿ ಬದಲಾವಣೆ ಆಗುತ್ತಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹಾಲಿ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ನ ಪುತ್ರಿ ಕಿಮ್ ಜು ಉಇ ಭಾನುವಾರ ಶೀಘ್ರದಲ್ಲಿಯೇ ಉಡಾಯಿಸಲಾಗುತ್ತದೆ ಎಂದು ಹೇಳಲಾಗಿರುವ ಖಂಡಾಂತರ ಕ್ಷಿಪಣಿ (ಐಸಿಬಿಎಂ)ಯ ಸಿದ್ಧತೆಯನ್ನು ಪರಿಶೀಲಿಸಿದ್ದಾಳೆ.
ತಂದೆಯ ಜತೆಗೆ “ಹ್ವಸಾಂಗ್-17′ ಎಂಬ ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತೂಯ್ಯುವ ಸಾಮರ್ಥ್ಯ ಹೊಂದಿರುವ ಕ್ಷಿಪಣಿಯ ಸಿದ್ಧತೆಯನ್ನು ಆಕೆ ಪರಿಶೀಲಿಸಿದ್ದಾಳೆ. ಈ ಬಗ್ಗೆ ಸರ್ಕಾರಿ ಸುದ್ದಿ ಸಂಸ್ಥೆ “ಕೆಸಿಎನ್ಎ’ ಫೋಟೋ ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡಿದೆ.
ಇತ್ತೀಚಿನ ಹಲವು ಸಂದರ್ಭಗಳಲ್ಲಿ ಕಿಮ್ ಜಾಂಗ್ ಉನ್ನ ಆರೋಗ್ಯ ವಿಷಮಿಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದ್ದ ಹಿನ್ನೆಲೆಯಲ್ಲಿ ಈ ಅಂಶ ಮಹತ್ವ ಪಡೆದಿದೆ. ಪುತ್ರಿಯ ವಯಸ್ಸು 12 ಅಥವಾ 13 ಇರಬಹುದು ಎಂದು ಹೇಳಲಾಗಿದೆ.
ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ ಸರ್ವಾಧಿಕಾರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಪುತ್ರನಿದ್ದಾನೆ. ಒಂದು ವೇಳೆ ಪುತ್ರಿಗೆ ಮುಂದಿನ ನಾಯಕತ್ವ ಎನ್ನುವುದು ಖಚಿತವಾದರೆ ಆತನ ಕುಟುಂಬದ ನಾಲ್ಕನೇ ತಲೆಮಾರಿಗೆ ಅಧಿಕಾರ ಹಸ್ತಾಂತರವಾಗಲಿದೆ ಎಂಬ ವಿಶ್ಲೇಷಣೆ ನಡೆದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಲಂಕಾದಂತೆಯೇ ದಿವಾಳಿಯಾಗುವಂಚಿಗೆ ಪಾಕ್

ಹೆಚ್ಚುತ್ತಿದೆ ದೇಗುಲ ದಾಳಿ; ಖಲಿಸ್ಥಾನ ಪ್ರತ್ಯೇಕತಾವಾದಿಗಳ ಉಪಟಳ

ಕೆನಡಾದ ಹಿಂದೂ ದೇವಸ್ಥಾನದಲ್ಲಿ ಭಾರತ ವಿರೋಧಿ ಬರಹಗಳು; ವ್ಯಾಪಕ ಆಕ್ರೋಶ

1000 ಮಂದಿಯ ಕಣ್ಣ ದೃಷ್ಟಿ ಬರಲು ಹಣ ಸಹಾಯ ಮಾಡಿದ ಮಿ.ಬೀಸ್ಟ್ : ಅಂಧರ ಬಾಳಿಗೆ ಬೆಳಕಾದ ಯೂಟ್ಯೂಬರ್

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

38 ವರ್ಷಗಳ ನಂತರ,ನಾನು ಚಿತ್ರದ ಮುಖ್ಯ ಪೋಸ್ಟರ್ನಲ್ಲಿದ್ದೇನೆ: ಅನುಪಮ್ ಖೇರ್ ಸಂಭ್ರಮ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ