ಕುಲಭೂಷಣ್ ಜಾಧವ್: ಇಂದಿನಿಂದ ವಿಚಾರಣೆ
Team Udayavani, Feb 18, 2019, 1:00 AM IST
ನ್ಯೂಯಾರ್ಕ್: ಪುಲ್ವಾಮಾ ದಾಳಿಯಿಂದಾಗಿ ಭಾರತ ಹಾಗೂ ಪಾಕಿಸ್ಥಾನದ ಮಧ್ಯೆ ಬಿಕ್ಕಟ್ಟು ಸೃಷ್ಟಿಯಾಗಿರುವಾಗಲೇ, ಪಾಕಿಸ್ಥಾನದಲ್ಲಿ ಬಂಧಿತ ಭಾರತೀಯ ಕುಲಭೂಷಣ್ ಜಾಧವ್ ಗಲ್ಲು ಶಿಕ್ಷೆ ತಡೆಗೆ ಭಾರತವು ವಿಶ್ವಸಂಸ್ಥೆ ನ್ಯಾಯಾಲಯದ ಮೆಟ್ಟಿಲೇರಿದೆ. ಸೋಮವಾರ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಈ ಹಿಂದೆ ಅಂತಾರಾಷ್ಟ್ರೀಯ ನ್ಯಾಯಾಲಯವು ಭಾರತದ ವಾದಕ್ಕೆ ಮನ್ನಣೆ ನೀಡಿದ್ದರಿಂದ, ಜಾಧವ್ ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡಲಾಗಿತ್ತು. ಈಗ ಈ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತ ವಾದ ಮಂಡಿಸಲಿದೆ. ಈ ಪ್ರಕ್ರಿಯೆ ಫೆ. 21 ರವರೆಗೆ ನಡೆಯಲಿದೆ. ಭಾರತದ ವಾದಕ್ಕೆ ಮನ್ನಣೆ ಲಭ್ಯವಾದರೆ ಜಾಧವ್ ಬಿಡುಗಡೆಗೆ ಆದೇಶ ನೀಡುವ ಸಾಧ್ಯತೆಯಿದೆ. ಭಾರತದ ಗೂಢಚಾರ್ಯೆ ಆರೋಪದಡಿ, ಪಾಕಿಸ್ಥಾನದ 2017ರ ಏಪ್ರಿಲ್ನಲ್ಲಿ ಇರಾನ್ನಿಂದ ಇವರನ್ನು ಬಂಧಿಸಿತ್ತು. ಪುಲ್ವಾಮಾ ದಾಳಿ ನಡೆದ ಹಿನ್ನೆಲೆಯಲ್ಲೇ ಈ ವಿಚಾರಣೆ ನಡೆಯಲಿರುವುದರಿಂದ ಕೋರ್ಟ್ನಲ್ಲಿ ಭಾರತದ ವಾದಕ್ಕೆ ಇನ್ನಷ್ಟು ಪುಷ್ಟಿ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ