ಸೌದಿಯಲ್ಲಿನ್ನು ಕಾರ್ಮಿಕ ಸ್ನೇಹಿ ನಿಯಮ

ಕಾರ್ಮಿಕರಿಗಿದ್ದ ಹಲವು ನಿರ್ಬಂಧ ತೆರವು

Team Udayavani, Nov 5, 2020, 6:00 AM IST

ಸೌದಿಯಲ್ಲಿನ್ನು ಕಾರ್ಮಿಕ ಸ್ನೇಹಿ ನಿಯಮ

ಸಾಂದರ್ಭಿಕ ಚಿತ್ರ

ದುಬಾೖ: ಭಾರತೀಯರ ಸಹಿತ ಹೊಟ್ಟೆಪಾಡಿಗಾಗಿ ಸೌದಿ ಅರೇಬಿಯಾಕ್ಕೆ ತೆರಳುವ ವಲಸೆ ಕಾರ್ಮಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂಥ ಸುದ್ದಿಯಿದು. ಹಲವು ಕಠಿನ ನಿರ್ಬಂಧಗಳಿಂದ ವಲಸೆ ಕಾರ್ಮಿಕರನ್ನು ಮುಕ್ತಗೊಳಿಸುವಂಥ ಮಹತ್ವದ ನಿರ್ಧಾರವನ್ನು ಸೌದಿ ಅರೇಬಿಯಾ ಸರಕಾರ ಕೈಗೊಂಡಿದೆ. ಕಾರ್ಮಿಕ ಕಾನೂನಿನಲ್ಲಿ ಸುಧಾರಣೆಯನ್ನು ತರುವುದಾಗಿ ಬುಧವಾರ ಅದು ಘೋಷಿಸಿದ್ದು, ಉದ್ಯೋಗದಾತರ ಷರತ್ತುಗಳು, ಕಠಿನ ನಿಯಮಗಳು ಮತ್ತು ದೌರ್ಜನ್ಯದಿಂದ ನೊಂದಿದ್ದ ವಲಸೆ ಕಾರ್ಮಿಕರಿಗೆ ನೆಮ್ಮದಿ ನೀಡುವ ಸಾಧ್ಯತೆಗಳಿವೆ.

ಕೋಟ್ಯಂತರ ವಲಸೆ ಕಾರ್ಮಿಕರು, ಅದರಲ್ಲೂ ವಿಶೇಷವಾಗಿ ಕಡಿಮೆ ಸಂಬಳದ ಕೆಳ ಹಂತದ ಕಾರ್ಮಿಕರಿಗೆ ಅನುಕೂಲವಾಗುವಂತೆ ನಿಯಮಗಳಲ್ಲಿ ಕೆಲವು ಮಹತ್ತರ ಬದಲಾವಣೆ ಮಾಡಲಾಗಿದೆ. ಕೆಳ ಹಂತದ ಕೆಲಸಗಳಲ್ಲಿ ನಿರತರಾಗುವ ಕಾರ್ಮಿಕರಿಗೆ ಒಬ್ಬ ಉದ್ಯೋಗದಾತನಿಂದ ಮತ್ತೂಬ್ಬ ಉದ್ಯೋಗದಾತನಲ್ಲಿಗೆ ಪ್ರಾಯೋಜಕತ್ವ (ಸ್ಪಾನ್ಸರ್‌ಶಿಪ್‌) ಬದಲಿಸಲು ಅನುಕೂಲ ಕಲ್ಪಿಸಲಾಗಿದೆ.

ಅಗತ್ಯ ಬಿದ್ದರೆ ಸೌದಿ ಅರೇಬಿಯಾದಿಂದ ವಾಪಸ್‌ ಹೋಗಿ, ಮತ್ತೂಬ್ಬ ಉದ್ಯೋಗದಾತನ ಆಶ್ರಯದಲ್ಲಿ ಮತ್ತೆ ಆಗಮಿಸಲು ಅವಕಾಶ ಕಲ್ಪಿಸಲಾಗಿದೆ. ಕಾರ್ಮಿಕರಿಗೆ ಅನುಕೂಲ ಮಾನವ ಸಂಪನ್ಮೂಲ ಮತ್ತು ಸಾಮಾಜಿಕ ಅಭಿವೃದ್ಧಿ ಖಾತೆಯ ಉಪ ಸಚಿವ ಅಬ್ದುಲ್ಲಾ ಬಿನ್‌ ನಾಸ್ಸೆರ್‌ ಅಬುತ್‌ನೈನ್‌ ಕೊಲ್ಲಿ ರಾಷ್ಟ್ರ ಕೈಗೊಂಡ ನಿಯಮಗಳ ಬಗ್ಗೆ ವಿವರಣೆ ನೀಡಿದ್ದಾರೆ. 2021ರ ಮಾರ್ಚ್‌ನಿಂದ ಹೊಸ ಕಾನೂನು ಜಾರಿಯಾಗಲಿದೆ. ಭಾರತ ಸಹಿತ ಹಲವು ರಾಷ್ಟ್ರಗಳ 1 ಕೋಟಿ ಕಾರ್ಮಿಕರಿಗೆ ಇದರಿಂದ ಲಾಭವಾಗಲಿದೆ.

ಬೇಗಂ ಹೇಳುವಂತೆ ಪ್ರಾಯೋಜಕತ್ವ ಪದ್ಧತಿ (ಸ್ಥಳೀಯವಾಗಿ ಕರೆಯು ವಂತೆ ಕಫಾಲಾ) ಪೂರ್ಣವಾಗಿ ರದ್ದಾಗಿಲ್ಲ. ಇಲೆಕ್ಟ್ರಿಕಲ್‌, ಮನೆಗೆಲಸ ಮತ್ತಿತರ ಕೆಲಸಗಳನ್ನು ಹುಡುಕಿಕೊಂಡು ಬರುವವರಿಗೆ ಪ್ರಾಯೋಜಕತ್ವ ವ್ಯವಸ್ಥೆ ಬೇಕಾಗುತ್ತದೆ. ಎಂದು ಅವರು ಹೇಳುತ್ತಾರೆ. ಕತಾರ್‌ನಲ್ಲಿ ಈಗಾಗಲೇ ಜಾರಿಕೊಲ್ಲಿ ರಾಷ್ಟ್ರಗಳಲ್ಲಿ ಒಂದಾಗಿರುವ ಕತಾರ್‌ನಲ್ಲಿ ಈಗಾಗಲೇ ಇಂಥ ಕಾನೂನು ಜಾರಿಯಾಗಿದೆ.

ಯಾವ ರೀತಿ ನೆರವು?
ಹೊಸ ನಿಯಮದ ಬಗ್ಗೆ ಪ್ರತಿಕ್ರಿಯೆ ನೀಡಿದ ಹ್ಯೂಮನ್‌ ರೈಟ್ಸ್‌ ವಾಚ್‌ ಸಂಸ್ಥೆಯ ಸಂಶೋಧಕಿ ರೋತ್ನಾ ಬೇಗಂ, ಇದು ವಲಸೆ ಕಾರ್ಮಿಕರಿಗೆ ಆಂಶಿಕವಾಗಿ ನೆರವು ನೀಡಲಿದೆ. ವಲಸೆ ಕಾರ್ಮಿಕರ ಸ್ಥಿತಿ ಈಗ ಇರುವುದಕ್ಕಿಂತ ಸುಧಾರಣೆಯಾಗಲಿದೆ. ಹಾಲಿ ಇರುವ ಪ್ರಾಯೋಜಕತ್ವ ವ್ಯವಸ್ಥೆಯಲ್ಲಿ ವಿದೇಶಗಳಿಂದ ಆಗಮಿಸಿದ ಕಾರ್ಮಿಕರ ಪಾಸ್‌ಪೋರ್ಟ್‌ ಮತ್ತು ಇತರ ದಾಖಲೆಗಳನ್ನು ಉದ್ಯೋಗದಾತರು ವಶಪಡಿಸಿಕೊಳ್ಳುತ್ತಿದ್ದರು. ಜತೆಗೆ ಕಾರ್ಮಿಕರನ್ನು ಹೆಚ್ಚಿನ ಅವಧಿಗೆ ದುಡಿಸಿಕೊಳ್ಳುವುದಲ್ಲದೆ, ಹಿಂಸೆ ನೀಡುತ್ತಿದ್ದರು. ಜತೆಗೆ ಹೊಸ ಕೆಲಸ ಹುಡುಕಿಕೊಳ್ಳಲು, ಉದ್ಯೋಗದಾತರನ್ನು ಬದಲು ಮಾಡಿಕೊಳ್ಳಲೂ ಅವಕಾಶವಿರಲಿಲ್ಲ. ಹೊಸ ವ್ಯವಸ್ಥೆಯಲ್ಲಿ ಈ ಅಂಶಕ್ಕೆ ಕಡಿವಾಣ ಬೀಳಲಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.