ಮಧ್ಯಪ್ರಾಚ್ಯದಲ್ಲಿ ಆಹಾರದ ಕೊರತೆ!ಹಲವು ದೇಶಗಳಿಗೆ ತಟ್ಟಿತು ಉಕ್ರೇನ್‌ ಯುದ್ಧದ ಬಿಸಿ


Team Udayavani, Mar 29, 2022, 7:20 AM IST

ಮಧ್ಯಪ್ರಾಚ್ಯದಲ್ಲಿ ಆಹಾರದ ಕೊರತೆ!ಹಲವು ದೇಶಗಳಿಗೆ ತಟ್ಟಿತು ಉಕ್ರೇನ್‌ ಯುದ್ಧದ ಬಿಸಿ

ಕೀವ್‌/ಮಾಸ್ಕೋ: ರಷ್ಯಾ-ಉಕ್ರೇನ್‌ ಯುದ್ಧವು ಜಗತ್ತಿನ ಹಲವು ಬಡ ರಾಷ್ಟ್ರಗಳ ಮೇಲೆ ತೀವ್ರ ಪರಿಣಾಮ ಬೀರಿದೆ. ಮಧ್ಯಪ್ರಾಚ್ಯದ ಅನೇಕ ದೇಶಗಳಲ್ಲಿ ಆಹಾರದ ಕೊರತೆ ಉಂಟಾಗುತ್ತಿದ್ದು, ಜನ ಪರದಾಡುವಂತಾಗಿದೆ.

ಇರಾಕ್‌, ಸಿರಿಯಾ, ಸುಡಾನ್‌, ಲೆಬನಾನ್‌, ಯೆಮೆನ್‌ನಂತಹ ಬಡರಾಷ್ಟ್ರಗಳ ಪರಿಸ್ಥಿತಿ ದಯನೀಯವಾಗಿದೆ.

ಇದಕ್ಕೆ ಮುಖ್ಯ ಕಾರಣವಿಷ್ಟೇ: ಜಗತ್ತಿನಲ್ಲಿ 3ರಲ್ಲಿ 1ರಷ್ಟು ಗೋಧಿ, ಬಾರ್ಲಿಯನ್ನು ರಫ್ತು ಮಾಡುವುದು ರಷ್ಯಾ ಮತ್ತು ಉಕ್ರೇನ್‌. ಜೊತೆಗೆ ಸೂರ್ಯಕಾಂತಿ ಎಣ್ಣೆ, ಇತರೆ ಆಹಾರಧಾನ್ಯ ಗಳೂ ಆ ದೇಶದಿಂದಲೇ ಬರುವುದು. ಈಗ ಯುದ್ಧದಿಂದಾಗಿ ಇವುಗಳ ಸರಬರಾಜು ಸ್ಥಗಿತಗೊಂಡಿವೆ. ಹೀಗಾಗಿ ತಮ್ಮ ಊಟದ ಕಥೆಯೇನು ಎಂದು ಈ ದೇಶಗಳ ಮನೆಮನೆಗಳಲ್ಲಿ ಚಿಂತೆ ಶುರುವಾಗಿದೆ.

ಜತೆಗೆ, ಅಗತ್ಯ ವಸ್ತುಗಳ ಬೆಲೆಯೇರಿಕೆ ಕೂಡ ಇಲ್ಲಿನ ಜನರ ಸಂಕಷ್ಟವನ್ನು ದುಪ್ಪಟ್ಟಾಗಿಸಿದೆ. ಯುದ್ಧಪೂರ್ವದಲ್ಲೇ ಪಶ್ಚಿಮ ಏಷ್ಯಾ ದೇಶ ಲೆಬನಾನ್‌ನಲ್ಲಿ ತೀವ್ರ ಆರ್ಥಿಕ ಕುಸಿತ ಎದುರಾಗಿತ್ತು. ಈಗಂತೂ ಆಹಾರ ಧಾನ್ಯಗಳ ಬೆಲೆ ಗಗನಕ್ಕೇರಿ, ದಿನನಿತ್ಯದ ಆಹಾರಕ್ಕೂ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇದುವರೆಗೆ ಕನಿಷ್ಠ ಬ್ರೆಡ್‌ಗಳಾದರೂ ಕಡಿಮೆ ಬೆಲೆಗೆ ಸಿಗುತ್ತವೆ ಎಂದು ಅಲ್ಲಿ ಕುಟುಂಬ ನಿರ್ವಹಣೆ ಮಾಡುವ ಮಹಿಳೆಯರು ಧೈರ್ಯ ವಾಗಿದ್ದರು. ಇನ್ನು ಮುಂದೆ ಅದೂ ಸಿಕ್ಕುವುದು ಕಷ್ಟವಾಗಿದೆ.

ಮತ್ತೆ ಕೊಲೆ ಯತ್ನ: ಉಕ್ರೇನ್‌ ಅಧ್ಯಕ್ಷರ ಕೊಲೆ ಗೆ ರಷ್ಯಾ ನಡೆಸಿರುವ ಯತ್ನವು ಸತತ 3ನೇ ಬಾರಿಗೆ ವಿಫ‌ಲವಾಗಿದೆ. ಝೆಲೆನ್‌ಸ್ಕಿ ಅವರನ್ನು ಹತ್ಯೆಗೈಯ್ಯ ಲೆಂದು ಬಂದಿದ್ದ ರಷ್ಯಾದ ವಿಶೇಷ ಪಡೆಯ 25 ಮಂದಿಯನ್ನು ಉಕ್ರೇನ್‌ನ ಅಧಿಕಾರಿಗಳು ಸ್ಲೊವೇಕಿಯಾ- ಹಂಗೇರಿ ಗಡಿಯಲ್ಲಿ ಸೆರೆಹಿಡಿದಿದ್ದಾರೆ.

ಹನಿಕೇನ್‌ ಗುಡ್‌ಬೈ: ಜಗತ್ತಿನ ಪ್ರಮುಖ ಬಿಯರ್‌ ಕಂಪನಿ ಹನಿಕೇನ್‌ ಈಗ ರಷ್ಯಾದಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದೆ. ಯುದ್ಧ ಖಂಡಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.