ಗಡಿಯಲ್ಲಿ ಭಾರತದ 44 ಸೇತುವೆ ಉದ್ಘಾಟನೆಗೊಂಡ ಬೆನ್ನಲ್ಲೇ ಚೀನಾ ಆಕ್ರೋಶ ವ್ಯಕ್ತಪಡಿಸಿದ್ದೇಕೆ?
ಒಟ್ಟು 7 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಸೇತುವೆಗಳು ನಿರ್ಮಾಣಗೊಂಡಿದೆ
Team Udayavani, Oct 13, 2020, 6:54 PM IST
ನವದೆಹಲಿ/ಬೀಜಿಂಗ್: ಗಡಿ ಪ್ರದೇಶದಲ್ಲಿ ಸೇನೆಗೆ ಅಗತ್ಯವಾಗಿರುವ ರಸ್ತೆ, ಸೇತುವೆಗಳನ್ನು ನಿರ್ಮಿಸುವ ಸಂಸ್ಥೆಯಾದ ಬಿಆರ್ ಒ ನಿರ್ಮಿಸಿರುವ 44 ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದ ಬೆನ್ನಲ್ಲೇ ಚೀನಾ ಇದನ್ನು ಖಂಡಿಸಿದ್ದು, ಲಡಾಖ್ ಅನ್ನು ಭಾರತ ಕಾನೂನು ಬಾಹಿರವಾಗಿ ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿರುವುದಾಗಿ ಆರೋಪಿಸಿದೆ.
ಗಡಿಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಘರ್ಷ ಮುಂದುವರಿದಿದ್ದು, ಏತನ್ಮಧ್ಯೆ ಲಡಾಖ್ ಮತ್ತು ಅರುಣಾಚಲ ಪ್ರದೇಶವನ್ನು ಭಾರತದ ಭಾಗ ಎಂದು ಪರಿಗಣಿಸುವುದಿಲ್ಲ ಎಂಬುದಾಗಿ ಚೀನಾ ಮತ್ತೊಮ್ಮೆ ಪುನರುಚ್ಚರಿಸಿದೆ.
ರಾಜ್ ನಾಥ್ ಸಿಂಗ್ ಅವರು ಮಹತ್ವಪೂರ್ಣವಾದ ಸುಮಾರು 44 ಸೇತುವೆಗಳನ್ನು ಸೋಮವಾರ (ಅಕ್ಟೋಬರ್ 12, 2020) ಉದ್ಘಾಟಿಸಿದ್ದರು. ಅಲ್ಲದೇ ಅರುಣಾಚಲ ಪ್ರದೇಶದಲ್ಲಿ ನಿಚಿಪು ಸುರಂಗ ನಿರ್ಮಾಣಕ್ಕೂ ಅವರು ಶಿಲಾನ್ಯಾಸ ನೆರವೇರಿಸಿದ್ದರು. ಒಟ್ಟು 7 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಸೇತುವೆಗಳು ನಿರ್ಮಾಣಗೊಂಡಿದ್ದವು. ಇವು ಟಿ-90 ಯುದ್ಧ ಟ್ಯಾಂಕ್ ಗಳ ಭಾರವನ್ನು ತಾಳಿಕೊಳ್ಳುವಂಥ ಸಾಮರ್ಥ್ಯ ಹೊಂದಿದೆ.
ಲಡಾಖ್ ಎಲ್ ಎಸಿ ಸಮೀಪ ಗಡಿ ಕ್ಯಾತೆ ತೆಗೆದಿರುವ ಚೀನಾಕ್ಕೆ ಭಾರತ ಸೆಡ್ಡು ಹೊಡೆದಿರುವುದು ತೀವ್ರ ಮುಖಭಂಗವಾಗಿದ್ದು, ಏತನ್ಮಧ್ಯೆ ಭಾರತ ಆಯಾ ಕಟ್ಟಿನ ಸ್ಥಳದಲ್ಲಿ ಸೇನೆಗೆ ಬೇಕಾದ ಅಗತ್ಯ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿರುವುದು ಚೀನಾಕ್ಕೆ ಮರ್ಮಾಘಾತ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ