ಭೂಕುಸಿತ ಉಂಟಾಗಿ ಮಣ್ಣಿನಡಿ ಹೂತು ಹೋದ ಬಸ್; 27 ಮಂದಿ ದುರ್ಮರಣ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
Team Udayavani, Dec 6, 2022, 8:37 AM IST
ನವದೆಹಲಿ: ಭೂಕುಸಿತ ಉಂಟಾಗಿ 27 ಮಂದಿ ಮೃತರಾದ ಘಟನೆ ಕೊಲಂಬಿಯಾದ ವಾಯುವ್ಯ ಪ್ರದೇಶದಲ್ಲಿ ಡಿ.4 ( ಭಾನುವಾರ) ನಡೆದಿದೆ ಎಂದು ವರದಿ ತಿಳಿಸಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿದೆ. ಕೊಲಂಬಿಯಾದ ರಾಜಧಾನಿ ಬೊಗೋಟಾದಿಂದ ಸುಮಾರು 230 ಕಿಮೀ ದೂರದಲ್ಲಿರುವ (140 ಮೈಲುಗಳು) ರಿಸಾರಾಲ್ಡಾ ಪ್ರಾಂತ್ಯದ ಪ್ಯೂಬ್ಲೋ ರಿಕೊ ಮತ್ತು ಸಾಂಟಾ ಸಿಸಿಲಿಯಾ ಗ್ರಾಮಗಳ ನಡುವೆ ಭೂಕುಸಿತ ಉಂಟಾಗಿದೆ.
ವರದಿಯ ಪ್ರಕಾರ ಬಸ್ವೊಂದರಲ್ಲಿ 25 ಮಂದಿ ಪ್ರಯಣಿಸುತ್ತಿದ್ದರು. ಇದರ ಹಿಂದೆಯೂ ಕೆಲ ವಾಹನಗಳ ಸಂಚಾರಿಸುತ್ತಿದ್ದವು ಏಕಾಏಕಿ ಭೂಕುಸಿತ ಉಂಟಾದ ಪರಿಣಾಮ ಬಸ್ ಮಣ್ಣಿನಡಿಯಲ್ಲಿ ಹೂತು ಹೋಗಿದ್ದು, ಸುಮಾರು 27 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿದು ತಿಳಿಸಿದೆ.
ಘಟನೆ ಬಗ್ಗೆ ಕೊಲಂಬಿಯಾ ಗುಸ್ಟಾವೊ ಪೆಟ್ರೋ ಮಾಹಿತಿ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. ರಿಸಾರಾಲ್ಡಾದ ಪ್ಯೂಬ್ಲೊ ರಿಕೊದಲ್ಲಿ ಸಂಭವಿಸಿದ ದುರಂತದಲ್ಲಿ ಮೂವರು ಅಪ್ರಾಪ್ತ ವಯಸ್ಕರು ಸೇರಿದಂತೆ 27 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾನು ದುಃಖದಿಂದ ಘೋಷಿಸುತ್ತಿದ್ದೇನೆ” ಪೆಟ್ರೋ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಬಸ್ಸಿನಲ್ಲಿದ್ದವರಲ್ಲಿ ಐವರನ್ನು ಜೀವಂತವಾಗಿ ರಕ್ಷಿಸಲಾಗಿದ್ದು,ಮಣ್ಣಿನಡಿ ಸಿಲುಕಿದವರನ್ನು ಹೊರ ತೆಗೆಯುವ ಕಾರ್ಯಚರಣೆ ನಡೆಸಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ