
26/11 ದಾಳಿಕೋರರಿಗೆ ತರಬೇತಿ; ವಿಶ್ವಸಂಸ್ಥೆ ಗೊತ್ತುಪಡಿಸಿದ ಉಗ್ರ ಭುಟ್ಟಾವಿ ಅಂತ್ಯ
ಹಣಕಾಸು ನೆರವು ಒದಗಿಸಿದ್ದಕ್ಕಾಗಿ ಶಿಕ್ಷೆಯಾಗಿತ್ತು
Team Udayavani, May 31, 2023, 4:34 PM IST

ಇಸ್ಲಾಮಾಬಾದ್ : 2008 ರ 26/11 ಮುಂಬೈ ಭಯೋತ್ಪಾದಕ ದಾಳಿಗೆ ಲಷ್ಕರ್-ಎ-ತೊಯ್ಬಾ ದಾಳಿಕೋರ ಉಗ್ರರಿಗೆ ತರಬೇತಿ ನೀಡಿದ ಮತ್ತು ಕನಿಷ್ಠ ಎರಡು ಸಂದರ್ಭಗಳಲ್ಲಿ ಸಂಘಟನೆಯ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸಿದ್ದ ಹಫೀಜ್ ಅಬ್ದುಲ್ ಸಲಾಮ್ ಭುಟ್ಟಾವಿ ಪಂಜಾಬ್ ಪ್ರಾಂತ್ಯದ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ.
ವಿಶ್ವಸಂಸ್ಥೆಯಿಂದ ಗೊತ್ತುಪಡಿಸಿದ ಭಯೋತ್ಪಾದಕ ಭುಟ್ಟಾವಿಗೆ ಹಣಕಾಸು ನೆರವು ಒದಗಿಸಿದ್ದಕ್ಕಾಗಿ ಶಿಕ್ಷೆಯಾಗಿತ್ತು ಎಂದು ಆತನ ಸಹಾಯಕ ಬುಧವಾರ ಹೇಳಿದ್ದಾರೆ.
ಪಂಜಾಬ್ನ ಮುರಿಡ್ಕೆಯಲ್ಲಿ ಎಲ್ಇಟಿ ಪ್ರಧಾನ ಕಚೇರಿಯನ್ನು ಸ್ಥಾಪಿಸಿದ ಭುಟ್ಟಾವಿ, ಕಾನೂನುಬಾಹಿರ ಜಮಾತ್-ಉದ್-ದವಾ (ಜೆಯುಡಿ) ಮುಖ್ಯಸ್ಥ ಮತ್ತು ಮುಂಬೈ ದಾಳಿಯ ಮಾಸ್ಟರ್ಮೈಂಡ್ ಹಫೀಜ್ ಸಯೀದ್ಗೆ ಉಪನಾಯಕನಾಗಿದ್ದ. ಜೆಯುಡಿ ಎಲ್ಇಟಿಯ ಮುಂಚೂಣಿ ಸಂಘಟನೆಯಾಗಿದೆ.
“77 ವರ್ಷದ ಭುಟ್ಟಾವಿ ಭಯೋತ್ಪಾದನೆ ಹಣಕಾಸು ಪ್ರಕರಣದಲ್ಲಿ ಅಕ್ಟೋಬರ್ 2019 ರಿಂದ ಲಾಹೋರ್ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಜಿಲ್ಲಾ ಜೈಲು ಶೇಖುಪುರದಲ್ಲಿ ಬಂಧಿಯಾಗಿದ್ದ. ಮೇ 29 ರಂದು ಎದೆಯಲ್ಲಿ ತೀವ್ರವಾದ ನೋವನ್ನು ಅನುಭವಿಸಿದ್ದು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಹೃದಯ ಸ್ತಂಭನದಿಂದಾಗಿ ಮೃತಪಟ್ಟರು ಎಂದು ಘೋಷಿಸಲಾಯಿತು”ಎಂದು ಜೆಯುಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಮುರಿಡ್ಕೆಯಲ್ಲಿರುವ LeT/JuD ಪ್ರಧಾನ ಕಛೇರಿಯಲ್ಲಿ ಅಂತ್ಯಕ್ರಿಯೆ ನಡೆದಿದ್ದು ಹೆಚ್ಚಿನ ಸಂಖ್ಯೆಯ ನಿಷೇಧಿತ ಸಂಘಟನೆಯ ಬೆಂಬಲಿಗರು ಹೆಚ್ಚಿನ ಭದ್ರತೆಯ ನಡುವೆ ಭಾಗವಹಿಸಿದರು.
2019 ರಿಂದ ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಬಹು ಶಿಕ್ಷೆ ಅನುಭವಿಸುತ್ತಿರುವ ಕೋಟ್ ಲಖ್ಪತ್ ಜೈಲಿನಲ್ಲಿರುವ ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್, ಭುಟ್ಟವಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತನಗೆ ಅವಕಾಶ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರೂ ಅನುಮತಿ ನೀಡಲಾಗಿಲ್ಲ ಎಂದು ಪಂಜಾಬ್ ಸರ್ಕಾರದ ಮೂಲವೊಂದು ಪಿಟಿಐಗೆ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಏಳಲ್ಲ ,ಎಂಟು ಖಂಡ!- 375 ವರ್ಷಗಳ ಹಿಂದೆ ಕಾಣೆಯಾಗಿದ್ದ ಖಂಡ ವಿಜ್ಞಾನಿಗಳಿಂದ ಪತ್ತೆ

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

Tragedy: ಮದುವೆ ಸಮಾರಂಭದಲ್ಲಿ ಭೀಕರ ಅಗ್ನಿ ದುರಂತ: 100 ಮಂದಿ ಸಜೀವ ದಹನ, 150 ಮಂದಿಗೆ ಗಾಯ

Finance: ಮೌಲ್ಯವರ್ಧನೆ ಕಂಡ ಆಫ್ಘನ್ ಕರೆನ್ಸಿ

Corona: ಮತ್ತೆ ಮರುಕಳಿಸಲಿದೆ ಕೊರೊನಾ!
MUST WATCH
ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ