ಲಿಬಿಯಾ: ಮತ್ತೆ ಸಂಘರ್ಷ
Team Udayavani, Apr 21, 2019, 6:30 AM IST
ಬೆಂಗಾಜಿ: ಲಿಬಿಯಾದಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಸಂಘರ್ಷದಲ್ಲಿ 220 ಜನರು ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಎ. 5ರಿಂದ ದಂಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಅಲ್ಲಿರುವ 500 ಮಂದಿ ಭಾರತೀಯರಿಗೆ ವಾಪಸಾಗುವಂತೆ ಸೂಚಿಸಲಾಗಿದೆ.
ಖಲೀಫಾ ಹಿಫ¤ರ್ ನೇತೃತ್ವದಲ್ಲಿ ಲಿಬಿಯನ್ ನ್ಯಾಶನಲ್ ಆರ್ಮಿ ದಂಗೆ ಎದ್ದಿದ್ದು, ರಾಜಧಾನಿ ಟ್ರಿಪೋಲಿ ವಶಕ್ಕೆ ಯತ್ನಿಸುತ್ತಿದೆ. ಸರಕಾರವನ್ನು ಉರುಳಿಸುವುದು ಅದರ ಉದ್ದೇಶ ಆಗಿದ್ದು ರಷ್ಯಾ, ಸೌದಿ ಅರೇಬಿಯಾ, ಯುಎಇ
ಬೆಂಬಲವಿದೆ ಎನ್ನಲಾ ಗಿದೆ. ಫ್ರಾನ್ಸ್ ಕೂಡ ಬೆಂಬ ಲಿಸುತ್ತಿದೆ ಎನ್ನಲಾಗಿ
ದ್ದರೂ ಅದು ನಿರಾಕರಿ ಸಿದೆ. ಆದರೆ ಫ್ರಾನ್ಸ್ ಜತೆ ವಹಿವಾಟು ಕಡಿದುಕೊಳ್ಳುವ ಬಗ್ಗೆ ಲಿಬಿಯಾ ವಿದೇಶ ಸಚಿವ ಮಾತನಾಡಿದ್ದಾರೆ.
ಅಮೆರಿಕ ಸಂಧಾನ
ಹಿಫ್ತಾರ್ ಜತೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತುಕತೆ ನಡೆಸಿರುವುದಾಗಿ ಹೇಳಲಾಗಿದೆ. ಲಿಬಿಯಾದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಅಮೆರಿಕ ಎಲ್ಲ ಪ್ರಯತ್ನವನ್ನೂ ನಡೆಸುತ್ತದೆ ಎಂದು ಶ್ವೇತಭವನದ ಪ್ರಕಟನೆಯಲ್ಲಿ ತಿಳಿಸಲಾಗಿದೆ.
500 ಭಾರತೀಯರು
ಲಿಬಿಯಾದಲ್ಲಿ ಸುಮಾರು 500 ಭಾರತೀಯರಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಸದ್ಯ ವಿಮಾನ ಹಾರಾಟ ಲಭ್ಯವಿದ್ದು, ಈಗಲೇ ಭಾರತೀಯರು ಸ್ವದೇಶಕ್ಕೆ ಮರಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನು ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗೂ ತಿಳಿಸಿ ಎಂದು ಸುಷ್ಮಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ