ಮಹಾರಾಷ್ಟ್ರದಲ್ಲಿ ಕೋವಿಡ್ ಅಟ್ಟಹಾಸ: ಒಂದೇ ದಿನ 48 ಬಲಿ: 20 ಸಾವಿರ ದಾಟಿದ ಸೋಂಕಿತರ ಸಂಖ್ಯೆ


Team Udayavani, May 10, 2020, 8:20 AM IST

maharsatra

ಮುಂಬೈ: ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ ಕೋವಿಡ್ 19 ವೈರಸ್ ಗೆ 48 ಜನರು ಬಲಿಯಾಗಿದ್ದಾರೆ. ಇದೇ ಮೊದಲ ಬಾರಿಗೆ  ರಾಜ್ಯವೊಂದರಲ್ಲಿ ಇಷ್ಟೊಂದು ಪ್ರಮಾಣದ ಮರಣಗಳಾಗಿದ್ದು ದಾಖಲೆಯಾಗಿದೆ.

ಮಾತ್ರವಲ್ಲದೆ ಈ ರಾಜ್ಯದಲ್ಲಿ 1,165 ಹೊಸ ಪ್ರಕರಣಗಳು ಕಂಡುಬಂದಿದ್ದು ಆ ಮೂಲಕ ವೈರಸ್ ಸೋಂಕಿತರ ಪ್ರಮಾಣ 20 ಸಾವಿರದ ಗಡಿ ತಲುಪಿದೆ. ಇದರಲ್ಲಿ ಮೃತಪಟ್ಟವರ ಸಂಖ್ಯೆ 779 ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಮೃತರಾದ 48 ಜನರಲ್ಲಿ 27 ಮಂದಿ ಮುಂಬೈ ನಲ್ಲಿ ಸಾವನ್ನಪ್ಪಿದ್ದಾರೆ.  9 ಮಂದಿ ಪುಣೆ, 8 ಜನರು ಮಲೆಗಾನ್ ನಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ -19ಗೆ ಮುಂಬೈ ಅಕ್ಷರಶಃ ನಲುಗಿ ಹೋಗಿದ್ದು, ಇಲ್ಲಿ ಸೋಂಕಿತರ ಪ್ರಮಾಣ 12,864ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೂ  ಈ ನಗರವೊಂದರಲ್ಲೇ 489 ಜನರು ಕೊನೆಯುಸಿರೆಳೆದಿದ್ದಾರೆ.

ಧಾರವಿಯಲ್ಲಿ ಈ ಮಹಾಮಾರಿ ತನ್ನ ಪ್ರಭಾವ ಬೀರುತ್ತಿದ್ದು 25 ಹೊಸ ಪ್ರಕರಣಗಳು ದಾಖಲಾಗಿವೆ. ಇಲ್ಲಿ ಒಟ್ಟಾರೆ ಸೋಂಕಿತರ ಪ್ರಮಾಣ 833ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಒಟ್ಟಾರೆಯಾಗಿ 2,27,804 ಜನರಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದ್ದು, 3,800 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸುಮಾರು 2. 4 ಲಕ್ಷ ಜನರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದ್ದು, 13 ಸಾವಿರಕ್ಕಿಂತ ಹೆಚ್ಚು ಜನರನ್ನು ಶಿಕ್ಷಣ ಸಂಸ್ಥೆಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯದಲ್ಲಿ ಪಸರಿಸುತ್ತಿರುವ ಕೋವಿಡ್ 19 ಮಹಾಮಾರಿಯ ಬಗ್ಗೆ ಪ್ರತಿಕ್ರಿಯಿಸಿ “ಮುಂದಿನ ಲಾಕ್ ಡೌನ್ ಜನರ ವರ್ತನೆಯ ಮೇಲೆ ಅವಲಂಬಿಸಿರುತ್ತದೆ. ಜನರು ಲಾಕ್ ಡೌನ್ ನಿಯಮಾವಳಿಗಳನ್ನು ಸಮರ್ಪಕವಾಗಿ ಅನುಸರಿಸಿದರೆ ಅತೀ ಶೀಘ್ರದಲ್ಲಿ ತೆರವುಗೊಳಿಸಲಾಗುವುದು” ಎಂದಿದ್ದಾರೆ.

ಲಾಕ್ ಡೌನ್ ನಲ್ಲೇ ಸಂಪೂರ್ಣ ಜೀವನ ಕಳೆಯಲಾಗುವುದಿಲ್ಲ. ಒಂದಲ್ಲಾ ಒಂದು ದಿನ ಸಡಿಲಗೊಳಿಸಲೇಬೇಕಾಗುತ್ತದೆ. ಅಲ್ಲಿಯವರೆಗೂ ನಿಯಮಗಳನ್ನು ಕಾಯ್ದುಕೋಂಡು ಸಾಮಾಜಿಕ ಅಂತರದತ್ತ ಗಮನಹರಿಸಿ ಎಂದು ಮನವಿ ಮಾಡಿದ್ದಾರೆ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.