ದುಬೈನಲ್ಲಿ ಭಾರತೀಯ-ಅರೇಬಿಕ್ ಶೈಲಿಯ ಭವ್ಯ ಹಿಂದೂ ದೇವಾಲಯ ಲೋಕಾರ್ಪಣೆ: ಇಲ್ಲಿದೆ ಚಿತ್ರಗಳು


Team Udayavani, Oct 5, 2022, 1:22 PM IST

Majestic Hindu Temple Opens In Dubai On Dussehra

ದುಬೈ: ಭಾರತೀಯ ಮತ್ತು ಅರೇಬಿಕ್ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಿರುವ ನೂತನ ಹಿಂದೂ ದೇವಾಲಯವನ್ನು ದಸಾರಾ ಸಂದರ್ಭದಲ್ಲಿ ದುಬೈನಲ್ಲಿ ಉದ್ಘಾಟಿಸಲಾಗಿದೆ. ದುಬೈನ ಜೆಬೆಲ್ ಅಲಿ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣ ಮಾಡಲಾಗಿದೆ.

ಎಮಿರೇಟ್‌ನ ‘ಆರಾಧನಾ ಗ್ರಾಮ’ ಎಂದು ಕರೆಯಲ್ಪಡುವಲ್ಲಿರುವ ಈ ದೇವಾಲಯವು ಇಂದು ಯುಎಇಯಾದ್ಯಂತ ಆರಾಧಕರಿಗೆ ಔಪಚಾರಿಕವಾಗಿ ತನ್ನ ಬಾಗಿಲು ತೆರೆಯಿತು.

ಸಹಬಾಳ್ವೆ ಮತ್ತು ಸಹಿಷ್ಣುತೆ ಸಚಿವರಾದ ಶೇಖ್ ನಹ್ಯಾನ್ ಬಿನ್ ಮುಬಾರಕ್ ಅಲ್ ನಹ್ಯಾನ್ ಮತ್ತು ಭಾರತೀಯ ರಾಯಭಾರಿ ಸಂಜಯ್ ಸುಧೀರ್ ಅವರು ಈ ದೇವಾಲಯವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ರಾಯಭಾರಿ ಸಂಜಯ್ ಸುಧೀರ್ ಅವರು ಯುಎಇಯಲ್ಲಿರುವ 3.5 ಮಿಲಿಯನ್ ಭಾರತೀಯ ವಲಸಿಗರಿಗೆ ನೀಡಿದ ಬೆಂಬಲಕ್ಕಾಗಿ ಯುಎಇ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು” ಎಂದು ಅಬುಧಾಬಿಯ ಭಾರತೀಯ ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

ಇದನ್ನೂ ಓದಿ:ಧರ್ಮ ಆಧಾರಿತ ಜನಸಂಖ್ಯಾ ಅಸಮತೋಲನವನ್ನು ನಿರ್ಲಕ್ಷಿಸುವಂತಿಲ್ಲ: ಮೋಹನ್ ಭಾಗವತ್

‘ಆರಾಧನಾ ಗ್ರಾಮ’ ಜೆಬೆಲ್ ಅಲಿಯಲ್ಲಿ ಈಗ ಏಳು ಚರ್ಚುಗಳು, ಗುರು ನಾನಕ್ ದರ್ಬಾರ್ ಸಿಖ್ ಗುರುದ್ವಾರ ಮತ್ತು ಹೊಸ ಹಿಂದೂ ದೇವಾಲಯ ಸೇರಿದಂತೆ ಒಟ್ಟು ಒಂಬತ್ತು ಧಾರ್ಮಿಕ ದೇವಾಲಯಗಳಿವೆ.

ರಾಜತಾಂತ್ರಿಕ ಮಿಷನ್‌ ಗಳ ಮುಖ್ಯಸ್ಥರು, ಹಲವಾರು ಧರ್ಮಗಳ ಧಾರ್ಮಿಕ ಮುಖಂಡರು, ಉದ್ಯಮಿಗಳು ಮತ್ತು ಭಾರತೀಯ ಸಮುದಾಯದ ಸದಸ್ಯರು ಸೇರಿದಂತೆ 200 ಕ್ಕೂ ಹೆಚ್ಚು ಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕೋವಿಡ್ 19 ಸಾಂಕ್ರಾಮಿಕವು ದುಬೈಗೆ ಅಪ್ಪಳಿಸಿದ ಸ್ವಲ್ಪ ಸಮಯದ ನಂತರ, ಅಂದರೆ 2020 ರಲ್ಲಿ 70,000 ಚದರ ಅಡಿ ವಿಸ್ತೀರ್ಣದ ಈ ಹಿಂದೂ ದೇವಾಲಯ ನಿರ್ಮಿಸುವ ಯೋಜನೆಗಳನ್ನು ಘೋಷಿಸಲಾಗಿತ್ತು.

ಈ ದೇವಾಲಯವು ಸೂಕ್ಷ್ಮ ಕೆತ್ತನೆಗಳು, ಅಲಂಕೃತ ಕಂಬಗಳು, ಹಿತ್ತಾಳೆಯ ಗೋಪುರಗಳು ಮತ್ತು ಭಾರತೀಯ ಮತ್ತು ಅರೇಬಿಕ್ ವಾಸ್ತುಶಿಲ್ಪವನ್ನು ಸಂಯೋಜನೆಯ ಲ್ಯಾಟಿಸ್ ಸ್ಕ್ರೀನ್ ಗಳನ್ನು ಒಳಗೊಂಡಿದೆ.

ದೇವಸ್ಥಾನಕ್ಕೆ ಭೇಟಿ ನೀಡಲು ಮುಂಗಡ ನೋಂದಣಿ ಅಗತ್ಯ. ಭಕ್ತರು ಆಗಮಿಸುವ ಮೊದಲು ಆನ್‌ ಲೈನ್‌ ನಲ್ಲಿ ನೋಂದಾಯಿಸಿಕೊಳ್ಳಬಹುದು.

ವರ್ಷಾಂತ್ಯಕ್ಕೆ ವಿವಾಹಗಳು ಸೇರಿದಂತೆ ಹಿಂದೂ ಆಚರಣೆಗಳು ಮತ್ತು ಪ್ರಾರ್ಥನೆಗಳು ನಡೆಯಬಹುದಾದ ವಿಶಾಲವಾದ ಸಮುದಾಯ ಭವನವೂ ಉದ್ಘಾಟನೆಯಾಗಲಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.