ಬದುಕಬೇಕಾ, ಸಾಯಬೇಕಾ? ಇನ್ಸ್ ಸ್ಟಾಗ್ರಾಮ್ ನಲ್ಲಿ ಸಮೀಕ್ಷೆ; ಹುಡುಗಿ ಆತ್ಮಹತ್ಯೆ!


Team Udayavani, May 15, 2019, 3:06 PM IST

Death

ಕೌಲಾಲಂಪುರ್: ರಕ್ತ ನೀಡಿ ಜೀವ ಉಳಿಸಿ, ನಾಪತ್ತೆಯಾಗಿದ್ದಾರೆ..ದಯವಿಟ್ಟು ಇವರ ಪತ್ತೆಗೆ ಸಹಕರಿಸಿ ಹೀಗೆ ನೂರಾರು ವಿಧದ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುತ್ತದೆ. ಆದರೆ ತಾನು ಬದುಕಬೇಕಾ ಅಥವಾ ಸಾಯಬೇಕಾ? ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಸಮೀಕ್ಷೆ ನಡೆಸಿ ಹುಡುಗಿಯೊಬ್ಬಳು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ವಿಲಕ್ಷಣ ಘಟನೆಯೊಂದು ಮಲೇಶ್ಯಾದಲ್ಲಿ ನಡೆದಿದೆ!

ಘಟನೆ ವಿವರ:

ಸಾರಾವಾಕ್ ಪೊಲೀಸರ ಮಾಹಿತಿ ಪ್ರಕಾರ, ಮೇ 13ರಂದು 16 ವರ್ಷದ ಹುಡುಗಿಯೊಬ್ಬಳು ಇನ್ಸ್ ಸ್ಟಾಗ್ರಾಮ್ ಫೋಟೋ ಶೇರಿಂಗ್ ಆ್ಯಪ್ ನಲ್ಲಿ “ ಇದು ತುಂಬಾ ಮುಖ್ಯವಾದದ್ದು..ನನಗೆ D/L ಆಯ್ಕೆ ಮಾಡಲು ನೆರವು ನೀಡಿ” ಎಂದು ಪ್ರಶ್ನೆ ಕೇಳಿದ್ದಳು.

ಇನ್ಸ್ ಸ್ಟಾಗ್ರಾಮ್ ಸಮೀಕ್ಷೆ ಪ್ರಕಾರ ಬಾಲಕಿಯ ಶೇ.69ರಷ್ಟು ಫಾಲೋವರ್ಸ್ “ಡಿ” ಆಯ್ಕೆ ಮಾಡಿಕೊಳ್ಳಲು ಸಹಮತ ಸೂಚಿಸಿದ್ದರು! ಆ ಬಳಿಕ ಹುಡುಗಿ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು!

ಸಂತ್ರಸ್ತೆ ಹುಡುಗಿಯ ಆಪ್ತ ಗೆಳೆಯರ ಪ್ರಕಾರ, ಡಿ/ಎಲ್ ಅಂದರೆ ಡೆತ್ ಆ್ಯಂಡ್ ಲೈಫ್! ಎಂಬುದಾಗಿ ವಿವರಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಐದಿಲ್ ಬೋಲ್ಹಾಸ್ಸಾನ್ ತಿಳಿಸಿರುವುದಾಗಿ ದ ಬೋರ್ನಿಯೋ ಪೋಸ್ಟ್ ಪತ್ರಿಕೆ ವರದಿ ಮಾಡಿದೆ.

ಈ ಪ್ರಕರಣದ ಬಗ್ಗೆ ಮಾತನಾಡಿರುವ ವಕೀಲ, ಸಂಸತ್ ಸದಸ್ಯ ರಾಮ್ ಕರ್ಪಾಲ್ ಸಿಂಗ್, ಇನ್ಸ್ ಸ್ಟಾಗ್ರಾಮ್ ನಲ್ಲಿ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಯಾರು ವೋಟ್ ಹಾಕಿದ್ದಾರೋ ಅವರೇ ಕಾರಣರಾಗುತ್ತಾರೆ. ಈ ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಮಲೇಶ್ಯಾದ ಕಾನೂನಿನ ಪ್ರಕಾರ ಅಪ್ರಾಪ್ತೆಯ ಆತ್ಮಹತ್ಯೆಗೆ ಯಾರು ಪ್ರೇರಣೆ ನೀಡುತ್ತಾರೋ..ಅವರು ದೋಷಿ ಎಂದು ಸಾಬೀತಾದರೆ ಮರಣದಂಡನೆ ಅಥವಾ 20 ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.