ಉಗ್ರ ಮಸೂದ್‌ ನಿಷೇಧಕ್ಕೆ ನಿಲುವಳಿ

ಅಮೆರಿಕದ ಅಚ್ಚರಿಯ ನಿರ್ಧಾರ

Team Udayavani, Mar 29, 2019, 6:36 AM IST

50

ವಾಷಿಂಗ್ಟನ್‌: ಪುಲ್ವಾಮಾ ದಾಳಿಯ ಸಂಚುಕೋರ, ಜೈಶ್‌ ಎ ಮೊಹಮ್ಮದ್‌ ಉಗ್ರ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿ ಸಲು ಪಣ ತೊಟ್ಟಿರುವ ಅಮೆರಿಕ, ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಕರಡು ನಿಲುವಳಿ ಮಂಡಿಸಿದೆ. ಈತನನ್ನು ಉಗ್ರ ಪಟ್ಟಿಗೆ ಸೇರಿಸಲು ಚೀನ ಪದೇ ಪದೇ ಅಡ್ಡಿಯುಂಟು ಮಾಡು ತ್ತಿದ್ದು, ಈ ಬಾರಿ ಆ ದೇಶವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಲುವಾಗಿ ಈ ಪ್ರಯೋಗಕ್ಕೆ ಮುಂದಾಗಿದೆ. ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಚೀನ, ವಿಚಾರವನ್ನು ಅಮೆರಿಕ ಮತ್ತಷ್ಟು ಸಂಕೀರ್ಣ ಮಾಡು ತ್ತಿದೆ ಎಂದು ಆರೋಪಿಸಿದೆ.

ನಿಲುವಳಿಯನ್ನು ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾದ ಫ್ರಾನ್ಸ್‌ ಮತ್ತು ಇಂಗ್ಲೆಂಡ್‌ ಬೆಂಬಲಿಸಿವೆ. ಈ ಮೂರೂ ದೇಶಗಳು ನೇರವಾಗಿ ನಿಲುವಳಿ ಮಂಡಿಸಿದ್ದು ಇದೇ ಮೊದಲು. ಈ ಹಿಂದಿನ ನಿಲು ವಳಿ  ಗಳು ಪ್ರಸ್ತಾವನೆಯ ರೂಪ ದಲ್ಲಿ ಇರುತ್ತಿದ್ದವು. ಪ್ರಸ್ತಾವನೆ ಸಲ್ಲಿಸಿ ದಾಗ ಆಕ್ಷೇಪಕ್ಕೆ 10 ದಿನಗಳ ಕಾಲಾವಕಾಶ ಇರುತ್ತದೆ.

ಆದರೆ ಈ ಬಾರಿಯದ್ದು ನೇರ ನಿಲುವಳಿಯಾದ್ದರಿಂದ ಆಕ್ಷೇಪ ಸಲ್ಲಿಸಲು ನಿರೀಕ್ಷಣ ಅವಧಿ ಇಲ್ಲ. ಆದರೂ ಇದು ಸಾಮಾನ್ಯ ನಿಲುವಳಿಯಂತೆಯೇ ಭದ್ರತಾ ಮಂಡಳಿ ಸಭೆಯಲ್ಲಿ ಚರ್ಚೆಯಾಗುತ್ತದೆ, ಅನಂತರ ಮತಕ್ಕೆ ಹಾಕಲಾಗುತ್ತದೆ. ಆಗ ಚೀನ ವಿಟೋ ಬಳಸಿ ತಡೆ ಒಡ್ಡಬಹುದು. ಯಾವಾಗ ಈ ನಿಲುವಳಿ ಚರ್ಚೆಗೆ ಬರಲಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ.

ಪುಲ್ವಾಮಾ: ಕಟು ಮಾತಿನ ಖಂಡನೆ
ಜೈಶ್‌ ಉಗ್ರರು ಪುಲ್ವಾಮಾದಲ್ಲಿ ನಡೆಸಿದ ಉಗ್ರ ಕೃತ್ಯವನ್ನು ಅಮೆರಿಕ ಈ ನಿಲುವಳಿಯಲ್ಲಿ ಕಟು ಶಬ್ದಗಳಿಂದ ಖಂಡಿಸಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಈತ ಅಲ್‌ ಖೈದಾ ಮತ್ತು ಐಸಿಸ್‌ ಉಗ್ರರ ಜತೆಗೂ ಸಹಭಾಗಿತ್ವ ಸಾಧಿಸಿದ್ದಾನೆ, ಅವುಗಳಿಗೆ ಹಣಕಾಸು ನೆರವು ಒದಗಿಸುತ್ತಾನೆ. ಭಾರತದ ಜೈಲಿನಿಂದ ಬಿಡುಗಡೆಯಾದ ಅನಂತರ ಜೈಶ್‌ ಸ್ಥಾಪಿಸಿದ್ದಾನೆ ಎಂಬ ವಿವರಗಳನ್ನು ನಿಲುವಳಿಯಲ್ಲಿ ವಿವರಿಸಲಾಗಿದೆ.

ಎಚ್ಚರದ ಹೆಜ್ಜೆಯಿಡಿ ಎಂದ ಚೀನ
ಅಮೆರಿಕವು ಬಲವಂತವಾಗಿ ನಿಲುವಳಿ ಮಂಡಿಸುವ ಮೂಲಕ ಈ ವಿಚಾರವನ್ನು ಇನ್ನಷ್ಟು ಸಂಕೀರ್ಣವಾಗಿಸಿದೆ. ಇದು ಚರ್ಚೆ ಮತ್ತು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವ ವಿಧಾನವಲ್ಲ ಎಂದು ಚೀನ ಆಕ್ಷೇಪಿಸಿದೆ. ಇದು ವಿಶ್ವಸಂಸ್ಥೆಯ ಮೂಲ ಉದ್ದೇಶಕ್ಕೆ ಧಕ್ಕೆ ಉಂಟು ಮಾಡಿದ್ದು, ಅಮೆರಿಕವು ಎಚ್ಚರದಿಂದ ಹೆಜ್ಜೆಯಿಡಬೇಕು ಮತ್ತು ಈ ನಿಲುವಳಿ ಕರಡನ್ನು ಬಲವಂತವಾಗಿ ಮಂಡಿಸಬಾರದು ಎಂದು ಚೀನದ ವಿದೇಶಾಂಗ ಸಚಿವಾಲಯದ ವಕ್ತಾರ ಗೆಂಗ್‌ ಶುವಾಂಗ್‌ ಹೇಳಿದ್ದಾರೆ. ಈ ಪ್ರತಿಕ್ರಿಯೆ ಈ ಬಾರಿಯೂ ನಿಲುವಳಿಗೆ ಚೀನ ಅಡ್ಡಿಪಡಿಸಲಿದೆ ಎಂಬುದನ್ನು ಖಚಿತಪಡಿಸಿದೆ.

ಪಾಕ್‌ ಕಾಶ್ಮೀರ ಷರತ್ತು
ಕಾಶ್ಮೀರ ವಿಚಾರದ ಚರ್ಚೆಗೆ ಭಾರತ ಒಪ್ಪಿದರೆ ಮತ್ತು ಗಡಿಯಲ್ಲಿ ಸೇನೆ ಜಮಾವಣೆ ಹಾಗೂ ಉದ್ವಿಗ್ನ ಸನ್ನಿವೇಶ ನಿರ್ಮಾಣವನ್ನು ಕೈಬಿಟ್ಟರೆ ಮಸೂದ್‌ ಅಜರ್‌ಗೆ ನಿಷೇಧ ಹೇರಲು ಸಮ್ಮತಿಸಿ ಎಂದು ಚೀನಕ್ಕೆ ಪಾಕ್‌ ಸೂಚಿಸಿದೆ ಎನ್ನಲಾಗಿದೆ. ಈ ಅಭಿಪ್ರಾಯವನ್ನು ಅಮೆರಿಕಕ್ಕೂ ರವಾನಿಸಲಾಗಿದ್ದರೂ ಟ್ರಂಪ್‌ ಆಡಳಿತ ಸಮ್ಮತಿಸಿಲ್ಲ ಎನ್ನಲಾಗಿದೆ.

ಪ್ರತಿಕ್ರಿಯಿಸಲು ಚೀನ ವಿಫ‌ಲ?
ಮಾರ್ಚ್‌ 13ರಂದು ಭದ್ರತಾ ಮಂಡಳಿ ಸಭೆಯಲ್ಲಿ ಮಸೂದ್‌ ಅಜರ್‌ ಬಗ್ಗೆ ನಡೆದ ಚರ್ಚೆ ವೇಳೆ ಚೀನ ಅಡ್ಡಿ ಪಡಿಸಿದ ಅನಂತರ, ವಿರೋಧಕ್ಕೆ ನಿರ್ದಿಷ್ಟ ಕಾರಣಗಳನ್ನು ಎರಡು ವಾರಗಳಲ್ಲಿ ನೀಡುವಂತೆ ಅಮೆರಿಕ ಸೂಚಿಸಿತ್ತು. ಗಡುವು ಈ ವಾರ ಮುಕ್ತಾಯವಾಗಲಿದೆ. ಹೀಗಾಗಿ ಅಮೆರಿಕ ಹೊಸ ಪ್ರಸ್ತಾವನೆ ಮಂಡಿಸಿದ್ದು, ಈ ಬಾರಿ ಮುಕ್ತ ಚರ್ಚೆ ನಡೆಯಲಿದೆ. ಆಗ ಚೀನ ವಿರೋಧ ವ್ಯಕ್ತಪಡಿಸಿದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಒಳಗಾಗಬೇಕಾಗುತ್ತದೆ.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.