
ರಾತ್ರೋರಾತ್ರಿ ಚೀನಾ, ಪಾಕಿಸ್ತಾನ ವಿರುದ್ಧ ಪ್ರತಿಭಟನೆಗಿಳಿದ ಪಿಒಕೆ ಜನರು, ಏನಿದು ಪ್ರಕರಣ?
700.7 ಮೆಗಾ ವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಉಭಯ ದೇಶಗಳು 2020ರ ಜುಲೈ 6ರಂದು ಸಹಿ
Team Udayavani, Aug 25, 2020, 9:23 AM IST

ಇಸ್ಲಾಮಾಬಾದ್: ನೀಲಂ ಝೀಲಂ ನದಿಗೆ ಅಡ್ಡಲಾಗಿ ಚೀನಾ ಕಂಪನಿ ಬೃಹತ್ ಅಣೆಕಟ್ಟು ನಿರ್ಮಿಸುತ್ತಿರುವುದನ್ನು ವಿರೋಧಿಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಮುಜಾಫರಾಬಾದ್ ನಗರದಲ್ಲಿ ದೊಂದಿ ಹಿಡಿದು ಸೋಮವಾರ ತಡರಾತ್ರಿ ಭಾರೀ ಪ್ರತಿಭಟನೆ ನಡೆಯಿತು.
ದರಿಯಾ ಬಚಾವೋ, ಮುಜಾಫರಾಬಾದ್ ಬಚಾವೊ(ನದಿ ರಕ್ಷಿಸಿ, ಮುಜಾಫರಾಬಾದ್ ಉಳಿಸಿ)ಸಮಿತಿ ಮತ್ತೆ ಆಯೋಜಿಸಿದ್ದ ದೊಂದಿ ಪ್ರತಿಭಟನಾ ಮೆರವಣಿಗೆಯಲ್ಲಿ ನೀಲಂ ಝೀಲಂ ಬೇಹಾನೆ ದೊ, ಹಮ್ನೆ ಜಿಂದಾ ರಹಾನೆ ದೊ (ನೀಲಂ, ಝೀಲಂ ನದಿ ಹರಿಯಲು ಬಿಡಿ, ಜತೆಗೆ ನಮ್ಮನ್ನು ಬದುಕಲು ಬಿಡಿ) ಎಂದು ಘೋಷಣೆ ಕೂಗಿರುವುದಾಗಿ ವರದಿ ತಿಳಿಸಿದೆ.
ಪಾಕ್ ಆಕ್ರಮಿತ ಕಾಶ್ಮೀರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪಾಕ್ ಆಕ್ರಮಿತ ಕಾಶ್ಮೀರದ ಆಝಾದ್ ಪಟ್ಟಾನ್ ಮತ್ತು ಕೊಹಾಲಾದಲ್ಲಿ ಜಲವಿದ್ಯುತ್ ಯೋಜನೆಗಾಗಿ ಪಾಕಿಸ್ತಾನ ಮತ್ತು ಚೀನಾ ನಡುವೆ ಒಪ್ಪಂದವಾಗಿತ್ತು.
#WATCH: Protests and torch rally took place in Muzaffarabad city of Pakistan occupied Kashmir (PoK) last night, against the construction of mega-dams that will be built by Chinese firms on Neelum-Jhelum river. pic.twitter.com/aJhGPdfjnw
— ANI (@ANI) August 25, 2020
ಚೀನಾ, ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಅಂಗವಾಗಿ ಆಝಾದ್ ಪಟ್ಟಾನ್ ನಲ್ಲಿ 700.7 ಮೆಗಾ ವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಉಭಯ ದೇಶಗಳು 2020ರ ಜುಲೈ 6ರಂದು ಸಹಿ ಹಾಕಿದ್ದವು.
1.54 ಬಿಲಿಯನ್ ಡಾಲರ್ ವೆಚ್ಚದ ಈ ಯೋಜನೆಯ ವೆಚ್ಚದ ಪ್ರಾಯೋಜಕತ್ವವನ್ನು ಚೀನಾದ ಗೆಝ್ ಹೌಬಾ ಗ್ರೂಪ್ ಕಂಪನಿ (ಸಿಜಿಜಿಸಿ) ವಹಿಸಿಕೊಂಡಿದೆ. ಕೋಹಾಲಾ ಜಲವಿದ್ಯುತ್ ಯೋಜನೆಯಂತೆ ಝೀಲಂ ನದಿಯ ಮೇಲ್ಭಾಗದಲ್ಲಿ ಸುಮಾರು 7 ಕಿಲೋ ಮೀಟರ್ ಉದ್ದದವರೆಗೆ ಪಿಒಕೆ ಜಿಲ್ಲೆಯ ಆಝಾದ್ ಪಟ್ಟಾನ್ ಸೇತುವೆ ನಿರ್ಮಿಸಲಾಗುವುದು. ಇದರಿಂದ ಇಸ್ಲಾಮಾಬಾದ್ ನಿಂದ ಪಿಒಕೆ 90 ಕಿಲೋ ಮೀಟರ್ ದೂರದಲ್ಲಿರಲಿದೆ. ಈ ಯೋಜನೆ 2026ರಲ್ಲಿ ಪೂರ್ಣಗೊಳ್ಳಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಮಾಹಿತಿ ಯುದ್ಧ ನಡೆಸುತ್ತಿದೆ..” ಬಿಬಿಸಿ ಡಾಕ್ಯುಮೆಂಟರಿ ಪ್ರಕರಣದಲ್ಲಿ ಭಾರತದ ಬೆಂಬಲಕ್ಕೆ ನಿಂತ ರಷ್ಯಾ

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ

ಬರ್ತ್ಡೇ ಪಾರ್ಟಿಯಲ್ಲಿ ಗುಂಡಿನ ದಾಳಿ: 8 ಮಂದಿ ಸಾವು, 3 ಮಂದಿಗೆ ಗಾಯ

ಪೇಶಾವರದಲ್ಲಿ ತಾಲಿಬಾನ್ ಅಟ್ಟಹಾಸ: 46 ಸಾವು,150ಕ್ಕೂ ಹೆಚ್ಚು ಮಂದಿಗೆ ಗಾಯ

49 ಸಾವಿರ ರೂ. ಚಿತ್ರ 25 ಕೋಟಿ ರೂಪಾಯಿಗೆ ಮಾರಾಟವಾಯಿತು!
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ತುಳು ಸಿನಿಮಾ “ಶಕಲಕ ಬೂಂ ಬೂಂ” ಎರಡನೇ ವಾರವೂ ಭರ್ಜರಿ ಪ್ರದರ್ಶನ

ಇವರಿಗೆ ಪಕ್ಷದಲ್ಲಿ ಚುನಾವಣೆ ಸಮಿತಿ ಇಲ್ಲವೇ: ಭವಾನಿ ರೇವಣ್ಣ ವಿಚಾರಕ್ಕೆ ಈಶ್ವರಪ್ಪ ವ್ಯಂಗ್ಯ

ಭಾರತ ಇಂದು ನಿರ್ಭೀತ ಮತ್ತು ನಿರ್ಣಾಯಕ, ಸದೃಢ ಸರ್ಕಾರ ಹೊಂದಿದೆ: ರಾಷ್ಟ್ರಪತಿ ಮುರ್ಮು

ಮಂಗಳೂರು: ಮೊಬೈಲ್ ಬಳಸುವಾಗ ತಾಯಿ ಗದರಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 14 ವರ್ಷದ ಬಾಲಕ

ಕಾರು – ಬಸ್ ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು