Hawaii: ಸುಟ್ಟು ಕರಕಲಾದ ಪ್ರವಾಸಿ ಪಟ್ಟಣ, ಎಲ್ಲಿ ನೋಡಿದರೂ ಬೂದಿ… ಮೃತರ ಸಂಖ್ಯೆ 53ಕ್ಕೆ


Team Udayavani, Aug 11, 2023, 9:49 AM IST

Hawaii ದ್ವೀಪದಲ್ಲಿ ಕಾಳ್ಗಿಚ್ಚು, ಕಟ್ಟಡಗಳು ಸುಟ್ಟು ಕರಕಲು, ಮೃತರ ಸಂಖ್ಯೆ 53ಕ್ಕೆ ಏರಿಕೆ

ಹವಾಯಿ: ವಿಶ್ವ ಪ್ರಸಿದ್ದ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಯುನೈಟೆಡ್ ಸ್ಟೇಟ್ಸ್ ನ ಐತಿಹಾಸಿಕ ದ್ವೀಪ ರಾಜ್ಯ ಹವಾಯಿಯಲ್ಲಿ ಉಂಟಾದ ಭಾರಿ ಕಾಡ್ಗಿಚ್ಚು ದ್ವೀಪರಾಜ್ಯದ ಮವ್ವಿ ಪಟ್ಟಣವನ್ನು ವ್ಯಾಪಿಸಿದ್ದು, ಪಟ್ಟಣದ ಬಹುತೇಕ ಭಾಗವನ್ನು ಬೆಂಕಿಯ ಕೆನ್ನಾಲಿಗೆ ಭಸ್ಮಗೊಳಿಸಿದೆ.

ಅಮೆರಿಕದ ಹವಾಯಿಯಲ್ಲಿರುವ ಮಾಯಿ ಅರಣ್ಯದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಪರಿಣಾಮ ಹುಟ್ಟಿಕೊಂಡ ಅಗ್ನಿಯ ಜ್ವಾಲೆ ಇಡೀ ನಗರವನ್ನೇ ಆವರಿಸಿಕೊಂಡಿದೆ. ಲಹೈನಾ ಪಟ್ಟಣದಲ್ಲಿ ಕನಿಷ್ಠ 53 ಜನರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ.

ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ನಿರಂತರ ಪ್ರಯತ್ನಿಸುತ್ತಿದ್ದಾರೆ. ದ್ವೀಪದಲ್ಲಿರುವ ಐತಿಹಾಸಿಕ ಪಟ್ಟಣಗಳ ದೊಡ್ಡ ಭಾಗಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಬೂದಿಯಾಗಿದೆ.

ಜನಪ್ರಿಯ ಪ್ರವಾಸಿ ತಾಣವಾದ ಲಹೈನಾ ಪಟ್ಟಣ ಸೇರಿದಂತೆ ಹಲವು ಕಡೆಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಕಾಡ್ಗಿಚ್ಚಿನಿಂದಾಗಿ ಲಹೈನಾ ಪಟ್ಟಣದ ಪ್ರವಾಸಿ ಸ್ಥಳಗಳಿಗೆ ಹೆಚ್ಚಿನ ಹಾನಿಗೊಳಗಾಗಿವೆ. ಅಮೆರಿಕದ ಹವಾಮಾನ ಇಲಾಖೆಯ ಪ್ರಕಾರ, ಹವಾಯಿಯಲ್ಲಿ ಈ ರೀತಿಯಾಗಿ ಕಾಡ್ಗಿಚ್ಚು ಏರಲು ಡೋರಾ ಚಂಡಮಾರುತವೂ ಕಾರಣವಾಗಿದೆ, ಇದರ ಬಲವಾದ ಗಾಳಿ ಬೆಂಕಿಯನ್ನು ಬಹಳ ಬೇಗವಾಗಿ ಹರಡುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.

ಈ ಬೆಂಕಿಯ ಕೆನ್ನಾಲಿಗೆಗೆ ಐತಿಹಾಸಿಕ ನಗರ ಲಹೈನಾ ಸುಟ್ಟು ಹೋಗಿದ್ದು ಅಧಿಕಾರಿಗಳ ಪ್ರಕಾರ, ಈ ದುರಂತದಲ್ಲಿ ಕನಿಷ್ಠ 1,000 ಮಂದಿ ಕಾಣೆಯಾಗಿದ್ದಾರೆ. ಇಡೀ ನಗರವೇ ಭೂದಿಯಿಂದ ಆವರಿಸಿಕೊಂಡಂತೆ ಕಾಣುತ್ತದೆ ಎನ್ನಲಾಗಿದೆ.

ಅಗ್ನಿಯ ಅವಘಡಕ್ಕೆ ಸಾವಿರಾರು ಕಟ್ಟಡಗಳು ಸಿಲುಕಿ ಕ್ಷಣಾರ್ಧದಲ್ಲಿ ಸುಟ್ಟು ಬೂದಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಗಸ್ಟ್ 8 ಮಂಗಳವಾರದಂದು ಕಾಣಿಸಿಕೊಂಡ ಬೆಂಕಿ ಮಾಯಿಯ ಸುತ್ತಮುತ್ತಲಿನ ಒಣ ಪೊದೆಗಳಿಗೆ ಆವರಿಸಿಕೊಂಡು ದೊಡ್ಡ ಮಟ್ಟದಲ್ಲಿ ಹರಡತೊಡಗಿದೆ. ಬಳಿಕ ಬೆಂಕಿಯ ಪ್ರಮಾಣ ಹೆಚ್ಚಾಗುತ್ತಾ ರಸ್ತೆಗಳು, ಸೇತುವೆಗಳು ಮತ್ತು ವಿದ್ಯುತ್ ಸಂಪರ್ಕಗಳು ಕಡಿತಗೊಂಡವು.

ಲಹೈನಾ ದ್ವೀಪದಲ್ಲಿ ಉಂಟಾದ ಅಗ್ನಿ ಅವಘಡದಿಂದ ಇದುವರೆಗೆ ಕನಿಷ್ಠ 53 ಜನರು ಮೃತಪಟ್ಟಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆ ಅಲ್ಲದೆ ಸಾವಿರಾರು ಕುಟುಂಬ ತಮ್ಮ ಸೂರುಗಳನ್ನು ಕಳೆದುಕೊಂಡು ಅತಂತ್ರವಾಗಿವೆ ಎನ್ನಲಾಗಿದೆ. ಇದು ಹವಾಯಿ ದ್ವೀಪದ ಇತಿಹಾಸದಲ್ಲಿ ಕಂಡ ಮೊದಲ ಭೀಕರ ಅಗ್ನಿ ಅವಘಡವಾಗಿದೆ.

ಮಾಯಿ ದ್ವೀಪದಲ್ಲಿ ಕಾಡ್ಗಿಚ್ಚುಗಳು ವಿನಾಶಕಾರಿ ಪರಿಣಾಮವನ್ನು ಬೀರಿದ್ದು ದ್ವೀಪದ ಪ್ರಮುಖ ಆದಾಯದ ಮೂಲವಾದ ಪ್ರವಾಸೋದ್ಯಮಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಟಾಪ್ ನ್ಯೂಸ್

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.