ಇನ್ನು ಟ್ವಿಟರ್‌ ‘ಫ್ರೀ’ ಅಲ್ಲ! ವಾಣಿಜ್ಯ, ಸರ್ಕಾರಿ ಖಾತೆಗೆ ಶುಲ್ಕ ವಿಧಿಸಲು ಮಸ್ಕ್ ಚಿಂತನೆ

ಜನಸಾಮಾನ್ಯರಿಗೆ ಇಲ್ಲ ಯಾವುದೇ ಹೊರೆ

Team Udayavani, May 4, 2022, 11:13 PM IST

ಇನ್ನು ಟ್ವಿಟರ್‌ ‘ಫ್ರೀ’ ಅಲ್ಲ! ವಾಣಿಜ್ಯ, ಸರ್ಕಾರಿ ಖಾತೆಗೆ ಶುಲ್ಕ ವಿಧಿಸಲು ಮಸ್ಕ್ ಚಿಂತನೆ

 

ಸ್ಯಾನ್‌ ಫ್ರಾನ್ಸಿಸ್ಕೋ: ಟ್ವಿಟರ್‌ ಸಂಸ್ಥೆಯು ಉದ್ಯಮಿ ಎಲಾನ್‌ ಮಸ್ಕ್ ಪಾಲಾಗುತ್ತಿದ್ದಂತೆಯೇ, ಮೈಕ್ರೋ-ಬ್ಲಾಗಿಂಗ್‌ ತಾಣದ ಮೂಲಕ ಆದಾಯ ಗಳಿಸುವ ಲೆಕ್ಕಾಚಾರವನ್ನು ಅವರು ಹಾಕಿಕೊಂಡಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಅದು ನಿಜ ಎಂಬುದು ಈಗ ಸಾಬೀತಾಗಿದೆ. ಸ್ವತಃ ಮಸ್ಕ್ ಅವರೇ ಇದನ್ನು ಸ್ಪಷ್ಟಪಡಿಸಿದ್ದಾರೆ.

ಅದರಂತೆ, ಇನ್ನು ಮುಂದೆ ಟ್ವಿಟರ್‌ನ ವಾಣಿಜ್ಯ ಮತ್ತು ಸರ್ಕಾರಿ ಬಳಕೆದಾರರಿಗೆ ನಿಗದಿತ ಶುಲ್ಕವನ್ನು ವಿಧಿಸಲು ಮಸ್ಕ್ ಚಿಂತನೆ ನಡೆಸಿದ್ದಾರೆ. ಸದ್ಯಕ್ಕೆ ಅಲ್ಪ ಮೊತ್ತವನ್ನು ಶುಲ್ಕದ ರೀತಿಯಲ್ಲಿ ವಿಧಿಸಲಾಗುತ್ತದೆ ಎಂದಿದ್ದಾರೆ. ಆದರೆ, ಜನಸಾಮಾನ್ಯರಿಗೆ ಯಾವುದೇ ಶುಲ್ಕ ವಿಧಿಸುವುದಿಲ್ಲ, ಅವರು ಈಗಿನಂತೆಯೇ ಟ್ವಿಟರ್‌ ಬಳಕೆಯನ್ನು ಮುಂದುವರಿಸಬಹುದು ಎಂದು ಮಸ್ಕ್ ಹೇಳಿದ್ದಾರೆ. ಜತೆಗೆ, ಸಂಸ್ಥೆಗೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ ಇದನ್ನೆಲ್ಲ ಮಾಡುತ್ತಿರುವುದಾಗಿಯೂ ತಿಳಿಸಿದ್ದಾರೆ.

ಇದಲ್ಲದೆ, ಆ್ಯಪ್‌ನಲ್ಲಿ ಕೆಲವೊಂದು ಬದಲಾವಣೆಗಳನ್ನು ತರಲೂ ಮಸ್ಕ್ ನಿರ್ಧರಿಸಿದ್ದಾರಂತೆ. ಟ್ವಿಟರ್‌ನಲ್ಲಿನ ಕೆಲವು ಸ್ಪ್ಯಾಮ್‌ ಮತ್ತು ಸ್ಕ್ಯಾಮ್‌ಗಳನ್ನು ಕಿತ್ತುಹಾಕಬೇಕು. ಯಾವುದೇ ಒಂದು ವಿಚಾರವು ವಾಸ್ತವದಲ್ಲಿ ಜನಾಭಿಪ್ರಾಯವೋ ಅಥವಾ ಒಂದು ಲಕ್ಷ ನಕಲಿ ಖಾತೆ ಇಟ್ಟುಕೊಂಡವನು ಮಾಡುತ್ತಿರುವ ಟ್ವೀಟ್‌ಗಳ್ಳೋ ಎಂಬುದನ್ನು ನಿಮಗೆ ಈಗ ಹೇಳಲು ಸಾಧ್ಯವೇ? ಆ ನಿಟ್ಟಿನಲ್ಲಿ ಕೆಲ ಬದಲಾವಣೆ ತರಲು ಚಿಂತನೆ ನಡೆಸಿದ್ದೇನೆ ಎಂದೂ ಮಸ್ಕ್ ಹೇಳಿದ್ದಾರೆ.

ಈ ನಡುವೆ, ತಾವು ಟ್ವಿಟರ್‌ ಖರೀದಿಸಿದ್ದರಿಂದ ಅಸಮಾಧಾನಗೊಂಡು ಸಾಮೂಹಿಕ ರಾಜೀನಾಮೆಗೆ ಉದ್ಯೋಗಿಗಳು ನಿರ್ಧರಿಸಿದ್ದರೆ, ಅವರಿಗೆ ಕಂಪನಿ ತೊರೆಯಲು ಮುಕ್ತ ಅವಕಾಶವಿದೆ ಎಂದೂ ಮಸ್ಕ್ ಘೋಷಿಸಿದ್ದಾರೆ.

ಇದನ್ನೂ ಓದಿ : ರೌಡಿಶೀಟರ್‌ ಇಲ್ಯಾಸ್‌ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.