ವಾರದಲ್ಲಿ ನಾಲ್ಕೇ ದಿನ ಕೆಲಸ ಉತ್ಪಾದಕತೆ 40% ಹೆಚ್ಚಳ !

ಮೈಕ್ರೋಸಾಫ್ಟ್ ಮಾಡಿದ ಈ ಪ್ರಯೋಗದ ಫಲಿತಾಂಶವೇನು ಗೊತ್ತಾ?

Team Udayavani, Nov 4, 2019, 10:14 PM IST

Working-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸಾಫ್ಟ್ ವೇರ್ ಮತ್ತು ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ಕೆಲಸಮಾಡುವವರಿಗೆ ವಾರದಲ್ಲಿ ಐದೇ ದಿನ ಕೆಲಸದ ಅವಧಿಯಾಗಿರುತ್ತದೆ. ಆದರೆ ಇದರ ಬದಲಿಗೆ ವಾರದಲ್ಲಿ ನಾಲ್ಕೇ ದಿನ ಕೆಲಸದ ಅವಧಿ ನಿಗದಿಪಡಿಸಿದರೆ ಏನಾಗುತ್ತದೆ? ಇಂತದ್ದೊಂದು ಪ್ರಯೋಗವನ್ನು ಮಾಡಿ ಜಪಾನ್ ಮೈಕ್ರೋಸಾಫ್ಟ್ ಕಂಪೆನಿ ಯಶಸ್ವಿಯಾಗಿದೆ. ಜಪಾನ್ ದೇಶದಲ್ಲಿ ಸುದೀರ್ಘ ಕೆಲಸದ ಅವಧಿ ಜನಪ್ರಿಯವಾಗಿದೆ.

ಜಪಾನ್ ನಲ್ಲಿರುವ ಮೈಕ್ರೋಸಾಫ್ಟ್ ಕಂಪೆನಿ ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ವಾರಕ್ಕೆ ನಾಲ್ಕೇ ದಿನಗಳ ಕೆಲಸದ ಅವಧಿಯನ್ನು ತನ್ನ ಉದ್ಯೋಗಿಗಳಿಗೆ ನಿಗದಿಪಡಿಸಿತು. ಮತ್ತು ಆಗಸ್ಟ್ ತಿಂಗಳಾಂತ್ಯದಲ್ಲಿ ಉತ್ಪಾದಕತೆಯ ಪ್ರಮಾಣವನ್ನು ಅವಲೋಕಿಸಿದಾಗ ಹೆಚ್.ಆರ್. ವಿಭಾಗಕ್ಕೆ ಆಶ್ಚರ್ಯ ಕಾದಿತ್ತು.

2018ರ ಆಗಸ್ಟ್ ತಿಂಗಳಿಗೆ ಹೋಲಿಸಿದಲ್ಲಿ ವಾರದಲ್ಲಿ ನಾಲ್ಕೇ ದಿನ ಕೆಲಸದ ಅವಧಿ ನಿಗದಿ ಮಾಡಿದ್ದ ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಉದ್ಯೋಗಿಗಳ ಉತ್ಪಾದಕತೆಯ ಮಟ್ಟದಲ್ಲಿ ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿತ್ತು. ಇದು ಎಷ್ಟರಮಟ್ಟಿಗೆ ಅಂದರೆ ಸುಮಾರು 40 ಪ್ರತಿಶತ ಹೆಚ್ಚಳ ಇಲ್ಲಿ ದಾಖಲಾಗಿತ್ತು.

‘ವರ್ಕ್ ಲೈಫ್ ಚಾಯ್ಸ್ ಚಾಲೆಂಜ್’ ಅಡಿಯಲ್ಲಿ ಜಗತ್ತಿನ ಸಾಫ್ಟ್ ವೇರ್ ದೈತ್ಯ ಕಂಪೆನಿ ಈ ಒಂದು ಪ್ರಯೋಗವನ್ನು ತನ್ನ ಉದ್ಯೋಗಿಗಳಿಗೆ ಕೆಲಸದ ಅವಧಿಯಲ್ಲಿ ಮಾಡಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದೆ.

ಜಪಾನ್ ಮೈಕ್ರೋಸಾಫ್ಟ್ ಕಂಪೆನಿ ತನ್ನಲ್ಲಿ ಕೆಲಸ ಮಾಡುತ್ತಿರುವ 2,300 ಉದ್ಯೋಗಿಗಳಿಗೆ ಆಗಸ್ಟ್ ತಿಂಗಳಿನಲ್ಲಿ ಶುಕ್ರವಾರವೂ ಸೇರಿದಂತೆ ಮೂರು ದಿನ ವೀಕೆಂಡ್ ರಜೆ ನೀಡಿತ್ತು. ಈ ಸಂದರ್ಭದಲ್ಲಿ ಪ್ರತೀ ಉದ್ಯೋಗಿಯ ಮಾರಾಟ ಪ್ರಮಾಣ 2018ರ ಆಗಸ್ಟ್ ತಿಂಗಳಿಗಿಂತ 39.9 ಪ್ರತಿಶತ ಹೆಚ್ಚಳವನ್ನು ಕಂಡಿತ್ತು.

ಇದರೊಂದಿಗೆ ಮೀಟಿಂಗ್ ಅವಧಿಯನ್ನು ಮತ್ತು ಇ-ಮೆಲ್ ಗಳಿಗೆ ಪ್ರತಿಕ್ರಿಯಿಸುವ ಅವಧಿಯನ್ನೂ ಸಹ ಕಡಿತಗೊಳಿಸುವ ಸಲಹೆ ಸಹ ಪ್ರಸ್ತಾವನೆಗೊಂಡಿತ್ತು. ಪ್ರತೀ ಮೀಟಿಂಗ್ ಅವಧಿ 30 ನಿಮಿಷಕ್ಕಿಂತ ಹೆಚ್ಚಿರಬಾರದು ಎಂಬ ಸಲಹೆಯನ್ನು ಅನುಷ್ಠಾನಗೊಳಿಸಿದಾಗ 23.1 ಪ್ರತಿಶತ ಕಡಿಮೆ ವಿದ್ಯುತ್ ಬಳಕೆ ಮತ್ತು 58.7 ಪ್ರತಿಶತ ಕಡಿಮೆ ಪ್ರಿಂಟಿಂಗ್ ಪೇಪರ್ ಬಳಕೆಯ ಫಲಿತಾಂಶ ಲಭಿಸಿದೆ.

ಸ್ವಂತಿಕೆಯ ಅಭಿವೃದ್ಧಿ ಮತ್ತು ಕುಟುಂಬ ಸೌಖ್ಯ ಯೋಜನೆಗಳಡಿಯಲ್ಲಿ ಕಂಪೆನಿಯು ಈ ಪ್ರಯೋಗವನ್ನು ಪ್ರಾರಂಭಿಸಿ ಇದೀಗ ಯಶಸ್ಸನ್ನು ಕಂಡಿದೆ ಮತ್ತು ತನ್ನ ಉದ್ಯೋಗಿಗಳಿಂದ ಧನಾತ್ಮಕ ಪ್ರತಿಕ್ರಿಯೆಗಳನ್ನು ಪಡೆದುಕೊಂಡಿದೆ. ಒಟ್ಟು ಉದ್ಯೋಗಿಗಳಲ್ಲಿ ಸುಮಾರು 92.1 ಪ್ರತಿಶತ ಉದ್ಯೋಗಿಗಳು ಈ ನಾಲ್ಕು ದಿನದ ಕೆಲಸದ ಅವಧಿಯನ್ನು ಇಷ್ಟಪಟ್ಟಿದ್ದಾರೆ.

ಟಾಪ್ ನ್ಯೂಸ್

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

Election Campaign 25 ವರ್ಷಗಳ ಹಿಂದೆ; ಆಗ ದುಡ್ಡಿನ ಆಸೆ ಇರಲಿಲ್ಲ…! 

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.