ಕುದುರೆ ಸವಾರಿ ವೇಳೆ ಅಪಘಾತ: 23ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ರೂಪದರ್ಶಿ


Team Udayavani, May 6, 2023, 9:51 AM IST

ಕುದುರೆ ಸವಾರಿ ವೇಳೆ ಅಪಘಾತ: 23ರ ಹರೆಯದಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ರೂಪದರ್ಶಿ

ಸಿಡ್ನಿ: ಕುದುರೆ ಸವಾರಿ ಮಾಡುವಾಗ ಕೆಳಗೆ ಬಿದ್ದು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಆಸ್ಟ್ರೇಲಿಯದ ರೂಪದರ್ಶಿ ಸಿಯೆನ್ನಾ ವೀರ್ (23) ಜೀವನ್ಮರಣ ಹೋರಾಟ ಮಾಡಿ ಕೊನೆಯುಸಿರೆಳೆದಿದ್ದಾರೆ.

ಎ. 2 ರಂದು ಸಿಯೆನ್ನಾ ವೀರ್ ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಮೈದಾನದಲ್ಲಿ ತನ್ನ ಮೆಚ್ಚಿನ ಹವ್ಯಾಸದಲ್ಲಿ ಒಂದಾಗಿರುವ ಕುದುರೆ ಸವಾರಿಯನ್ನು ಮಾಡುತ್ತಿದ್ದ ವೇಳೆ ಕುದುರೆ ಕೆಳಕ್ಕೆ ಬಿದ್ದಿದೆ. ಇದರಿಂದ ಗಂಭೀರ ಸ್ವರೂಪದ ಗಾಯಗೊಂಡಿದ್ದ ಅವರನ್ನು ವೆಂಟಿಲೇಟರ್‌ ನಲ್ಲಿ ಇಟ್ಟು ಹಲವು ವಾರಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಇಷ್ಟು ದಿನಗಳಿಂದ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಕೃತಕ ಉಸಿರಾಟದ ನೆರವನ್ನು ( ಮೇ. 4 ರಂದು) ತೆಗೆಯಲು ಹೇಳಿದ್ದಾರೆ.

ಸಿಯೆನ್ನಾ ವೀರ್ ಅವರ ಮಾಡೆಲಿಂಗ್ ಸಂಸ್ಥೆ ಸ್ಕೂಪ್ ಮ್ಯಾನೇಜ್‌ಮೆಂಟ್ ರೂಪದರ್ಶಿಯ ಹಲವು ಫೋಟೋಗಳನ್ನು ಹಂಚಿಕೊಂಡು ಅವರ ನಿಧನದ ಸುದ್ದಿಯನ್ನು ಅಧಿಕೃತವಾಗಿ ಹೇಳಿದೆ.

2022 ರ ಆಸ್ಟ್ರೇಲಿಯನ್ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ 27 ಅಂತಿಮ ಸ್ಪರ್ಧಿಗಳಲ್ಲಿ ಸಿಯೆನ್ನಾ ವೀರ್ ಒಬ್ಬರಾಗಿದ್ದರು. ಸಿಡ್ನಿ ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯ ಮತ್ತು ಮನೋವಿಜ್ಞಾನದಲ್ಲಿ ಡಬಲ್ ಪದವಿ ಪಡೆದಿದ್ದರು.

“ನನ್ನ ಸಹೋದರಿ ಹಾಗೂ ಕುಟುಂಬದವರೊಂದಿಗೆ ಹೆಚ್ಚು ಸಮಯ ಕಳೆಯಲು ಶೀಘ್ರದಲ್ಲಿ ಯುಕೆಗೆ ತೆರಳುವುದಾಗಿ ಅವರು ಸ್ಥಳೀಯ ಮಾಧ್ಯಮವೊಂದಕ್ಕೆ ಇತ್ತೀಚೆಗೆ ಹೇಳಿದ್ದರು.

ಕುದುರೆ ಸವಾರಿಯನ್ನು ಮೆಚ್ಚಿನ ಹವ್ಯಾಸವನ್ನಾಗಿ ಮಾಡಿಕೊಂಡಿದ್ದ ಅವರು ”ನಾನು ನನ್ನ ಜೀವನದ ದಿನಗಳನ್ನು ಬಹುಪಾಲು ನಗರದಲ್ಲಿ ವಾಸಿಸುತ್ತಿದ್ದರೂ, ಶೋ ಜಂಪಿಂಗ್ ( ಕುದುರೆ ಸವಾರಿ) ಬಗ್ಗೆ ತುಂಬಾ ಪ್ರೀತಿ. ನಾನು 3 ವರ್ಷ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ ಮತ್ತು ಅದು ಇಲ್ಲದೆ ನನ್ನ ಜೀವನವನ್ನು ಊಹಿಸಲು ಸಾಧ್ಯವಿಲ್ಲ. ಪ್ರತಿ ವಾರಾಂತ್ಯದಲ್ಲಿ ನ್ಯೂ ಸೌತ್ ವೇಲ್ಸ್ ಅಥವಾ ವಿಶಾಲವಾದ ಆಸ್ಟ್ರೇಲಿಯಾದಲ್ಲಿ ತರಬೇತಿ ನೀಡಲು ಮತ್ತು ಸ್ಪರ್ಧಿಸಲು ನಾನು ವಾರಕ್ಕೆ 2-3 ಬಾರಿ ಗ್ರಾಮೀಣ ಸಿಡ್ನಿಗೆ ಪ್ರಯಾಣಿಸುತ್ತೇನೆ” ಎಂದು ಈ ಹಿಂದೆ ಹೇಳಿದ್ದರು.

ರೂಪದರ್ಶಿ ಅನಿರೀಕ್ಷಿತ ನಿಧನದ ಸುದ್ದಿಯನ್ನು ಕೇಳಿ ಫ್ಯಾಷನ್‌ ಲೋಕದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ಗೆ ಗುಂಡೇಟು…

Slovak PM: ದುಷ್ಕರ್ಮಿಯಿಂದ ಸ್ಲೊವಾಕ್‌ ಪ್ರಧಾನಿ ರಾಬರ್ಟ್‌ ಮೇಲೆ ಗುಂಡಿನ ದಾಳಿ…

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.