14 ತುಂಬುವವರೆಗೆ ಮೊಬೈಲ್‌ ನಿಷೇಧ; ಇದು ಗೇಟ್ಸ್‌ ನಿಯಮ


Team Udayavani, Apr 23, 2017, 3:45 AM IST

bill-gets.jpg

ವಾಷಿಂಗ್ಟನ್‌: “ಊಹೂಂ, 14 ವರ್ಷ ತುಂಬದೇ ಮಕ್ಕಳ ಕೈಗೆ ಮೊಬೈಲ್‌ ಫೋನ್‌ ಕೊಡುವುದೇ ಇಲ್ಲ. ಹೋಂ ವರ್ಕ್‌ ಮಾಡೋ ಸಮಯದಲ್ಲಿ ಅದನ್ನು ಬಿಟ್ಟು ಬೇರೇನೂ ಮಾಡುವ ಹಾಗಿಲ್ಲ. ಶ್ರೀಮಂತಿಕೆಯ ಅಹಂ ಹತ್ತಿರ ಸುಳಿಯಬಾರದು. ಎಲ್ಲರ ಜೊತೆಯೂ ಸಾಮಾನ್ಯರಂತೆ ಬೆರೆಯಬೇಕು…’

ವೈಭೋಗದ ಜೀವನದ ಮೂಲಕ ಶ್ರೀಮಂತಿಕೆಯ ಪ್ರದರ್ಶನ ಮಾಡುವ ಕುಬೇರರೇ ತುಂಬಿರುವಂಥ ಈ ಜಗತ್ತಿನಲ್ಲಿ “ವಿಶ್ವದ ಅತಿ ಶ್ರೀಮಂತ ವ್ಯಕ್ತಿ’ ಎಂದು ಹೆಸರು ಗಳಿಸಿರುವ ಮೈಕ್ರೋಸಾಫ್ಟ್ ಸ್ಥಾಪಕ ಬಿಲ್‌ ಗೇಟ್ಸ್‌ ಅವರು ಪಾಲಿಸಿಕೊಂಡು ಬಂದಿರುವ ನೀತಿಯಿದು.

ಈ ಡಿಜಿಟಲ್‌ ಯುಗದ ತಂತ್ರಜ್ಞಾನ ಕ್ರಾಂತಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಗೇಟ್ಸ್‌ ಅವರು ತಮ್ಮ ಮಕ್ಕಳಿಗೆ 14 ವರ್ಷ ತುಂಬುವವರೆಗೂ ಸ್ಮಾರ್ಟ್‌ಫೋನ್‌ ಸಂಪರ್ಕಕ್ಕೆ ಬಾರದಂತೆ ನೋಡಿಕೊಂಡಿದ್ದಾರೆ. ಬ್ರಿಟನ್‌ನ ಪತ್ರಿಕೆ “ದಿ ಮಿರರ್‌’ಗೆ ನೀಡಿದ ಸಂದರ್ಶನದಲ್ಲಿ ಅವರೇ ಈ ಕುರಿತು ಹೇಳಿಕೊಂಡಿದ್ದಾರೆ. 

ಮೊಬೈಲ್‌ ಬಳಕೆಗೆ ಮಿತಿ: “ನಮ್ಮ ಮಕ್ಕಳಾದ ಜೆನಿಫ‌ರ್‌(20), ರೋರಿ(17) ಮತ್ತು ಫೋಬೆ(14)ಗೆ ಹಲವು ಮಿತಿಗಳನ್ನು ಹೇರಿದ್ದೇವೆ. ಸಹಪಾಠಿಗಳೆಲ್ಲ ಮೊಬೈಲ್‌ ಹೊಂದಿದ್ದಾರೆ ಎಂದು ಎಷ್ಟು ಹಠ ಹಿಡಿದರೂ ಅವರಿಗೆ 14 ವರ್ಷ ತುಂಬುವವರೆಗೂ ಸ್ಮಾರ್ಟ್‌ಫೋನ್‌ ಕೊಡಿಸಿರಲಿಲ್ಲ. ಡಿನ್ನರ್‌ ಟೇಬಲ್‌ ಬಳಿಯಂತೂ ಮೊಬೈಲನ್ನು ತರುವ ಹಾಗಿಲ್ಲ.
 ರಾತ್ರಿ ಮಲಗುವ ಸಮಯದಲ್ಲಿ ಅದು ಹತ್ತಿರ ಸುಳಿಯಲೂ ಕೂಡದು. ಸಾಮಾನ್ಯರಂತೆ ಇತರರೊಂದಿಗೆ ಬೆರೆಯಬೇಕು. ಹೋಂ ವರ್ಕ್‌ ಮಾಡಬೇಕು. ಹೆಚ್ಚು ಪಾಕೆಟ್‌ ಮನಿ ನೀಡುವುದಿಲ್ಲ. ಅವರನ್ನು ಸಾಮಾನ್ಯರ ಮಕ್ಕಳಂತೆ ಬೆಳೆಸಬೇಕೆಂಬುದು ನಮ್ಮ ಆಸೆ,’ ಎಂದಿದ್ದಾರೆ ಗೇಟ್ಸ್‌. ಇದೇ ವೇಳೆ,  ಮ್ಯಾಕ್‌ಡೊನಾಲ್ಡ್‌, ಬರ್ಗರ್‌ ಕಿಂಗ್‌ ತಮ್ಮ ಫೇವರಿಟ್‌ ಎಂಬುದನ್ನು ಹೇಳಲು ಗೇಟ್ಸ್‌ ಮರೆಯಲಿಲ್ಲ. 

10 ಡಾಲರ್‌ನ ವಾಚ್‌: ವಿಶೇಷವವೆಂದರೆ, ಸುಮಾರು 87 ಶತಕೋಟಿ ಡಾಲರ್‌(5.62 ಲಕ್ಷ ಕೋಟಿ ರೂ.) ಆಸ್ತಿ ಹೊಂದಿರುವ ಗೇಟ್ಸ್‌ ಅವರು ಸಂದರ್ಶನದ ಸಮಯದಲ್ಲೂ 10 ಡಾಲರ್‌(650 ರೂ.)ನ ಕ್ಯಾಸಿಯೋ ವಾಚ್‌ ಧರಿಸಿದ್ದರು ಎಂದು ದಿ ಮಿರರ್‌ ವರದಿ ಮಾಡಿದೆ.

ಟಾಪ್ ನ್ಯೂಸ್

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.