ಆಧುನಿಕ ರಾಷ್ಟ್ರಪಿತ ಮೋದಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಣೆ

Team Udayavani, Sep 25, 2019, 5:00 AM IST

r-44

ನ್ಯೂಯಾರ್ಕ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.

ನ್ಯೂಯಾರ್ಕ್‌: ಶತಮಾನಗಳ ಇತಿಹಾಸ ಹೊಂದಿರುವ ಭಾರತವನ್ನು ಸರ್ವಾಂಗೀಣ ಅಭಿವೃದ್ಧಿಯ ಹೊಸ ದಿಕ್ಕಿನತ್ತ ಕೊಂಡೊಯ್ಯುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಆಧುನಿಕ ರಾಷ್ಟ್ರಪಿತ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶ್ಲಾಘಿಸಿದ್ದಾರೆ.

ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಜತೆಗೆ ನಡೆಸಿದ ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಡಿ ಭಾರತ ಮತ್ತು ಅಮೆರಿಕದ ಸ್ನೇಹ ಸಂಬಂಧ ಮತ್ತಷ್ಟು ಬಲವಾಗಿದೆ. ಎರಡೂ ದೇಶಗಳ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಿದೆ ಎಂದರು.

ಪಾಕಿಸ್ಥಾನ ವಿರುದ್ಧ ಕಿಡಿ
ಜಗತ್ತಿಗೇ ಮಾರಕವಾಗಿ ಪರಿಣಮಿಸಿರುವ ಇರಾನ್‌ ದೇಶದಂತೆಯೇ ಪಾಕಿಸ್ಥಾನ ಸಹ ಅಪಾಯ ಕಾರಿ ದೇಶವಾಗಿ ಪರಿಗಣಿಸಿದೆ. ಭಾರತದ ವಿರುದ್ಧ ಆ ದೇಶ ನಡೆಸುವ ಯಾವುದೇ ರೀತಿಯ ಭಯೋತ್ಪಾದನೆಯನ್ನು ಮಟ್ಟ ಹಾಕು ವಲ್ಲಿ ಭಾರತ ಸಮರ್ಥವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

ಸದ್ಯದಲ್ಲೇ ವ್ಯಾಪಾರ ಒಪ್ಪಂದ
ಭಾರತ ಮತ್ತು ಅಮೆರಿಕ ನಡುವೆ 4.50 ಲಕ್ಷ ಕೋಟಿ ರೂ.ಗಳ ವ್ಯಾಪಾರಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಒಡಂಬಡಿಕೆಯೊಂದು ರೂಪುಗೊಳ್ಳ ಲಿದೆ. ಜತೆಗೆ ಎರಡೂ ದೇಶಗಳಲ್ಲಿ ಸುಮಾರು 50,000 ಉದ್ಯೋಗ ಸೃಷ್ಟಿಗೂ ಆದ್ಯತೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಭಾರತೀಯ ಕಾಲಮಾನ ಮಂಗಳವಾರ ರಾತ್ರಿ 9.45ರ ಸುಮಾರಿಗೆ ವಿಶ್ವಸಂಸ್ಥೆಯ ಜನರಲ್‌ ಅಸೆಂಬ್ಲಿ ಹಾಲ್‌ನಲ್ಲಿ ಸೇರಿದ ಇಬ್ಬರೂ ನಾಯಕರು, ದ್ವಿಪಕ್ಷೀಯ ಸಂಬಂಧಗಳ ಕುರಿತಾಗಿ ಮಾತನಾಡಿದರು. ಹ್ಯೂಸ್ಟನ್‌ನಲ್ಲಿ ರವಿವಾರ ನಡೆದಿದ್ದ “ಹೌಡಿ ಮೋದಿ’ ಎಂಬ ಅನಿವಾಸಿ ಭಾರತೀಯ ಮಹಾಸಭೆಯಲ್ಲಿ ಇಬ್ಬರೂ ಭೇಟಿಯಾದ ಅನಂತರ ಇದು ಅವರಿಬ್ಬರ ಎರಡನೇ ಭೇಟಿ.

ಪಾಕ್‌ ವಿರುದ್ಧ ಪರೋಕ್ಷ ಗುಡುಗು
ವಿಶ್ವಸಂಸ್ಥೆ ಸಭೆಯಲ್ಲಿ ಮಾತನಾಡುವಾಗ ಪ್ರಧಾನಿ ಮೋದಿ ಅವರು ಪಾಕಿಸ್ಥಾನದ ಹೆಸರೆತ್ತದೆ ವಾಗ್ಧಾಳಿ ನಡೆಸಿದರು. ಭಯೋತ್ಪಾದನೆಯ ಸಂಘಟನೆಗಳಿಗೆ ಹಣ ಮತ್ತು ಶಸ್ತ್ರಾಸ್ತ್ರಗಳು ಹರಿದುಬರುವುದನ್ನು ತಪ್ಪಿಸುವ ಉದ್ದೇಶದಿಂದ ಉಗ್ರರಿಗೆ ಹಣಕಾಸು ನೆರವು ನೀಡುವ ದೇಶಗಳನ್ನು ವಿಶ್ವಸಂಸ್ಥೆಯ “ನಿರ್ಬಂಧಿತ ದೇಶಗಳ ಪಟ್ಟಿ’ಗೆ ಸೇರಿಸಲಾಗುತ್ತಿದೆ. ಜತೆಗೆ ಹಣಕಾಸು ಕಾರ್ಯಪಡೆ (ಎಫ್ಎಟಿಎಫ್) ಸಂಸ್ಥೆ ಕೂಡ ಅಂಥ ದೇಶಗಳನ್ನು ಗ್ರೇ ಲಿಸ್ಟ್‌ ಹಾಗೂ ಬ್ಲಾ ಕ್‌ ಲಿಸ್ಟ್‌ಗೆ ಸೇರಿಸುವ ಮೂಲಕ ಅಂಥ ದೇಶಗಳಿಗೆ ಪಾಠ ಕಲಿಸುತ್ತದೆ. ಆದರೆ ಇಂಥ ಕ್ರಮಗಳಿಗೆ ಕೆಲವು ರಾಷ್ಟ್ರಗಳು ರಾಜಕೀಯ ಬಣ್ಣ ಬಳಿಯುತ್ತಿವೆ. ಆ ಕುತಂತ್ರಗಳಿಗೆ ಮಣೆ ಹಾಕದೆ ಉಗ್ರರಿಗೆ ಹಣಕಾಸು ನೆರವು ನೀಡುವ ರಾಷ್ಟ್ರಗಳ ವಿರುದ್ಧ ಕ್ರಮ ಕೈಗೊಳ್ಳಲೇಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

ಉಗ್ರ ತರಬೇತಿ ನಿಜ: ಇಮ್ರಾನ್‌
ಕುಖ್ಯಾತ ಉಗ್ರ ಒಸಾಮ ಬಿನ್‌ ಲಾದನ್‌ನಿಂದ ಸ್ಥಾಪಿಸಲ್ಪಟ್ಟಿರುವ ಅಲ್‌ ಕಾಯಿದಾ ಸಹಿತ ಅನೇಕ ಉಗ್ರ ಸಂಘಟನೆಗಳಿಗೆ ಪಾಕಿಸ್ಥಾನ ಸೇನೆ ಹಾಗೂ ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐ ತರಬೇತಿ ನೀಡಿದ್ದವು ಎಂದು ಪಾಕಿಸ್ಥಾನದ ಪ್ರಧಾನಿ ಇಮ್ರಾನ್‌ ಖಾನ್‌ ಒಪ್ಪಿಕೊಂಡಿದ್ದಾರೆ. ಸದ್ಯಕ್ಕೆ ಅಮೆರಿಕ ಪ್ರವಾಸದಲ್ಲಿರುವ ಅವರು ನ್ಯೂಯಾರ್ಕ್‌ನಲ್ಲಿ ಮಾತನಾಡಿ, “80ರ ದಶಕದಲ್ಲಿ ಅಫ್ಘಾನಿಸ್ಥಾನದಲ್ಲಿ ಸೋವಿಯತ್‌ ಪಡೆಗಳ ವಿರುದ್ಧ ಹೋರಾಡಲು ಮುಜಾಹಿದೀನ್‌, ಅಲ್‌ ಕಾಯಿದಾದಂಥ ಸಂಘಟನೆಗಳಿಗೆ ತರಬೇತಿ ನೀಡಲಾಗಿತ್ತು’ ಎಂದಿದ್ದಾರೆ. ಇದು ಎಲ್ಲರಿಗೂ ತಿಳಿದ ವಿಚಾರವಾಗಿದ್ದರೂ ಪಾಕಿಸ್ಥಾನದ ರಾಜಕೀಯ ನಾಯಕರೊಬ್ಬರು ಜಗತ್ತಿನ ಮುಂದೆ ಅದನ್ನು ಒಪ್ಪಿಕೊಂಡಿರುವುದು ಇದೇ ಮೊದಲು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.