ಪಾಕ್‌ಗೆ ಮೋದಿ ಟ್ರಂಪ್‌ “ಉಗ್ರ’ ಎಚ್ಚರಿಕೆ; ಉಗ್ರರಿಗೆ ಆಶ್ರಯ ಬೇಡ


Team Udayavani, Jun 28, 2017, 3:45 AM IST

modi.jpg

ವಾಷಿಂಗ್ಟನ್‌: ಅಂತೂ ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಪಾಕಿಸ್ತಾನವನ್ನು ಒಬ್ಬಂಟಿ ಮಾಡುವ ಯತ್ನದಲ್ಲಿ ಸ್ವಲ್ಪ ಮಟ್ಟಿನ ಯಶ ಕಂಡಿದೆ.

ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮಾತುಕತೆ ವೇಳೆ ಆರ್ಥಿಕತೆ, ದ್ವಿಪಕ್ಷೀಯ ಸಂಬಂಧಗಳಿಗಿಂತ ಹೆಚ್ಚಾಗಿ, ಪಾಕಿಸ್ತಾನದ ಭಯೋತ್ಪಾದನೆ ಕುರಿತಂತೆಯೇ ಹೆಚ್ಚು ಚರ್ಚೆಯಾಗಿದೆ. ಆದರೆ, ಇಬ್ಬರೂ ಎಲ್ಲೂ ತಮ್ಮ ಹೇಳಿಕೆಗಳಲ್ಲಿ ಪಾಕಿಸ್ತಾನದ ಹೆಸರು ಪ್ರಸ್ತಾಪಿಸದೇ ಹೋದರೂ, ಭಾರತವನ್ನು ಕಾಡುತ್ತಿರುವ ಭಯೋತ್ಪಾದನೆಗೆ ಪಾಕ್‌ ನೆಲವೇ ಕಾರಣ ಎಂದು ಟ್ರಂಪ್‌ ಅವರ ಕಡೆಯಿಂದ ಹೇಳಿಸುವಲ್ಲಿ ಮೋದಿ ಯಶಸ್ಸು ಕಂಡಿದ್ದಾರೆ.

ಈ ಇಬ್ಬರು ನಾಯಕರು ನೀಡಿದ ಜಂಟಿ ಹೇಳಿಕೆಯಲ್ಲಿ ಉಗ್ರವಾದದ ಬಗ್ಗೆ ಹೆಚ್ಚು ಪ್ರಸ್ತಾಪ ಮತ್ತು ಒಟ್ಟಾಗಿ ಹೋರಾಟ ನಡೆಸುವ ಬಗ್ಗೆ ತೀರ್ಮಾನಿಸಿದ್ದೇವೆ ಎಂದರು. ಅಲ್ಲದೆ ನೇರವಾಗಿ ಮುಸ್ಲಿಂ ಭಯೋತ್ಪಾದನೆ ವಿರುದ್ಧ ಮೃಧು ಧೋರಣೆ ಬೇಡವೆಂದು ಟ್ರಂಪ್‌ ಪ್ರತಿಪಾದಿಸಿದರು. ಪಾಕ್‌ ನೆಲದಿಂದ ಕಾರ್ಯಾಚರಣೆ ಮಾಡುತ್ತಿರುವ ಉಗ್ರ ಸಂಘಟನೆಗಳಾದ ಜೈಶ್‌-ಎ-ಮೊಹಮ್ಮದ್‌, ಲಷ್ಕರ್‌-ಎ-ತೋಯ್ಬಾ, ಡಿ ಕಂಪನಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಐಸಿಸ್‌ ಮತ್ತು ಅಲ್‌ ಖೈದಾ ವಿರುದ್ಧ ಎರಡೂ ದೇಶಗಳು ಒಟ್ಟಾಗಿ ಹೋರಾಟ ನಡೆಸಲಿವೆ ಎಂದು ಟ್ರಂಪ್‌ ಹೇಳಿದರು.

ಇನ್ನು ನರೇಂದ್ರ ಮೋದಿ ಅವರು ಮಾತನಾಡಿ, ಭಯೋತ್ಪಾದನೆ, ತೀವ್ರವಾದ ಮತ್ತು ಮೂಲಭೂತವಾದದ ವಿರುದ್ಧ ಹೋರಾಟ ನಡೆಸುವಲ್ಲಿ ಇಬ್ಬರು ನಾಯಕರು ಒಪ್ಪಿಕೊಂಡಿದ್ದೇವೆ. ಉಗ್ರರ ಸ್ವರ್ಗವಾಗಿರುವ ಸ್ಥಳಗಳ ವಿರುದ್ಧ ಮತ್ತು ಅವುಗಳಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕ್ರಮವೇ ನಮ್ಮ ಪ್ರಮುಖ ಆದ್ಯತೆ ಎಂದರು.  ಭಯೋತ್ಪಾದನೆ ಎನ್ನುವುದೇ ಎರಡೂ ರಾಷ್ಟ್ರಗಳಿಗೆ ಪ್ರಧಾನ ಸವಾಲು. ಅದಕ್ಕಾಗಿ ಗುಪ್ತಚರ ಮಾಹಿತಿ ಹಂಚಿಕೆ ಮಾಡಲು ಒಪ್ಪಿಕೊಂಡಿದ್ದೇವೆ ಎಂದು ಮೋದಿ ಹೇಳಿದರು.

ಇದರ ಜತೆಗೆ ರಕ್ಷಣೆ, ವಾಣಿಜ್ಯ ವಹಿವಾಟು ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಹೆಚ್ಚಿನ ಒತ್ತು ನೀಡುವ ನಿಟ್ಟಿನ ಬಗ್ಗೆಯೂ ಪ್ರಮುಖವಾಗಿ ಪ್ರಸ್ತಾಪಿಸಲಾಯಿತು. ಆದರೆ, ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಸವಾಲಾಗಿರುವ ಎಚ್‌-1ಬಿ ವೀಸಾ ವಿಚಾರವಾಗಲೀ, ಹವಾಮಾನ ಬದಲಾವಣೆ ಕುರಿತಾಗಲೀ ಉಭಯ ನಾಯಕರ ನಡುವೆ ಚರ್ಚೆ ನಡೆಯಲಿಲ್ಲ.

ಈ ಮಧ್ಯೆ, ಮೋದಿ-ಟ್ರಂಪ್‌ ಅವರ ಜಂಟಿ ಹೇಳಿಕೆಗೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿವೆ. ಹೇಳಿಕೆಯಲ್ಲಿ ಮುಸ್ಲಿಂ ಭಯೋತ್ಪಾದನೆ ಎಂಬ ಪದ ಬಳಕೆಯಾಗಬಾರದಿತ್ತು ಎಂದು ಈ ಪಕ್ಷಗಳು ಅಭಿಪ್ರಾಯಪಟ್ಟಿವೆ. ಇದು ಅಮೆರಿಕದ ಅಭಿಪ್ರಾಯವಾಗಿದ್ದು, ಭಾರತ ಒಪ್ಪಿಕೊಳ್ಳಬಾರದಿತ್ತು ಎಂದಿವೆ. ಜತೆಗೆ, “ಭಾರತದ ಆಡಳಿತದಲ್ಲಿರುವ ಜಮ್ಮು -ಕಾಶ್ಮೀರ’ ಎಂಬ ಟ್ರಂಪ್‌ ಹೇಳಿಕೆ ಬಗ್ಗೆ ಮೋದಿ ಪ್ರತಿಭಟಿಸದೇ ಹೋದದ್ದು ಸರಿಯಲ್ಲ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಮೋದಿಯೇ ಮೊದಲ ವಿದೇಶಿ ಅತಿಥಿ
ಪ್ರವಾಸದ ಪ್ರಧಾನ ಅಂಶವೆಂದರೆ ಅಧ್ಯಕ್ಷರ ನಿವಾಸ ಶ್ವೇತ ಭವನದಲ್ಲಿ ಮೊದಲ ವಿದೇಶಿ ಗಣ್ಯ ಅತಿಥಿಗೆ ಅಂದರೆ  ಪ್ರಧಾನಿ ನರೇಂದ್ರ ಮೋದಿಗೆ ಔತಣಕೂಟ ಏರ್ಪಡಿಸಿದ್ದು. ಒಟ್ಟು 26 ಮಂದಿ ಅದರಲ್ಲಿ ಭಾಗವಹಿಸಿದ್ದರು. ಹಳದಿ ಬಣ್ಣದ ದಿರಿಸು ಧರಿಸಿದ್ದ ಟ್ರಂಪ್‌ ಪತ್ನಿ ಮಿಲಾನಿಯಾ ಟ್ರಂಪ್‌ ಔತಣ ಕೂಟದ ಮೇಲುಸ್ತುವಾರಿ ವಹಿಸಿದ್ದರು. “ಅಮೆರಿಕದ ಮೊದಲ ಮಹಿಳೆ ನನಗಾಗಿ ಈ ಔತಣ ಕೂಟ ಆಯೋಜಿಸಿದ್ದಾರೆ. ಇದು 125 ಕೋಟಿ ಭಾರತೀಯರಿಗೆ ಸಂದ ಗೌರವ’ ಎಂದರು ಪ್ರಧಾನಿ ಮೋದಿ. ಬಳಿಕ  ಪ್ರಧಾನಿ ಮೋದಿಯವರಿಗೆ ಅಧ್ಯಕ್ಷ ಟ್ರಂಪ್‌, ಶ್ವೇತಭವನದಲ್ಲಿ ಅಬ್ರಾಹಾಂ ಲಿಂಕನ್‌ ಇದ್ದ ಕೊಠಡಿ, ಅವರು ಬರೆಯುತ್ತಿದ್ದ ಮೇಜು, ಗೆಟ್ಸ್‌ಬರ್ಗ್‌ನಲ್ಲಿ ಅವರು ಮಾಡಿದ್ದ ಜನಪ್ರಿಯ ಭಾಷಣದ ಪ್ರತಿಯನ್ನು ತೋರಿಸಿದರು.

ಎರಡೂ ರಾಷ್ಟ್ರಗಳು ಭದ್ರತೆಯ ನಿಟ್ಟಿನಲ್ಲಿ ಹೋರಾಟ ಕೈಗೊಂಡಿವೆ. ಇಸ್ಲಾಮಿಕ್‌ ಭಯೋತ್ಪಾದನೆ ಮತ್ತು ಉಗ್ರ ಸಂಘಟನೆಗಳನ್ನು ನಾಶ ಮಾಡಲು ಭಾರತ ಮತ್ತು ಅಮೆರಿಕ ಪಣತೊಟ್ಟಿವೆ.
– ಡೊನಾಲ್ಡ್‌ ಟ್ರಂಪ್‌, ಅಮೆರಿಕ ಅಧ್ಯಕ್ಷ

ಭಯೋತ್ಪಾದನೆ ಮತ್ತು ಮೂಲಭೂತವಾದದ ವಿರುದ್ಧ ಹೋರಾಟ ನಡೆಸಲು ಒಪ್ಪಿದ್ದೇವೆ. ಉಗ್ರರ ಸ್ವರ್ಗವಾಗಿರುವ ಸ್ಥಳಗಳ ವಿರುದ್ಧ ಮತ್ತು ಅವುಗಳಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಕ್ರಮವೇ ನಮ್ಮ ಆದ್ಯತೆ.
– ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.