ಹಿಂದೂಗಳು ಒಗ್ಗಟ್ಟಾಗಲಿ


Team Udayavani, Sep 9, 2018, 6:00 AM IST

x-38.jpg

ಷಿಕಾಗೋ: “”ಸಿಂಹ ಏಕಾಂಗಿಯಾಗಿದ್ದರೆ ಕಾಡು ನಾಯಿಗಳು ದಾಳಿ ಮಾಡುತ್ತವೆ. ಇದನ್ನು ನಾವು ಮರೆಯಬಾರದು. ನಾವೆಲ್ಲರೂ ಒಗ್ಗಟ್ಟಾಗಿ, ಮನುಕುಲದ ಒಳಿತಿಗೆ ಏಕತೆಯಿಂದ ಶ್ರಮಿಸಬೇಕು” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸಮಸ್ತ ಹಿಂದೂ ನಾಯಕರಿಗೆ ಕರೆ ಕೊಟ್ಟಿದ್ದಾರೆ. ಷಿಕಾಗೋದಲ್ಲಿ ಶುಕ್ರವಾರ ಆರಂಭಗೊಂಡ 3 ದಿನಗಳ ವಿಶ್ವ ಹಿಂದೂ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂಗಳ ಐಕ್ಯತೆ ಹಾಗೂ ಸಾರ್ವಭೌಮತೆಗೆ ಕರೆ ನೀಡಿದರು. 1883 ರಲ್ಲಿ ಸ್ವಾಮಿ ವಿವೇಕಾನಂದ ಅವರು ಅಂತಾರಾಷ್ಟ್ರೀಯ ಧರ್ಮ ಸಂಸತ್‌ ಸಭೆಯಲ್ಲಿ ಮಾಡಿದ ಐತಿಹಾಸಿಕ ಭಾಷಣಕ್ಕೆ 125 ವರ್ಷ ಸಂದ ಹಿನ್ನೆಲೆಯಲ್ಲಿ ಈ ಸಮ್ಮೇಳನ ಆಯೋಜಿಸಲಾಗಿದೆ. 

ತಮ್ಮ ಭಾಷಣದಲ್ಲಿ ಹಿಂದೂಗಳ ಸರ್ವಧರ್ಮ ಸಹಿಷ್ಣುತೆಯ ಗುಣವನ್ನು ವಿಶೇಷವಾಗಿ ಉಲ್ಲೇಖೀಸಿದ ಭಾಗವತ್‌, “”ಹಿಂದೂಗಳು ಸಮಾಜದಲ್ಲಿ ತಾವೇ ಪ್ರಬಲರಾಗಿರ ಬೇಕೆಂದು ಎಂದಿಗೂ ಬಯಸುವುದಿಲ್ಲ. ಆದರೆ, ಹಿಂದೂಗಳಲ್ಲಿ ಏಕತೆಯ ಕೊರತೆಯಿದೆ. ಇಡೀ ಸಮುದಾಯವೇ ಒಂದು ಸಮಾಜದಂತೆ ನಡೆದುಕೊಂಡಲ್ಲಿ ಮಾತ್ರ ಹಿಂದೂಗಳು ಸಂಪದ್ಭರಿತವಾಗಿ ಜೀವಿಸಲು ಸಾಧ್ಯ” ಎಂದರು. 

ಇದೇ ವೇಳೆ, ಒಗ್ಗಟ್ಟಿನಿಂದ ಬದುಕಲು ಹಿಂದೂ ಧರ್ಮದ ನಾಯಕರಿಗೆ ಕಿವಿಮಾತು ಹೇಳಿದ ಅವರು, “”ಒಬ್ಬರ ಅಭಿಪ್ರಾಯವನ್ನು ಮತ್ತೂಬ್ಬರು ಗೌರವಿಸಬೇಕು. ಅಹಂಕಾರಗಳನ್ನು ಬಿಡಬೇಕು. ಹಿಂದೂಗಳಲ್ಲಿ ಅನೇಕ ಪ್ರಜ್ಞಾವಂತ ನಾಯಕರಿದ್ದಾರೆ. ಆದರೆ, ಅವರೆಲ್ಲರೂ ಒಗ್ಗೂಡುವುದೇ ಕಠಿಣ” ಎಂದು ವಿಷಾದಿಸಿದರು.

ರಾಜಕೀಯದಲ್ಲೂ ಏಕತೆಯಿರಲಿ: ರಾಜಕೀಯದಲ್ಲೂ ಧಾರ್ಮಿಕತೆಯ ತಳಹದಿ ಇರಬೇಕೆಂದು ಆಶಿಸಿದ ಭಾಗವತ್‌, “”ರಾಜಕೀಯವನ್ನು ಧ್ಯಾನಶಿಬಿರದಂತೆ ನಡೆಸಲು ಸಾಧ್ಯವಿಲ್ಲ. ಆದರೂ, ಮಹಾಭಾರತದ ಶ್ರೀಕೃಷ್ಣ ಹಾಗೂ ಯುಧಿಷ್ಠಿರರು ಎಂದಿಗೂ ತಮ್ಮ ನಡುವೆ ಭಿನ್ನಾಭಿಪ್ರಾಯಕ್ಕೆ ಅವಕಾಶ ಮಾಡಿಕೊಡಲಿಲ್ಲ. ಇಂದಿನ ಯುಗದಲ್ಲಿ ಇಡೀ ವಿಶ್ವವನ್ನೇ ಒಂದು ಕುಟುಂಬವನ್ನಾಗಿ ರೂಪಿಸಬೇಕೆಂದರೆ ಜಗತ್ತಿನ ನಾನಾ ನಾಯಕರ ನಡುವೆ ಕೃಷ್ಣ-ಯುಧಿಷ್ಠಿರರಂಥ ಸಮನ್ವಯತೆ ಇರಬೇಕು” ಎಂದು ಅವರು ಅಭಿಪ್ರಾಯಪಟ್ಟರು.   

ಸಂಪ್ರದಾಯವಾದಿಯಲ್ಲ: ಇದೇ ವೇಳೆ, ತಾವೊಬ್ಬ ಆದರ್ಶವಾದಿ ಎಂದು ತಮ್ಮನ್ನು ತಾವು ಬಣ್ಣಿಸಿಕೊಂಡ ಭಾಗವತ್‌, ನಾನು ಆಧುನಿಕತೆಯ ವಿರೋಧಿಯಲ್ಲ. ನಾನೊಬ್ಬ ಭವಿಷ್ಯವಾದಿ. ತಮ್ಮಿ ವ್ಯಕ್ತಿತ್ವಕ್ಕೆ ತಾವು ನಂಬಿರುವ ಹಿಂದೂ ಧರ್ಮವೇ ಕಾರಣ. ಹಿಂದೂ ಧರ್ಮವು ಪುರಾತನವಾಗಿದ್ದರೂ ಅದರ ಒಳದೃಷ್ಟಿಯು ಆಧುನಿಕತೆಯನ್ನೂ ಮೀರಿಸಿದೆ ಎಂದರು.

ತಂತ್ರಜ್ಞಾನದಿಂದ ಎಲ್ಲರನ್ನೂ ಬೆಸೆಯೋಣ
“ವಿಶ್ವವನ್ನು ಹುರಿದು ಮುಕ್ಕುತ್ತಿರುವ ಅನೇಕ ಸಮಸ್ಯೆಗಳಿಗೆ ಹಿಂದೂ ಧರ್ಮದ ಆಳವಾದ ಚಿಂತನೆಗಳಲ್ಲಿ ಪರಿಹಾರವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ವಿಶ್ವ ಹಿಂದೂ ಸಮ್ಮೇಳನಕ್ಕಾಗಿ ವಿಶೇಷ ಸಂದೇಶವನ್ನು ರವಾನಿಸಿರುವ ಅವರು, “ಇಂದಿನ ತಂತ್ರಜ್ಞಾನದ ಯುಗದಲ್ಲಿ ಮನುಕುಲವನ್ನು ತಂತ್ರಜ್ಞಾನದಿಂದಲೇ ಬೆಸೆಯಬೇಕಿದೆ. ಹೀಗೆ, ಎಲ್ಲರನ್ನೂ ಬೆಸೆಯುವ ಮೂಲಕ ಹಿಂದೂ ಧರ್ಮದ ಚಿಂತನೆಗಳನ್ನು ಸರ್ವರಿಗೂ ಮುಟ್ಟಿಸಬೇಕಿದೆ. ಇಂಥ ಪ್ರಯತ್ನಗಳ ಬಗ್ಗೆ ಸಮ್ಮೇಳನಕ್ಕೆ ಹಾಜರಾಗಿರುವ ಎಲ್ಲರೂ ಆಲೋಚಿಸಬೇಕು’ ಎಂದು ಕರೆ ನೀಡಿದ್ದಾರೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.