ಮ್ಯಾನ್ಮಾರ್ ಸೇನಾ ದಂಗೆ ವಿರುದ್ಧ ಆಕ್ರೋಶ: ಗುಂಡಿನ ದಾಳಿ, ಸಾವಿನ ಸಂಖ್ಯೆ 30ಕ್ಕೆ ಏರಿಕೆ
ಮ್ಯಾನ್ಮಾರ್ ಮಿಲಿಟರಿ ಪ್ರತಿಭಟನಾ ನಿರತರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ವಿರೋಧವನ್ನು ಹತ್ತಿಕ್ಕುತ್ತಿರುವುದಾಗಿ ವರದಿ ತಿಳಿಸಿದೆ.
Team Udayavani, Mar 3, 2021, 4:18 PM IST
ಮ್ಯಾನ್ಮಾರ್: ಮ್ಯಾನ್ಮಾರ್ ಮಿಲಿಟರಿ ದಂಗೆ ವಿರುದ್ಧ ಪ್ರತಿಭಟನಾ ನಿರತ ಜನರ ಮೇಲೆ ಮ್ಯಾನ್ಮಾರ್ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ(ಮಾರ್ಚ್ 03) ನಡೆದಿದೆ.
ಇದನ್ನೂ ಓದಿ:ಕೋವಿಡ್ 19 ಎಫೆಕ್ಟ್: 2021ನೇ ಸಾಲಿನಲ್ಲಿ ಇಪಿಎಫ್ ಬಡ್ಡಿದರ ಇಳಿಕೆ ಸಾಧ್ಯತೆ?
ಫೆಬ್ರುವರಿ 1ರಿಂದ ಮ್ಯಾನ್ಮಾರ್ ಆಡಳಿತವನ್ನು ಸೇನೆ ವಶಕ್ಕೆ ತೆಗೆದುಕೊಂಡ ಬಳಿಕ ದೇಶಾದ್ಯಂತ ಸೇನೆ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು, ಈವರೆಗೆ ಸುಮಾರು 30 ಮಂದಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
ಮ್ಯಾನ್ಮಾರ್ ನ ಎರಡನೇ ಅತೀದೊಡ್ಡ ನಗರವಾದ ಮ್ಯಾಂಡಲೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಘರ್ಷಣೆಯಿಂದ ಇಬ್ಬರು ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ. ಯಾಂಗಾನ್ ನಗರದಲ್ಲಿನ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಒಬ್ಬ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಸೆಂಟ್ರಲ್ ಟೌನ್ ನಲ್ಲಿ ಪೊಲೀಸರ ಗುಂಡಿನ ದಾಳಿಗೆ ಐವರು ಹಾಗೂ ಸೆಂಟ್ರಲ್ ನಗರವಾದ ಮೈಂಗ್ಯಾನ್ ನಲ್ಲಿ ಒರ್ವ ವ್ಯಕ್ತಿ ಸಾವನ್ನಪ್ಪಿರುವುದಾಗಿ ಯುವ ಕಾರ್ಯಕರ್ತ ಮೊಯಿ ಮೈಂಟ್ ಹೈನ್ ತಿಳಿಸಿರುವುದಾಗಿ ವರದಿ ಹೇಳಿದೆ.
ಪದಚ್ಯುತ ಸರ್ಕಾರದ ನಾಯಕಿ ಆ್ಯಂಗ್ ಸಾನ್ ಸೂ ಕೀ ಸೇರಿದಂತೆ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸುವಂತೆ ನೆರೆಯ ದೇಶಗಳು ಮನವಿ ಮಾಡಿಕೊಂಡಿದ್ದವು, ಆದರೆ ಮ್ಯಾನ್ಮಾರ್ ಮಿಲಿಟರಿ ಪ್ರತಿಭಟನಾ ನಿರತರ ಮೇಲೆ ಗುಂಡಿನ ದಾಳಿ ನಡೆಸುವ ಮೂಲಕ ವಿರೋಧವನ್ನು ಹತ್ತಿಕ್ಕುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ