ಇನ್ನಾದರೂ ನರ ಹತ್ಯೆ ನಿಲ್ಲಿಸಿ ! ಮ್ಯಾನ್ಮಾರ್ಗೆ ವಿಶ್ವಸಂಸ್ಥೆ ಕೋರ್ಟ್ನಲ್ಲಿ ತಾಕೀತು
2017ರ ಕಾರ್ಯಾಚರಣೆ ವಿರುದ್ಧ ಸೂಕಿ ಸಮ್ಮುಖದಲ್ಲೇ ವಿಚಾರಣೆ
Team Udayavani, Dec 10, 2019, 10:47 PM IST
ದ ಹೇಗ್: ಮ್ಯಾನ್ಮಾರ್ ಸರ್ಕಾರ ರೊಹಿಂಗ್ಯಾ ಮುಸ್ಲಿಮರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವುದಕ್ಕೆ ವಿಶ್ವಸಂಸ್ಥೆಯ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ನರ ಹತ್ಯೆಯನ್ನು ನಿಲ್ಲಿಸುವಂತೆ ನ್ಯಾಯಾಲಯ ನೊಬೆಲ್ ಪುರಸ್ಕೃತೆ ಆ್ಯಂಗ್ ಸ್ಯಾನ್ ಸೂಕಿ ಅವರಿಗೆ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಇದರಿಂದಾಗಿ ಸೂಕಿ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರ ಉಂಟಾಗಿದೆ.
ಮಂಗಳವಾರ ನಡೆದಿದ್ದ ವಿಚಾರಣೆ ವೇಳೆ ಸೂಕಿ ಸಮ್ಮುಖದಲ್ಲಿಯೇ 2017ರಲ್ಲಿ ನಡೆದಿದ್ದ ಕಾರ್ಯಾಚರಣೆಯ ಫೋಟೋ, ದೌರ್ಜನ್ಯ ಆರೋಪಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಯಿತು. ಅದಕ್ಕೆ ಪೂರಕವಾಗಿ ಮ್ಯಾನ್ಮಾರ್ ರಾಜಧಾನಿ ಯಾಂಗೂನ್ನಲ್ಲಿ ಸಾವಿರಾರು ಮಂದಿ ಮೌನ ಪ್ರತಿಭಟನೆ ನಡೆಸಿ ತಮ್ಮ ನಾಯಕಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
2017ರಲ್ಲಿ ಮ್ಯಾನ್ಮಾರ್ ಸರ್ಕಾರ ಅನುಸರಿಸಿದ್ದ ದಮನಕಾರಿ ನೀತಿಯ ಅನ್ವಯ 7.40 ಲಕ್ಷಕ್ಕೂ ಅಧಿಕ ರೊಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿದ್ದರು. ಅದರ ವಿರುದ್ಧ ಆಫ್ರಿಕಾ ಖಂಡದ ರಾಷ್ಟ್ರ ಗಾಂಬಿಯಾ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆದು, ವಿಶ್ವಸಂಸ್ಥೆಯ ಕೋರ್ಟ್ಗೆ ದೂರು ನೀಡಿತ್ತು.
ಅಲ್ಲಿನ ನ್ಯಾಯ ಖಾತೆ ಸಚಿವ ಅಬೂಬಕರ್ ತಂಬಾದೌ, ಮ್ಯಾನ್ಮಾರ್ ಸರ್ಕಾರ 1948ರ ನರಹತ್ಯೆ ನಿಷೇಧ ಸಮ್ಮೇಳನದ ಒಪ್ಪಂದ ಉಲ್ಲಂ ಸಿದೆ. ಅದೇ ರೀತಿಯ ಮತ್ತೂಂದು ಘಟನೆ ಶೀಘ್ರದಲ್ಲಿಯೇ ನಡೆಯಲಿದೆ. ಅದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರಬಲವಾಗಿ ವಾದಿಸಿದರು. ಮ್ಯಾನ್ಮಾರ್ ಸರ್ಕಾರದ ವಿರುದ್ಧ ಇರುವ ಆರೋಪಗಳ ಬಗ್ಗೆ ನೊಬೆಲ್ ಪುರಸ್ಕೃತೆ ಬುಧವಾರ ಸಮಗ್ರ ಉತ್ತರ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ