ಇನ್ಫಿ ಮೂರ್ತಿ ಅಳಿಯ ರಿಷಿಯ ಹೊಣೆಗಾರಿಕೆ ಸಣ್ಣದಲ್ಲ

ಬ್ರಿಟನ್‌ ಅರ್ಥ ಸಚಿವರಾಗಿದ್ದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಅಭಿನಂದನೆ

Team Udayavani, Feb 15, 2020, 6:15 AM IST

Narayana-Murthy,-Rishi-Sunak

ಮಣಿಪಾಲ: ಇನ್ಫೋಸಿಸ್‌ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಅವರ ಅಳಿಯ ರಿಷಿ ಸುನಾಕ್‌ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸರಕಾರದಲ್ಲಿ ಹಣಕಾಸು ಸಚಿವರಾದ ಸುದ್ದಿಗೆ ಶುಕ್ರವಾರವೂ ಸಾಮಾಜಿಕ ಮಾಧ್ಯಮದಲ್ಲಿ ಮಹತ್ವ ಸಿಕ್ಕಿತ್ತು. ಬ್ರಿಟನ್‌ನ ಹೊಸ ಆರ್ಥಿಕತೆ ಯನ್ನು ಅವರು ಸಮರ್ಥವಾಗಿ ನಿಭಾಯಿಸಲಿ ಎಂಬುದು ಎಲ್ಲರ ಹಾರೈಕೆಯಾಗಿದೆ.

ಗುರುವಾರ ಅವರ ನೇಮಕದ ಘೋಷಣೆ ಪ್ರಕಟ ವಾಗುತ್ತಿದ್ದಂತೆ ಟ್ವಿಟರ್‌ ನಲ್ಲಿ ಸಾಕಷ್ಟು ಪೋಸ್ಟ್‌ಗಳು ಹರಿದಾಡಿದವು. ಅವರ ವ್ಯಕ್ತಿ ವಿವರದಿಂದ ಹಿಡಿದು, ಅವರ ಇದು ವರೆಗಿನ ಕಾರ್ಯ ನಿರ್ವಹಣೆ ಕುರಿತೂ ಚರ್ಚೆಗಳು ನಡೆದಿವೆ. ಹಲವಾರು ಭಾರತೀಯ ಸಂಸದರ ಸಹಿತ ಸಾಕಷ್ಟು ಮಂದಿ ಅಭಿನಂದನೆ ಸಲ್ಲಿಸಿದ್ದಾರೆ. ನಾರಾಯಣಮೂರ್ತಿಯವರೂ ಇಮೇಲ್‌ ಮೂಲಕ ಶುಭಾಶಯ ಕೋರಿ, ಜನರ ಸೇವೆ ಮಾಡಲು ಇದೊಂದು ಒಳ್ಳೆಯ ಅವಕಾಶ ಎಂದು ಅಭಿಪ್ರಾಯಪಟ್ಟಿದ್ದಾರೆ. ರಿಷಿ ಅವರು ನಾರಾಯಣಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯನ್ನು 2009ರಲ್ಲಿ ವರಿಸಿದ್ದರು.

ಐರೋಪ್ಯ ಒಕ್ಕೂಟದಿಂದ ಹೊರಬಂದಿರುವ ಬ್ರಿಟನ್‌ ಆರ್ಥಿಕ ವ್ಯವಸ್ಥೆಯನ್ನು ನಿಭಾಯಿಸುವ ಸವಾಲು ರಿಷಿ ಮುಂದಿದೆ. ಬ್ರಿಟನ್‌ ಸರಕಾರದ್ದು 2.7 ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯಾಗಿದ್ದು, ಹೊಸ ವಾಣಿಜ್ಯ ಒಪ್ಪಂದಗಳ ಮೂಲಕ ಜಗತ್ತಿನ ವಿವಿಧ ದೇಶಗಳೊಂದಿಗೆ ಬ್ರಿಟನನ್ನು ಬೆಸೆಯುವ ಮಹತ್ತರ ಹೊಣೆಗಾರಿಕೆ ಇವರ ಮೇಲಿದೆ.

1980ರಲ್ಲಿ ಜನನ
40 ವರ್ಷದ ರಿಷಿ ಸುನಾಕ್‌ 1980ರಲ್ಲಿ ಹ್ಯಾಂಪ್‌ ಶೈನ್‌ ಸೌಥಾಂಪ್ಟನ್‌ನಲ್ಲಿ ಜನಿಸಿದವರು. ರಿಷಿ ಕುಟುಂಬಸ್ಥರು ಮೂಲತಃ ಪಂಜಾಬ್‌ನವರು. ರಿಷಿ ಅವರ ಅಜ್ಜ ಅರುವತ್ತರ ದಶಕದಲ್ಲಿ ಪೂರ್ವ ಆಫ್ರಿಕಾದಿಂದ ಬ್ರಿಟನ್‌ಗೆ ವಲಸೆ ಹೋಗಿದ್ದರು. ಆ ಬಳಿಕ ಅವರ ಕುಟುಂಬ ಅಲ್ಲೇ ನೆಲೆಸಿದೆ. ರಿಷಿ ತಂದೆ ಯಶ ವೀರ್‌ ವೃತ್ತಿಯಲ್ಲಿ ವೈದ್ಯರು. ತಾಯಿ ಉಷಾ ಔಷಧ ವ್ಯಾಪಾರ ಮಾಡುತ್ತಿದ್ದಾರೆ. ಆಕÕ…ಫ‌ರ್ಡ್‌ನ ಲಿಂಕನ್‌ ಕಾಲೇಜಿನಲ್ಲಿ ರಾಜಕೀಯ, ಆರ್ಥಶಾಸ್ತ್ರ ಮತ್ತು ತತ್ವಶಾಸ್ತ್ರವನ್ನು ಅಧ್ಯಯನ ಮಾಡಿದ ರಿಷಿ, ಸ್ಟಾನ್‌ಫೋರ್ಡ್‌ ವಿ.ವಿ.ಯಲ್ಲಿ ಎಂಬಿಎ ಪದವಿ ಪಡೆದುಕೊಂಡಿದ್ದಾರೆ.

ರಾಜಕೀಯದಲ್ಲಿ
2015ರ ಸಾರ್ವತ್ರಿಕ ಚುನಾವಣೆಗೆ ಕನ್ಸರ್ವೇ ಟಿವ್‌ ಪಕ್ಷದಿಂದ ಉತ್ತರ ಯಾರ್ಕ್‌ಶೈರ್‌ನ ರಿಚ¾ಂಡ್‌ ಕ್ಷೇತ್ರದಿಂದ ಸ್ಪರ್ಧಿಸಿ ರಿಷಿ ರಾಜಕೀಯ ಕ್ಷೇತ್ರ ಪ್ರವೇಶಿಸಿದರು. ಮೊದಲ ಯತ್ನದಲ್ಲಿಯೇ ಜಯ ಭೇರಿ ಬಾರಿಸಿ ಸಂಸತ್‌ನ ಪರಿಸರ, ಆಹಾರ ಮತ್ತು ಗ್ರಾಮೀಣ ವ್ಯವಹಾರಗಳ ಆಯ್ಕೆ ಸಮಿತಿ ಸದಸ್ಯ ರಾಗಿ 2 ವರ್ಷ ಕೆಲಸ ಮಾಡಿದರು.

ಭಗವದ್ಗೀತೆ ಹೆಸರಲ್ಲಿ ಪ್ರಮಾಣ
ಐರೋಪ್ಯ ಒಕ್ಕೂಟದಿಂದ ಬ್ರಿಟನ್‌ ಬೇರ್ಪಡುವ ಬ್ರೆಕ್ಸಿಟ್‌ ಒಪ್ಪಂದಕ್ಕೆ ರಿಷಿ ಸುನಾಕ್‌ ಬೆಂಬಲ ನೀಡಿದರು. ಬ್ರೆಕ್ಸಿಟ್‌ ವಿಚಾರಕ್ಕೆ ಸಂಬಂಧಿಸಿ 2017ರಲ್ಲಿ ಬ್ರಿಟನ್‌ನಲ್ಲಿ ಅವಧಿಗೆ ಮುನ್ನವೇ ಸಾರ್ವತ್ರಿಕ ಚುನಾವಣೆ ನಡೆಯಿತು. ರಿಷಿ ಈ ಚುನಾವಣೆಯಲ್ಲಿ ಮತ್ತಷ್ಟು ಹೆಚ್ಚು ಮತಗಳ ಅಂತರದಿಂದ ಪುನರಾಯ್ಕೆಯಾದರು. ಆಗ ಅವರು ಭಗವದ್ಗೀತೆಯ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಗಮನ ಸೆಳೆದಿದ್ದರು.

ಬ್ರಿಟನ್‌ ಪ್ರಧಾನಿ ಜತೆ
ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರ ಆಪ್ತ ಸಹಾಯಕರಾಗಿದ್ದ ರಿಷಿ ಸುನಾಕ್‌ ನಾನಾ ವಿಭಾಗಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಟ್ರೆಷರಿ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿ, ಬ್ರಿಟನ್‌ ದೇಶದ ರಾಣಿಯ ಮಹಾ ಮಂಡಳಿಯ (ಪ್ರೈವಿ ಕೌನ್ಸಿಲ…) ಸದಸ್ಯರಾಗಿದ್ದರು. ಪ್ರೈವಿ ಕೌನ್ಸಿಲ್‌ ಎಂಬುದು ಬ್ರಿಟನ್‌ನ ಅತ್ಯುಚ್ಚ ಮಂಡಳಿ.

ಈ ಹಿಂದೆ ಕರ್ನಾಟಕದ ಕಲಬುರಗಿ ಮೂಲದ ನೀರಜ್‌ ಪಾಟೀಲ್‌ ಲಂಡನ್‌ನಲ್ಲಿ ವೈದ್ಯರಾಗಿದ್ದು, 2010ರಿಂದ 2011ರ ವರೆಗೆ ಅಲ್ಲಿನ ಮೇಯರ್‌ ಆಗಿ ಕಾರ್ಯ ನಿರ್ವಹಿಸಿದ್ದರು.

15 ಭಾರತೀಯ ಸಂಸದರು
ಬ್ರಿಟನ್‌ ಸಂಸತ್‌ನಲ್ಲಿ ಭಾರತ ಮೂಲದ ವ್ಯಕ್ತಿಗಳು ವಿವಿಧ ರಾಜಕೀಯ ಪಕ್ಷಗಳಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದೇ ಮೊದಲು?
ಕರ್ನಾಟಕದೊಂದಿಗೆ ಸಂಬಂಧ ಹೊಂದಿರುವವರು ಬ್ರಿಟಿಷ್‌ ಸರಕಾರದಲ್ಲಿ ಸಚಿವ ಸ್ಥಾನ ಪಡೆದಿದ್ದಾರೆಯೇ ಎಂಬ ಮಾಹಿತಿ ಹುಡುಕಿದರೂ ಬೇರೊಂದು ಉದಾಹರಣೆ ಸಿಕ್ಕಿಲ್ಲ. ಹಾಗಾಗಿ ಇದೇ ಮೊದಲ ಬಾರಿಗೆ ರಾಜ್ಯದ ಅಳಿಯ ಈ ಉನ್ನತ ಸ್ಥಾನಕ್ಕೇರಿದಂತಾಗಿದೆ. ರಿಷಿ ಸಾಧನೆಗೆ ದೇಶದೆಲ್ಲೆಡೆಯಿಂದ ಅಭಿನಂದನೆಯ ಮಹಾಪೂರ ಹರಿದು ಬಂದಿದೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.